Homeಕರ್ನಾಟಕಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಈ ಮಧ್ಯೆ ಸಚಿವ ಸಿ.ಟಿ. ರವಿ, "ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಬೆಳಗಾವಿ ಜಿಲ್ಲೆಯ ಪಿರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಬುಧವಾರ ತಡರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಿದ್ದು ಶುಕ್ರವಾರ ಬೆಳಿಗ್ಗೆ ಉದ್ವಿಗ್ನಗೊಂಡು, ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.

ಇಲ್ಲಿ ಪ್ರತಿಮೆ ಸ್ಥಾಪನೆಯ ನಂತರ ಕೆರಳಿದ ಜನಸಮೂಹವೊಂದು ಧಾವಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪಟ್ಟು ಹಿಡಿದಿತ್ತು.

ಶುಕ್ರವಾರ ಮುಂಜಾನೆ ಪೀರನ‌ವಾಡಿ ವೃತ್ತದಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ನಿಯಂತ್ರಣಕ್ಕೆ ತರುವ ಪೋಲಿಸರ ಪ್ರಯತ್ನಗಳಿಗೆ ತೊಡಕಾಯಿತು.

ನೆರೆದಿದ್ದ ಸಮೂಹ ‘ಜೈ ಭವಾನಿ, ಜೈ ಶಿವಾಜಿ’ ಎಂದು ಘೋಷಣೆಗಳನ್ನು ಕೂಗಿ, ರಾಯಣ್ಣನ ಪ್ರತಿಮೆಯನ್ನು ವೃತ್ತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದೆ.

ವೃತ್ತಕ್ಕೆ ಶಿವಾಜಿ ಹೆಸರಿದೆ, ಶಿವಾಜಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನೋಡಿದರೆ ಪ್ರಯಾಣಿಕರಿಗೆ ಗೊಂದಲವಾಗುತ್ತದೆ ಎಂದು ಮರಾಠಿಗರು ವಾದಿಸಿದ್ದಾರೆ.

ಪ್ರತಿಮೆಯನ್ನು ಅನುಮತಿಯಿಲ್ಲದೆ ಸ್ಥಾಪಿಸಲಾಗಿದೆ. ಹಾಗಾಗಿ ಕಾನೂನುಬದ್ಧವಾಗಿ ವ್ಯವಹರಿಸಲಾಗುವುದು. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಇದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಟ್ವಿಟರ್ ನಲ್ಲಿಯೂ ಈ ಚರ್ಚೆ ಟ್ರೆಂಡಿಂಗ್ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, “ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, “ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ” ಎಂದಿದ್ದಾರೆ.

“ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೀರನವಾಡಿಯಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, “ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ” ಎಂದು ಸೂಚನೆ ನೀಡಿದ್ದಾರೆ.

ಈ ವಿವಾದ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, “ನಾನು ಬೆಳಗಾವಿ ಡಿಸಿ ಮತ್ತು ಎಸ್ಪಿ ಜೊತೆ ಮಾತನಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಇಬ್ಬರೂ ದೇಶಭಕ್ತರು. ಅವರ ಗೌರವ ಕಾಪಾಡುವ ಕೆಲಸ ಮಾಡುತ್ತೇವೆ. ಎರಡೂ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿಂದ ಎಡಿಜಿಪಿ ಸ್ಥಳಕ್ಕೆ ಹೋಗುತ್ತಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಈ ಮಧ್ಯೆ ಕನ್ನಡ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, “ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು” ಎಂದು ಪ್ರಶ್ನಿಸಿದ್ದಾಗಿ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ಹೋರಾಟವನ್ನು ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಗೆ ಹೊಲಿಸಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕೂ ಇಲ್ಲವೇ? ಎಂದು ಶೃತಿ ಎಂಬುವವರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಎಂಬುವವರು ಟ್ವೀಟ್ ಮಾಡಿ ರಾಜಕಾರಣಿಗಳು ಮರಾಠಿಗರ ಓಲೈಕೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.


ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...