Homeಮುಖಪುಟ'ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

- Advertisement -
- Advertisement -

‘ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್’ ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ.

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಏಕಸದಸ್ಯ ಪೀಠ ಗುರುವಾರ (ಫೆ.26) ಚಿತ್ರದ ಬಿಡುಗಡೆಗೆ 15 ದಿನಗಳ ಮಧ್ಯಂತರ ತಡೆಯನ್ನು ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಪುಲ್ ಶಾ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ಕೋರಿದ್ದರು.

ಶುಕ್ರವಾರ (ಫೆ.27) ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಪಿ.ವಿ. ಬಾಲಕೃಷ್ಣನ್ ಅವರ ವಿಭಾಗೀಯ ಪೀಠ, ತಡೆಯಾಜ್ಞೆ ತೆರವುಗೊಳಿಸಿ ಚಿತ್ರದ ಬಿಡುಗಡೆ ಅವಕಾಶ ನೀಡಿದೆ.

“ಏಕಸದಸ್ಯ ಪೀಠದ ನ್ಯಾಯಾಧೀಶರು ಚಿತ್ರವನ್ನು ವೀಕ್ಷಿಸದೆಯೇ ಅದು ಬೀರಬಹುದಾದ ಪರಿಣಾಮಗಳ ಬಗ್ಗೆ ಹೇಗೆ ತೀರ್ಮಾನ ತೆಗೆದುಕೊಂಡರು? ಎಂದು ಮೇಲ್ಮನವಿ ವಿಚಾರಣೆಯ ವೇಳೆ ವಿಭಾಗೀಯ ಪೀಠ ಪ್ರಶ್ನಿಸಿದೆ. ಚಿತ್ರವನ್ನು ನೇರವಾಗಿ ನೋಡದೆ ಇಂತಹ ದೊಡ್ಡ ತೀರ್ಪು ನೀಡುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿದೆ. ಚಿತ್ರದ ವಿರುದ್ದ ಸಲ್ಲಿಕೆಯಾದ ಅರ್ಜಿಗಳು ವೈಯಕ್ತಿಕವೇ ಅಥವಾ ಸಾರ್ವಜನಿಕ ಹಿತಾಸಕ್ತಿಯದ್ದೇ (ಪಿಐಎಲ್)..ಅದನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು ಸರಿಯೇ? ಅಥವಾ ಹೈಕೋರ್ಟ್‌ನ ರೋಸ್ಟರ್ ನಿಯಮಗಳ ಪ್ರಕಾರ ವಿಭಾಗೀಯ ಪೀಠದ ಮುಂದೆ ಇಡಬೇಕಿತ್ತೇ?” ಎಂದು ಕೇಳಿದೆ.

ಚಿತ್ರದ ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್, ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣಪತ್ರ ಪಡೆದಿರುವ ಚಿತ್ರವನ್ನು ತಡೆಯುವುದು ಸರಿಯಲ್ಲ ಎಂದಿದ್ದಾರೆ.

ಲೈವ್ ಲಾ ವರದಿಯ ಪ್ರಕಾರ, ಒಮ್ಮೆ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕ ಮೇಲೆ, ಅತ್ಯಂತ ಅಪರೂಪದ ಅಥವಾ ಅಸಾಧಾರಣ ಸಂದರ್ಭಗಳನ್ನು ಹೊರತುಪಡಿಸಿ ಅದರ ಬಿಡುಗಡೆಗೆ ಅಡ್ಡಿಪಡಿಸಬಾರದು ಎಂಬ ನಿಯಮವನ್ನು ನ್ಯಾಯಾಲಯಗಳು ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿವೆ ಎಂದು ಅವರು ವಾದಿಸಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆಯಾಗಿ ಎರಡು ವಾರಗಳಿಗಿಂತ ಹೆಚ್ಚು ಸಮಯ ಕಳೆದ ನಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ವಿಳಂಬವನ್ನು ಸ್ವತಃ ಏಕಸದಸ್ಯ ಪೀಠವೇ ‘ಕೊನೆಯ ಕ್ಷಣದ’ ಧಾವಂತ ಎಂದು ಕರೆದಿದೆ. ಟೀಸರ್ ಬಿಡುಗಡೆಯಾದ ಈ 16 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆಯ ಧಕ್ಕೆ ಅಥವಾ ಅಹಿತಕರ ಘಟನೆಗಳು ವರದಿಯಾಗಿಲ್ಲ. ಇಷ್ಟು ದಿನಗಳ ಕಾಲ ಯಾವುದೇ ಸಮಸ್ಯೆ ಇಲ್ಲದಿರುವಾಗ, ಈಗ ಏಕಾಏಕಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತಹ ತುರ್ತು ಪರಿಸ್ಥಿತಿ ಏನಿದೆ? ಎಂದು ನಿರ್ಮಾಪಕರ ಪರ ವಕೀಲ ಕೌಲ್ ಪ್ರಶ್ನಿಸಿದ್ದಾರೆ.

ಚಿತ್ರವು ಸಮಾಜದ ಕೋಮು ಸೌಹಾರ್ದತೆಯನ್ನು ಕದಡುವ ಸಾಧ್ಯತೆಯಿದೆ ಎಂದು ಏಕಸದಸ್ಯ ಪೀಠ ನೀಡಿದ ತೀರ್ಪು, ಚಿತ್ರವನ್ನು ವೀಕ್ಷಿಸದೆಯೇ ಕೈಗೊಂಡ ನಿರ್ಧಾರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ಪೀಠ, ಇಂತಹ ಗಂಭೀರವಾದ ತೀರ್ಮಾನಗಳನ್ನು ಅಥವಾ ಆರೋಪಗಳನ್ನು ಮಾಡುವ ಮೊದಲು ಸಾಮಾನ್ಯವಾಗಿ ಚಿತ್ರದ ವಿಷಯವನ್ನು ನೇರವಾಗಿ ಪರಿಶೀಲಿಸುವುದು ಅಗತ್ಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಚಿತ್ರದ ವಿರುದ್ದ ಸಲ್ಲಿಕೆಯಾದ ಅರ್ಜಿಗಳನ್ನು ಏಕಸದಸ್ಯ ಪೀಠ ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಪ್ರಶ್ನೆ ಎತ್ತಿದ ನಿರ್ಮಾಪಕರ ಪರ ವಕೀಲರು, ಅರ್ಜಿಯು ಮೂಲಭೂತವಾಗಿ ಪಿಐಎಲ್‌ ರೂಪದಲ್ಲಿದೆ ಎಂದು ವಾದಿಸಿದ್ದಾರೆ. ಹೈಕೋರ್ಟ್‌ನ ರೋಸ್ಟರ್ ನಿಯಮಗಳ ಪ್ರಕಾರ, ಇಂತಹ ಸಾರ್ವಜನಿಕ ವಿಷಯದ ಅರ್ಜಿಗಳನ್ನು ಏಕ ಸದಸ್ಯ ಪೀಠದ ನ್ಯಾಯಾಧೀಶರು ವಿಚಾರಣೆ ನಡೆಸುವಂತಿಲ್ಲ; ಇವುಗಳನ್ನು ಇಬ್ಬರು ನ್ಯಾಯಾಧೀಶರಿರುವ ವಿಭಾಗೀಯ ಪೀಠವೇ ವಿಚಾರಣೆ ನಡೆಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಚಿತ್ರ ಬಿಡುಗಡೆಗೆ ಕೊನೆಯ ಕ್ಷಣದಲ್ಲಿ ನೀಡುವ ತಡೆಯಾಜ್ಞೆಗಳು ಚಿತ್ರರಂಗಕ್ಕೆ ಭಾರೀ ಆರ್ಥಿಕ ನಷ್ಟವನ್ನು ಉಂಟುಮಾಡುತ್ತವೆ. ಇದು ಕೇವಲ ಹಣದ ನಷ್ಟವಲ್ಲದೆ, ಆರ್ಥಿಕ ಹಾನಿಯ ಮೂಲಕ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತಾಗುತ್ತದೆ. ಚಿತ್ರವು ವಿಶ್ವಾದ್ಯಂತ ಸುಮಾರು 1,500 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈ ತಡೆಯಾಜ್ಞೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರದ ಪ್ರದರ್ಶನ ಸ್ಥಗಿತಗೊಂಡಿದೆ ಎಂದು ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.

ಈ ವಾದಗಳಿಗೆ ಉತ್ತರಿಸಿದ ಮೂಲ ಅರ್ಜಿದಾರರ ಪರ ವಕೀಲರಾದ ಮೈತ್ರೇಯಿ ಹೆಗ್ಡೆ ಅವರು, ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಪ್ರತಿಪಾದಿಸಿದ್ದಾರೆ. ತಾವು ವೈಯಕ್ತಿಕವಾಗಿ ಈ ಅರ್ಜಿಯನ್ನು ಸಲ್ಲಿಸಿರುವುದಾಗಿ ತಿಳಿಸಿದ ಅವರು, ಚಿತ್ರದಲ್ಲಿ ಕೇರಳವನ್ನು ಚಿತ್ರಿಸಿರುವ ರೀತಿ ಸಂವಿಧಾನದ 21ನೇ ವಿಧಿಯಡಿ ತನಗೆ ಇರುವ ಗೌರವದ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ವಾದಿಸಿದ್ದಾರೆ.

ಒಬ್ಬ ವ್ಯಕ್ತಿಯ ಗುರುತು ಅವನ ಹುಟ್ಟಿದ ಸ್ಥಳವನ್ನೂ ಒಳಗೊಂಡಿರುತ್ತದೆ. ಕೇರಳವನ್ನು ತಪ್ಪು ರೀತಿಯಲ್ಲಿ (ಉದಾಹರಣೆಗೆ ಮತಾಂತರದ ಕೇಂದ್ರವೆಂಬಂತೆ) ಚಿತ್ರಿಸುವುದು ಆ ರಾಜ್ಯದ ಜನರಿಗೆ ಮಾಡಿದ ಅವಮಾನವಾಗಿದೆ. ಏಕಸದಸ್ಯ ಪೀಠವು ಚಿತ್ರವನ್ನು ವೀಕ್ಷಿಸಲು ಸಿದ್ಧವಿತ್ತಾದರೂ, ನಿರ್ಮಾಪಕರು ಅದನ್ನು ಪ್ರದರ್ಶಿಸಲು ನಿರಾಕರಿಸಿದ್ದರು. ಒಂದು ವೇಳೆ ಚಿತ್ರವನ್ನು ನ್ಯಾಯಾಲಯಕ್ಕೆ ತೋರಿಸಿದ್ದರೆ ತೀರ್ಪು ಬೇರೆಯೇ ಇರುತ್ತಿತ್ತು ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ಗುರುತು ಅಥವಾ ಅಸ್ಮಿತೆಯು ಅವರು ಹುಟ್ಟಿದ ಸ್ಥಳವನ್ನೂ ಒಳಗೊಂಡಿರುತ್ತದೆ. ಆದ್ದರಿಂದ, ಕೇರಳವನ್ನು ಬಲವಂತದ ಅಥವಾ ಪ್ರೇಮದ ಹೆಸರಿನ ಮತಾಂತರಗಳ ಕೇಂದ್ರ ಎಂಬಂತೆ ಚಿತ್ರಿಸುವುದು ಆ ರಾಜ್ಯದ ಜನರಿಗೆ ಮಾಡಿದ ಅವಮಾನವಾಗಿದೆ. ತಾನು ಇಡೀ ಕೇರಳದ ಜನರ ಪರವಾಗಿ ಪ್ರತಿನಿಧಿಯಾಗಿ ಇಲ್ಲಿಗೆ ಬಂದಿಲ್ಲ, ಬದಲಿಗೆ ಒಬ್ಬ ವ್ಯಕ್ತಿಯಾಗಿ ರಾಜ್ಯಕ್ಕೆ ಆಗುತ್ತಿರುವ ಅವಹೇಳನದಿಂದ ತಮಗೆ ಉಂಟಾಗಿರುವ ವೈಯಕ್ತಿಕ ನೋವು ಮತ್ತು ಅಸಮಾಧಾನವನ್ನು ನ್ಯಾಯಾಲಯದ ಮುಂದೆ ಮಂಡಿಸುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಚಲನಚಿತ್ರ ಕಾಯ್ದೆಗೆ ತಿದ್ದುಪಡಿ ತಂದ ನಂತರ, ಮೇಲ್ಮನವಿ ಸಲ್ಲಿಸುವ ಅಥವಾ ಮರುಪರಿಶೀಲಿಸುವ ಅಧಿಕಾರಗಳ ಬಗ್ಗೆ ಅಸ್ಪಷ್ಟತೆ ಇರುವುದನ್ನು ಒಪ್ಪಿಕೊಂಡ ಮೈತ್ರೇಯಿ ಹೆಗ್ಡೆ, ಇಂತಹ ಅಸ್ಪಷ್ಟತೆಯ ನಡುವೆಯೂ, ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟಾದಾಗ ಹೈಕೋರ್ಟ್ ತನ್ನ ಅಸಾಧಾರಣ ಅಧಿಕಾರ ವ್ಯಾಪ್ತಿಯನ್ನು (ವಿಧಿ 226) ಬಳಸಬಹುದು ಎಂದು ವಾದಿಸಿದ್ದಾರೆ. ಅನ್ಯಾಯ ನಡೆದಾಗ ನ್ಯಾಯಾಲಯವು ಕೇವಲ ತಾಂತ್ರಿಕ ಕಾರಣಗಳಿಗಾಗಿ ಸುಮ್ಮನಿರಬಾರದು, ಬದಲಿಗೆ ಸಂವಿಧಾನವು ನೀಡಿರುವ ವಿಶೇಷ ಅಧಿಕಾರದ ಅಡಿಯಲ್ಲಿ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಕೆಲ ಹೊತ್ತು ಆದೇಶವನ್ನು ಕಾಯ್ದಿರಿಸಿತ್ತು. ಬಳಿಕ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...