Homeಅಂತರಾಷ್ಟ್ರೀಯಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

ಹಣ ವಂಚನೆ ಆರೋಪಿ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ತಡೆ

- Advertisement -
- Advertisement -

ಆಂಟಿಗುವಾದಿಂದ ನಾಪತ್ತೆಯಾಗಿ, ಡೊಮಿನಿಕಾದಲ್ಲಿ ಬಂಧನಕ್ಕೆ ಒಳಗಾಗಿದ್ದ ಪಿಎನ್‌ಬಿ ಸಾಲದ ವಂಚಕ ಮೆಹುಲ್ ಚೋಕ್ಸಿಯನ್ನು ಡೊಮಿನಿಕಾದಿಂದಲೆ ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಅಲ್ಲಿನ ಕೋರ್ಟ್ ತಡೆ ನೀಡಿದೆ.

“ಈ ಆದೇಶವನ್ನು ಪ್ರತಿವಾದಿಗಳಿಗೆ ಇಮೇಲ್, ಫ್ಯಾಕ್ಸ್ ಮೂಲಕ ವೈಯಕ್ತಿಕವಾಗಿ ತಕ್ಷಣವೇ ನೀಡಬೇಕು ಮತ್ತು ಡೌಗ್ಲಾಸ್ ಚಾರ್ಲ್ಸ್ ವಿಮಾನ ನಿಲ್ದಾಣದಲ್ಲಿನ ವಲಸೆ ಮುಖ್ಯಸ್ಥರಿಗೂ ಇಮೇಲ್ ಮತ್ತು ಫ್ಯಾಕ್ಸ್ ಮೂಲಕ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮೇ 28 ರಂದು ಸ್ಥಳೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ನಡೆಸಲಿದೆ. ಡೊಮಿನಿಕಾದ ಚೋಕ್ಸಿಯ ವಕೀಲ ವೇಯ್ನ್ ಮಾರ್ಷ್ ಈ ಹಿಂದೆ ತಮ್ಮ ಕಕ್ಷಿದಾರ ಚೋಕ್ಸಿಗೆ ಕಾನೂನು ಸಲಹೆ ಪಡೆಯುವ ಅವಕಾಶವನ್ನು ನಿರಾಕರಿಸಲಾಗಿದೆ. ಮೇ 27 ರಂದು ಮಾತ್ರ ಚೋಕ್ಸಿಯೊಂದಿಗೆ ಮಾತನಾಡಲು ಅವಕಾಶ ನೀಡಲಾಯಿತು ಎಂದು ಆರೋಪಿಸಿದ್ದರು.

ಇದನ್ನೂ ಓದಿ: ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

“ಅವರಿಗೆ ತೀವ್ರವಾಗಿ ಹಲ್ಲೆ ನಡೆಸಲಾಗಿದ್ದು, ಕಣ್ಣುಗಳು ಊದಿಕೊಂಡಿದ್ದವು. ದೇಹದ ಮೇಲೆ ಹಲವಾರು ಸುಟ್ಟ ಗುರುತುಗಳಿರುವುದನ್ನು ನಾನು ಗಮನಿಸಿದ್ದೇನೆ. ಆಂಟಿಗುವಾದ ಜಾಲಿ ಹಾರ್ಬರ್‌ನಲ್ಲಿ ಅವನನ್ನು ಅಪಹರಿಸಿ ಡೊಮಿನಿಕಾಗೆ ಕರೆತರಲಾಗಿತ್ತು ಎಂದು ಅವರು ನನಗೆ ಹೇಳಿದ್ದಾರೆ. ಅವರು ಭಾರತೀಯ ಮೂಲದ ಆಂಟಿಗುವಾನ್ ಪೊಲೀಸ್ ಎಂದು ನಂಬಿದ್ದ ವ್ಯಕ್ತಿಗಳು ಅವರನ್ನು ಕರೆತಂದಿದ್ದರು” ಎಂದು ಮಾರ್ಷ್ ಎಎನ್‌ಐಗೆ ತಿಳಿಸಿದ್ದಾರೆ.

ಇದು “ನ್ಯಾಯದ ಅವಹೇಳನ” ಎಂದು ಹೇಳಿರುವ ವಕೀಲ ಮಾರ್ಷ್, ಇಡೀ ರಾಷ್ಟ್ರವು ಧ್ವನಿ ಎತ್ತಬೇಕಾದ ಅಗತ್ಯವಿದೆ. ಒಬ್ಬ ವಕೀಲನಾಗಿ ಚೋಕ್ಸಿಯನ್ನು ಶೋಷಣೆ ಮಾಡುವುದನ್ನು ತಡೆಯಲು ಏನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದ್ದಾರೆ.

ಪಂಜಾಬ್‌ ನ್ಯಾಷನಲ್‌‌ ಬ್ಯಾಂಕ್‌‌ನಿಂದ ಕೋಟ್ಯಾಂತರ ರೂ.ಗಳ ಹಣ ವಂಚನೆ ಪ್ರಕರಣದಲ್ಲಿ ಸಿಲುಕಿದ್ದ ಮೆಹುಲ್ ಚೋಕ್ಸಿ 2018 ರಲ್ಲಿ ಭಾರತದಿಂದ ಆಂಟಿಗುವಾಕ್ಕೆ ಪರಾರಿಯಾಗಿದ್ದರು. ಅವರು 2017 ರಲ್ಲಿ ಆಂಟಿಗುವಾ ಮತ್ತು ಬಾರ್ಬುಡಾದ ಪೌರತ್ವ ಪಡೆದ್ದರು. ಆಂಟಿಗುವಾದಿಂದ ಅವರು ಇತ್ತಿಚೆಗೆ ನಾಪತ್ತೆಯಾಗಿದ್ದರು. ಅದಕ್ಕಾಗಿ ಇಂಟರ್‌ಫೂಲ್‌ ಅವರ ಪತ್ತೆಗೆ ಯಲ್ಲೋ ನೋಟಿಸ್‌ ಜಾರಿ ಮಾಡಿತ್ತು. ಇದಾಗಿ ಅವರನ್ನು ಡೊಮಿನಿಕಾದಲ್ಲಿ ಸೆರೆಹಿಡಿಯಲಾಗಿದೆ.

ಇದನ್ನೂ ಓದಿ: ’ಯಾರಿಂದಲೂ ನನ್ನ ಅರೆಸ್ಟ್ ಮಾಡಲು ಸಾಧ್ಯವಿಲ್ಲ’- ಬಾಬಾ ರಾಮ್‌ದೇವ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...