Homeಕರ್ನಾಟಕಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಈ ಮಧ್ಯೆ ಸಚಿವ ಸಿ.ಟಿ. ರವಿ, "ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಬೆಳಗಾವಿ ಜಿಲ್ಲೆಯ ಪಿರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಬುಧವಾರ ತಡರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಿದ್ದು ಶುಕ್ರವಾರ ಬೆಳಿಗ್ಗೆ ಉದ್ವಿಗ್ನಗೊಂಡು, ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.

ಇಲ್ಲಿ ಪ್ರತಿಮೆ ಸ್ಥಾಪನೆಯ ನಂತರ ಕೆರಳಿದ ಜನಸಮೂಹವೊಂದು ಧಾವಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪಟ್ಟು ಹಿಡಿದಿತ್ತು.

ಶುಕ್ರವಾರ ಮುಂಜಾನೆ ಪೀರನ‌ವಾಡಿ ವೃತ್ತದಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ನಿಯಂತ್ರಣಕ್ಕೆ ತರುವ ಪೋಲಿಸರ ಪ್ರಯತ್ನಗಳಿಗೆ ತೊಡಕಾಯಿತು.

ನೆರೆದಿದ್ದ ಸಮೂಹ ‘ಜೈ ಭವಾನಿ, ಜೈ ಶಿವಾಜಿ’ ಎಂದು ಘೋಷಣೆಗಳನ್ನು ಕೂಗಿ, ರಾಯಣ್ಣನ ಪ್ರತಿಮೆಯನ್ನು ವೃತ್ತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದೆ.

ವೃತ್ತಕ್ಕೆ ಶಿವಾಜಿ ಹೆಸರಿದೆ, ಶಿವಾಜಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನೋಡಿದರೆ ಪ್ರಯಾಣಿಕರಿಗೆ ಗೊಂದಲವಾಗುತ್ತದೆ ಎಂದು ಮರಾಠಿಗರು ವಾದಿಸಿದ್ದಾರೆ.

ಪ್ರತಿಮೆಯನ್ನು ಅನುಮತಿಯಿಲ್ಲದೆ ಸ್ಥಾಪಿಸಲಾಗಿದೆ. ಹಾಗಾಗಿ ಕಾನೂನುಬದ್ಧವಾಗಿ ವ್ಯವಹರಿಸಲಾಗುವುದು. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಇದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಟ್ವಿಟರ್ ನಲ್ಲಿಯೂ ಈ ಚರ್ಚೆ ಟ್ರೆಂಡಿಂಗ್ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, “ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, “ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ” ಎಂದಿದ್ದಾರೆ.

“ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೀರನವಾಡಿಯಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, “ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ” ಎಂದು ಸೂಚನೆ ನೀಡಿದ್ದಾರೆ.

ಈ ವಿವಾದ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, “ನಾನು ಬೆಳಗಾವಿ ಡಿಸಿ ಮತ್ತು ಎಸ್ಪಿ ಜೊತೆ ಮಾತನಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಇಬ್ಬರೂ ದೇಶಭಕ್ತರು. ಅವರ ಗೌರವ ಕಾಪಾಡುವ ಕೆಲಸ ಮಾಡುತ್ತೇವೆ. ಎರಡೂ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿಂದ ಎಡಿಜಿಪಿ ಸ್ಥಳಕ್ಕೆ ಹೋಗುತ್ತಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಈ ಮಧ್ಯೆ ಕನ್ನಡ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, “ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು” ಎಂದು ಪ್ರಶ್ನಿಸಿದ್ದಾಗಿ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ಹೋರಾಟವನ್ನು ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಗೆ ಹೊಲಿಸಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕೂ ಇಲ್ಲವೇ? ಎಂದು ಶೃತಿ ಎಂಬುವವರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಎಂಬುವವರು ಟ್ವೀಟ್ ಮಾಡಿ ರಾಜಕಾರಣಿಗಳು ಮರಾಠಿಗರ ಓಲೈಕೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.


ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...