Homeಕರ್ನಾಟಕಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಸಂಗೊಳ್ಳಿ ರಾಯಣ್ಣ-ಶಿವಾಜಿ ಪ್ರತಿಮೆ ವಿವಾದ: ಕನ್ನಡಿಗರು, ಮರಾಠಿಗರ ನಡುವೆ ಘರ್ಷಣೆ

ಈ ಮಧ್ಯೆ ಸಚಿವ ಸಿ.ಟಿ. ರವಿ, "ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು" ಎಂದು ಪ್ರಶ್ನಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

- Advertisement -
- Advertisement -

ಬೆಳಗಾವಿ ಜಿಲ್ಲೆಯ ಪಿರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿ ಬುಧವಾರ ತಡರಾತ್ರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಅನಧಿಕೃತವಾಗಿ ಸ್ಥಾಪಿಸಿದ್ದು ಶುಕ್ರವಾರ ಬೆಳಿಗ್ಗೆ ಉದ್ವಿಗ್ನಗೊಂಡು, ಕನ್ನಡಿಗರು ಮತ್ತು ಮರಾಠಿಗರ ನಡುವೆ ಕಲಹಕ್ಕೆ ಕಾರಣವಾಗಿದೆ.

ಇಲ್ಲಿ ಪ್ರತಿಮೆ ಸ್ಥಾಪನೆಯ ನಂತರ ಕೆರಳಿದ ಜನಸಮೂಹವೊಂದು ಧಾವಿಸಿ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪಟ್ಟು ಹಿಡಿದಿತ್ತು.

ಶುಕ್ರವಾರ ಮುಂಜಾನೆ ಪೀರನ‌ವಾಡಿ ವೃತ್ತದಲ್ಲಿ ನೆರೆದಿದ್ದ ದೊಡ್ಡ ಜನಸಮೂಹವನ್ನು ನಿಯಂತ್ರಣಕ್ಕೆ ತರುವ ಪೋಲಿಸರ ಪ್ರಯತ್ನಗಳಿಗೆ ತೊಡಕಾಯಿತು.

ನೆರೆದಿದ್ದ ಸಮೂಹ ‘ಜೈ ಭವಾನಿ, ಜೈ ಶಿವಾಜಿ’ ಎಂದು ಘೋಷಣೆಗಳನ್ನು ಕೂಗಿ, ರಾಯಣ್ಣನ ಪ್ರತಿಮೆಯನ್ನು ವೃತ್ತದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿದೆ.

ವೃತ್ತಕ್ಕೆ ಶಿವಾಜಿ ಹೆಸರಿದೆ, ಶಿವಾಜಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನೋಡಿದರೆ ಪ್ರಯಾಣಿಕರಿಗೆ ಗೊಂದಲವಾಗುತ್ತದೆ ಎಂದು ಮರಾಠಿಗರು ವಾದಿಸಿದ್ದಾರೆ.

ಪ್ರತಿಮೆಯನ್ನು ಅನುಮತಿಯಿಲ್ಲದೆ ಸ್ಥಾಪಿಸಲಾಗಿದೆ. ಹಾಗಾಗಿ ಕಾನೂನುಬದ್ಧವಾಗಿ ವ್ಯವಹರಿಸಲಾಗುವುದು. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

ಇದನ್ನು ಖಂಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಗಳು ವ್ಯಾಪಕವಾಗಿ ನಡೆಯುತ್ತಿದೆ. ಟ್ವಿಟರ್ ನಲ್ಲಿಯೂ ಈ ಚರ್ಚೆ ಟ್ರೆಂಡಿಂಗ್ ಆಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, “ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು @BJP4Karnataka ಸರ್ಕಾರ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, “ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ” ಎಂದಿದ್ದಾರೆ.

“ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ” ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಪೀರನವಾಡಿಯಲ್ಲಿನ ಸದ್ಯದ ಪರಿಸ್ಥಿತಿ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದ ಸಿಎಂ ಯಡಿಯೂರಪ್ಪ, “ಅಹಿತಕರ ಘಟನೆಗೆ ಅವಕಾಶ ಕೊಡಬೇಡಿ. ಶಾಂತಿಯುತವಾಗಿ ಪರಿಸ್ಥಿತಿ ನಿಭಾಯಿಸಿ” ಎಂದು ಸೂಚನೆ ನೀಡಿದ್ದಾರೆ.

ಈ ವಿವಾದ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, “ನಾನು ಬೆಳಗಾವಿ ಡಿಸಿ ಮತ್ತು ಎಸ್ಪಿ ಜೊತೆ ಮಾತನಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಇಬ್ಬರೂ ದೇಶಭಕ್ತರು. ಅವರ ಗೌರವ ಕಾಪಾಡುವ ಕೆಲಸ ಮಾಡುತ್ತೇವೆ. ಎರಡೂ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಬೆಂಗಳೂರಿಂದ ಎಡಿಜಿಪಿ ಸ್ಥಳಕ್ಕೆ ಹೋಗುತ್ತಿದ್ದಾರೆ. ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಮಧ್ಯೆ ಈ ಮಧ್ಯೆ ಕನ್ನಡ, ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, “ಕನ್ನಡಿಗರಿಗೆ ಹೋರಾಟ ಮಾಡುವ ಅವಶ್ಯಕತೆ ಏನಿತ್ತು” ಎಂದು ಪ್ರಶ್ನಿಸಿದ್ದಾಗಿ ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಚಿವರ ವಿರುದ್ದ ಆಕ್ರೋಶ ವ್ಯಕ್ತವಾಗಿದೆ.

ಈ ಹೋರಾಟವನ್ನು ಬೆಂಗಳೂರಿನ ಡಿಜೆ.ಹಳ್ಳಿ ಗಲಭೆಗೆ ಹೊಲಿಸಿದ್ದಾರೆ. ನಮಗೆ ಹೋರಾಟ ಮಾಡುವ ಹಕ್ಕೂ ಇಲ್ಲವೇ? ಎಂದು ಶೃತಿ ಎಂಬುವವರು ಟ್ವಿಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶ್ವಿನಿ ಎಂಬುವವರು ಟ್ವೀಟ್ ಮಾಡಿ ರಾಜಕಾರಣಿಗಳು ಮರಾಠಿಗರ ಓಲೈಕೆ ಮಾಡುತ್ತಿರುವುದೇ ಇದಕ್ಕೆ ಕಾರಣ ಎಂದಿದ್ದಾರೆ.


ಇದನ್ನೂ ಓದಿ: ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...