Homeಕರ್ನಾಟಕಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಈ ಮಧ್ಯೆ ಸಚಿವ ಸಿ.ಟಿ. ರವಿ, "ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಬೆಳಗಾವಿ ಜಿಲ್ಲೆಯ ಪಿರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಬುಧವಾರ ತಡರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಿದ್ದು ಶುಕ್ರವಾರ ಬೆಳಿಗ್ಗೆ ಉದ್ವಿಗ್ನಗೊಂಡು, ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.

ಇಲ್ಲಿ ಪ್ರತಿಮೆ ಸ್ಥಾಪನೆಯ ನಂತರ ಕೆರಳಿದ ಜನಸಮೂಹವೊಂದು ಧಾವಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪಟ್ಟು ಹಿಡಿದಿತ್ತು.

ಶುಕ್ರವಾರ ಮುಂಜಾನೆ ಪೀರನ‌ವಾಡಿ ವೃತ್ತದಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ನಿಯಂತ್ರಣಕ್ಕೆ ತರುವ ಪೋಲಿಸರ ಪ್ರಯತ್ನಗಳಿಗೆ ತೊಡಕಾಯಿತು.

ನೆರೆದಿದ್ದ ಸಮೂಹ ‘ಜೈ ಭವಾನಿ, ಜೈ ಶಿವಾಜಿ’ ಎಂದು ಘೋಷಣೆಗಳನ್ನು ಕೂಗಿ, ರಾಯಣ್ಣನ ಪ್ರತಿಮೆಯನ್ನು ವೃತ್ತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದೆ.

ವೃತ್ತಕ್ಕೆ ಶಿವಾಜಿ ಹೆಸರಿದೆ, ಶಿವಾಜಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನೋಡಿದರೆ ಪ್ರಯಾಣಿಕರಿಗೆ ಗೊಂದಲವಾಗುತ್ತದೆ ಎಂದು ಮರಾಠಿಗರು ವಾದಿಸಿದ್ದಾರೆ.

ಪ್ರತಿಮೆಯನ್ನು ಅನುಮತಿಯಿಲ್ಲದೆ ಸ್ಥಾಪಿಸಲಾಗಿದೆ. ಹಾಗಾಗಿ ಕಾನೂನುಬದ್ಧವಾಗಿ ವ್ಯವಹರಿಸಲಾಗುವುದು. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಇದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಟ್ವಿಟರ್ ನಲ್ಲಿಯೂ ಈ ಚರ್ಚೆ ಟ್ರೆಂಡಿಂಗ್ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, “ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, “ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ” ಎಂದಿದ್ದಾರೆ.

“ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೀರನವಾಡಿಯಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, “ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ” ಎಂದು ಸೂಚನೆ ನೀಡಿದ್ದಾರೆ.

ಈ ವಿವಾದ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, “ನಾನು ಬೆಳಗಾವಿ ಡಿಸಿ ಮತ್ತು ಎಸ್ಪಿ ಜೊತೆ ಮಾತನಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಇಬ್ಬರೂ ದೇಶಭಕ್ತರು. ಅವರ ಗೌರವ ಕಾಪಾಡುವ ಕೆಲಸ ಮಾಡುತ್ತೇವೆ. ಎರಡೂ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿಂದ ಎಡಿಜಿಪಿ ಸ್ಥಳಕ್ಕೆ ಹೋಗುತ್ತಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಈ ಮಧ್ಯೆ ಕನ್ನಡ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, “ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು” ಎಂದು ಪ್ರಶ್ನಿಸಿದ್ದಾಗಿ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ಹೋರಾಟವನ್ನು ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಗೆ ಹೊಲಿಸಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕೂ ಇಲ್ಲವೇ? ಎಂದು ಶೃತಿ ಎಂಬುವವರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಎಂಬುವವರು ಟ್ವೀಟ್ ಮಾಡಿ ರಾಜಕಾರಣಿಗಳು ಮರಾಠಿಗರ ಓಲೈಕೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.


ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...