Homeಅಂತರಾಷ್ಟ್ರೀಯಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

- Advertisement -
- Advertisement -

ಆಂಟಿಗುವಾದಿಂದ ನಾಪತ್ತೆಯಾಗಿ, ಡೊಮಿನಿಕಾದಲ್ಲಿ ಬಂಧನಕ್ಕೆ ಒಳಗಾಗಿದ್ದ ಪಿಎನ್‌ಬಿ ಸಾಲದ ವಂಚಕ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದಲೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಲ್ಲಿನ ಕೋರ್ಟ್ ತಡೆ ನೀಡಿದೆ.

“ಈ ಆದೇಶವನ್ನು ಪ್ರತಿವಾದಿಗಳಿಗೆ ಇಮೇಲ್, ಫ್ಯಾಕ್ಸ್ ಮೂಲಕ ವೈಯಕ್ತಿಕವಾಗಿ ತಕ್ಷಣವೇ ನೀಡಬೇಕು ಮತ್ತು ಡೌಗ್ಲಾಸ್ ಚಾರ್ಲ್ಸ್ ವಿಮಾನ ನಿಲ್ದಾಣದಲ್ಲಿನ ವಲಸೆ ಮುಖ್ಯಸ್ಥರಿಗೂ ಇಮೇಲ್ ಮತ್ತು ಫ್ಯಾಕ್ಸ್ ಮೂಲಕ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 28 ರಂದು ಸ್ಥಳೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ನಡೆಸಲಿದೆ. ಡೊಮಿನಿಕಾದ ಚೋಕ್ಸಿಯ ವಕೀಲ ವೇಯ್ನ್ ಮಾರ್ಷ್ ಈ ಹಿಂದೆ ತಮ್ಮ ಕಕ್ಷಿದಾರ ಚೋಕ್ಸಿಗೆ ಕಾನೂನು ಸಲಹೆ ಪಡೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಮೇ 27 ರಂದು ಮಾತ್ರ ಚೋಕ್ಸಿಯೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು ಎಂದು ಆರೋಪಿಸಿದ್ದರು.

ಇದನ್ನೂ ಓದಿ: ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

“ಅವರಿಗೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಕಣ್ಣುಗಳು ಊದಿಕೊಂಡಿದ್ದವು. ದೇಹದ ಮೇಲೆ ಹಲವಾರು ಸುಟ್ಟ ಗುರುತುಗಳಿರುವುದನ್ನು ನಾನು ಗಮನಿಸಿದ್ದೇನೆ. ಆಂಟಿಗುವಾದ ಜಾಲಿ ಹಾರ್ಬರ್‌ನಲ್ಲಿ ಅವನನ್ನು ಅಪಹರಿಸಿ ಡೊಮಿನಿಕಾಗೆ ಕರೆತರಲಾಗಿತ್ತು ಎಂದು ಅವರು ನನಗೆ ಹೇಳಿದ್ದಾರೆ. ಅವರು ಭಾರತೀಯ ಮೂಲದ ಆಂಟಿಗುವಾನ್ ಪೊಲೀಸ್ ಎಂದು ನಂಬಿದ್ದ ವ್ಯಕ್ತಿಗಳು ಅವರನ್ನು ಕರೆತಂದಿದ್ದರು” ಎಂದು ಮಾರ್ಷ್ ಎಎನ್‌ಐಗೆ ತಿಳಿಸಿದ್ದಾರೆ.

ಇದು “ನ್ಯಾಯದ ಅವಹೇಳನ” ಎಂದು ಹೇಳಿರುವ ವಕೀಲ ಮಾರ್ಷ್, ಇಡೀ ರಾಷ್ಟ್ರವು ಧ್ವನಿ ಎತ್ತಬೇಕಾದ ಅಗತ್ಯವಿದೆ. ಒಬ್ಬ ವಕೀಲನಾಗಿ ಚೋಕ್ಸಿಯನ್ನು ಶೋಷಣೆ ಮಾಡುವುದನ್ನು ತಡೆಯಲು ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪಂಜಾಬ್‌ ನ್ಯಾಷನಲ್‌‌ ಬ್ಯಾಂಕ್‌‌ನಿಂದ ಕೋಟ್ಯಾಂತರ ರೂ.ಗಳ ಹಣ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ಮೆಹುಲ್ ಚೋಕ್ಸಿ 2018 ರಲ್ಲಿ ಭಾರತದಿಂದ ಆಂಟಿಗುವಾಕ್ಕೆ ಪರಾರಿಯಾಗಿದ್ದರು. ಅವರು 2017 ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದ್ದರು. ಆಂಟಿಗುವಾದಿಂದ ಅವರು ಇತ್ತಿಚೆಗೆ ನಾಪತ್ತೆಯಾಗಿದ್ದರು. ಅದಕ್ಕಾಗಿ ಇಂಟರ್‌ಫೂಲ್‌ ಅವರ ಪತ್ತೆಗೆ ಯಲ್ಲೋ ನೋಟಿಸ್‌ ಜಾರಿ ಮಾಡಿತ್ತು. ಇದಾಗಿ ಅವರನ್ನು ಡೊಮಿನಿಕಾದಲ್ಲಿ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...