Homeಅಂತರಾಷ್ಟ್ರೀಯಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

- Advertisement -
- Advertisement -

ಆಂಟಿಗುವಾದಿಂದ ನಾಪತ್ತೆಯಾಗಿ, ಡೊಮಿನಿಕಾದಲ್ಲಿ ಬಂಧನಕ್ಕೆ ಒಳಗಾಗಿದ್ದ ಪಿಎನ್‌ಬಿ ಸಾಲದ ವಂಚಕ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದಲೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಲ್ಲಿನ ಕೋರ್ಟ್ ತಡೆ ನೀಡಿದೆ.

“ಈ ಆದೇಶವನ್ನು ಪ್ರತಿವಾದಿಗಳಿಗೆ ಇಮೇಲ್, ಫ್ಯಾಕ್ಸ್ ಮೂಲಕ ವೈಯಕ್ತಿಕವಾಗಿ ತಕ್ಷಣವೇ ನೀಡಬೇಕು ಮತ್ತು ಡೌಗ್ಲಾಸ್ ಚಾರ್ಲ್ಸ್ ವಿಮಾನ ನಿಲ್ದಾಣದಲ್ಲಿನ ವಲಸೆ ಮುಖ್ಯಸ್ಥರಿಗೂ ಇಮೇಲ್ ಮತ್ತು ಫ್ಯಾಕ್ಸ್ ಮೂಲಕ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 28 ರಂದು ಸ್ಥಳೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ನಡೆಸಲಿದೆ. ಡೊಮಿನಿಕಾದ ಚೋಕ್ಸಿಯ ವಕೀಲ ವೇಯ್ನ್ ಮಾರ್ಷ್ ಈ ಹಿಂದೆ ತಮ್ಮ ಕಕ್ಷಿದಾರ ಚೋಕ್ಸಿಗೆ ಕಾನೂನು ಸಲಹೆ ಪಡೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಮೇ 27 ರಂದು ಮಾತ್ರ ಚೋಕ್ಸಿಯೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು ಎಂದು ಆರೋಪಿಸಿದ್ದರು.

ಇದನ್ನೂ ಓದಿ: ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

“ಅವರಿಗೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಕಣ್ಣುಗಳು ಊದಿಕೊಂಡಿದ್ದವು. ದೇಹದ ಮೇಲೆ ಹಲವಾರು ಸುಟ್ಟ ಗುರುತುಗಳಿರುವುದನ್ನು ನಾನು ಗಮನಿಸಿದ್ದೇನೆ. ಆಂಟಿಗುವಾದ ಜಾಲಿ ಹಾರ್ಬರ್‌ನಲ್ಲಿ ಅವನನ್ನು ಅಪಹರಿಸಿ ಡೊಮಿನಿಕಾಗೆ ಕರೆತರಲಾಗಿತ್ತು ಎಂದು ಅವರು ನನಗೆ ಹೇಳಿದ್ದಾರೆ. ಅವರು ಭಾರತೀಯ ಮೂಲದ ಆಂಟಿಗುವಾನ್ ಪೊಲೀಸ್ ಎಂದು ನಂಬಿದ್ದ ವ್ಯಕ್ತಿಗಳು ಅವರನ್ನು ಕರೆತಂದಿದ್ದರು” ಎಂದು ಮಾರ್ಷ್ ಎಎನ್‌ಐಗೆ ತಿಳಿಸಿದ್ದಾರೆ.

ಇದು “ನ್ಯಾಯದ ಅವಹೇಳನ” ಎಂದು ಹೇಳಿರುವ ವಕೀಲ ಮಾರ್ಷ್, ಇಡೀ ರಾಷ್ಟ್ರವು ಧ್ವನಿ ಎತ್ತಬೇಕಾದ ಅಗತ್ಯವಿದೆ. ಒಬ್ಬ ವಕೀಲನಾಗಿ ಚೋಕ್ಸಿಯನ್ನು ಶೋಷಣೆ ಮಾಡುವುದನ್ನು ತಡೆಯಲು ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪಂಜಾಬ್‌ ನ್ಯಾಷನಲ್‌‌ ಬ್ಯಾಂಕ್‌‌ನಿಂದ ಕೋಟ್ಯಾಂತರ ರೂ.ಗಳ ಹಣ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ಮೆಹುಲ್ ಚೋಕ್ಸಿ 2018 ರಲ್ಲಿ ಭಾರತದಿಂದ ಆಂಟಿಗುವಾಕ್ಕೆ ಪರಾರಿಯಾಗಿದ್ದರು. ಅವರು 2017 ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದ್ದರು. ಆಂಟಿಗುವಾದಿಂದ ಅವರು ಇತ್ತಿಚೆಗೆ ನಾಪತ್ತೆಯಾಗಿದ್ದರು. ಅದಕ್ಕಾಗಿ ಇಂಟರ್‌ಫೂಲ್‌ ಅವರ ಪತ್ತೆಗೆ ಯಲ್ಲೋ ನೋಟಿಸ್‌ ಜಾರಿ ಮಾಡಿತ್ತು. ಇದಾಗಿ ಅವರನ್ನು ಡೊಮಿನಿಕಾದಲ್ಲಿ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...