Homeಮುಖಪುಟ'ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

- Advertisement -
- Advertisement -

‘ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್’ ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ.

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರ ಏಕಸದಸ್ಯ ಪೀಠ ಗುರುವಾರ (ಫೆ.26) ಚಿತ್ರದ ಬಿಡುಗಡೆಗೆ 15 ದಿನಗಳ ಮಧ್ಯಂತರ ತಡೆಯನ್ನು ನೀಡಿತ್ತು. ಇದನ್ನು ಪ್ರಶ್ನಿಸಿ ಚಿತ್ರದ ನಿರ್ಮಾಪಕ ವಿಪುಲ್ ಶಾ ಅವರು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ತುರ್ತು ವಿಚಾರಣೆ ಕೋರಿದ್ದರು.

ಶುಕ್ರವಾರ (ಫೆ.27) ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಮತ್ತು ಪಿ.ವಿ. ಬಾಲಕೃಷ್ಣನ್ ಅವರ ವಿಭಾಗೀಯ ಪೀಠ, ತಡೆಯಾಜ್ಞೆ ತೆರವುಗೊಳಿಸಿ ಚಿತ್ರದ ಬಿಡುಗಡೆ ಅವಕಾಶ ನೀಡಿದೆ.

“ಏಕಸದಸ್ಯ ಪೀಠದ ನ್ಯಾಯಾಧೀಶರು ಚಿತ್ರವನ್ನು ವೀಕ್ಷಿಸದೆಯೇ ಅದು ಬೀರಬಹುದಾದ ಪರಿಣಾಮಗಳ ಬಗ್ಗೆ ಹೇಗೆ ತೀರ್ಮಾನ ತೆಗೆದುಕೊಂಡರು? ಎಂದು ಮೇಲ್ಮನವಿ ವಿಚಾರಣೆಯ ವೇಳೆ ವಿಭಾಗೀಯ ಪೀಠ ಪ್ರಶ್ನಿಸಿದೆ. ಚಿತ್ರವನ್ನು ನೇರವಾಗಿ ನೋಡದೆ ಇಂತಹ ದೊಡ್ಡ ತೀರ್ಪು ನೀಡುವುದು ಸರಿಯಲ್ಲ ಎಂದು ಅದು ಅಭಿಪ್ರಾಯಪಟ್ಟಿದೆ. ಚಿತ್ರದ ವಿರುದ್ದ ಸಲ್ಲಿಕೆಯಾದ ಅರ್ಜಿಗಳು ವೈಯಕ್ತಿಕವೇ ಅಥವಾ ಸಾರ್ವಜನಿಕ ಹಿತಾಸಕ್ತಿಯದ್ದೇ (ಪಿಐಎಲ್)..ಅದನ್ನು ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು ಸರಿಯೇ? ಅಥವಾ ಹೈಕೋರ್ಟ್‌ನ ರೋಸ್ಟರ್ ನಿಯಮಗಳ ಪ್ರಕಾರ ವಿಭಾಗೀಯ ಪೀಠದ ಮುಂದೆ ಇಡಬೇಕಿತ್ತೇ?” ಎಂದು ಕೇಳಿದೆ.

ಚಿತ್ರದ ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ನೀರಜ್ ಕಿಶನ್ ಕೌಲ್, ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣಪತ್ರ ಪಡೆದಿರುವ ಚಿತ್ರವನ್ನು ತಡೆಯುವುದು ಸರಿಯಲ್ಲ ಎಂದಿದ್ದಾರೆ.

ಲೈವ್ ಲಾ ವರದಿಯ ಪ್ರಕಾರ, ಒಮ್ಮೆ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕ ಮೇಲೆ, ಅತ್ಯಂತ ಅಪರೂಪದ ಅಥವಾ ಅಸಾಧಾರಣ ಸಂದರ್ಭಗಳನ್ನು ಹೊರತುಪಡಿಸಿ ಅದರ ಬಿಡುಗಡೆಗೆ ಅಡ್ಡಿಪಡಿಸಬಾರದು ಎಂಬ ನಿಯಮವನ್ನು ನ್ಯಾಯಾಲಯಗಳು ಈ ಹಿಂದಿನಿಂದಲೂ ಪಾಲಿಸಿಕೊಂಡು ಬಂದಿವೆ ಎಂದು ಅವರು ವಾದಿಸಿದ್ದಾರೆ.

ಚಿತ್ರದ ಟೀಸರ್ ಬಿಡುಗಡೆಯಾಗಿ ಎರಡು ವಾರಗಳಿಗಿಂತ ಹೆಚ್ಚು ಸಮಯ ಕಳೆದ ನಂತರ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ವಿಳಂಬವನ್ನು ಸ್ವತಃ ಏಕಸದಸ್ಯ ಪೀಠವೇ ‘ಕೊನೆಯ ಕ್ಷಣದ’ ಧಾವಂತ ಎಂದು ಕರೆದಿದೆ. ಟೀಸರ್ ಬಿಡುಗಡೆಯಾದ ಈ 16 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಯಾವುದೇ ಕಾನೂನು ಸುವ್ಯವಸ್ಥೆಯ ಧಕ್ಕೆ ಅಥವಾ ಅಹಿತಕರ ಘಟನೆಗಳು ವರದಿಯಾಗಿಲ್ಲ. ಇಷ್ಟು ದಿನಗಳ ಕಾಲ ಯಾವುದೇ ಸಮಸ್ಯೆ ಇಲ್ಲದಿರುವಾಗ, ಈಗ ಏಕಾಏಕಿ ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡುವಂತಹ ತುರ್ತು ಪರಿಸ್ಥಿತಿ ಏನಿದೆ? ಎಂದು ನಿರ್ಮಾಪಕರ ಪರ ವಕೀಲ ಕೌಲ್ ಪ್ರಶ್ನಿಸಿದ್ದಾರೆ.

ಚಿತ್ರವು ಸಮಾಜದ ಕೋಮು ಸೌಹಾರ್ದತೆಯನ್ನು ಕದಡುವ ಸಾಧ್ಯತೆಯಿದೆ ಎಂದು ಏಕಸದಸ್ಯ ಪೀಠ ನೀಡಿದ ತೀರ್ಪು, ಚಿತ್ರವನ್ನು ವೀಕ್ಷಿಸದೆಯೇ ಕೈಗೊಂಡ ನಿರ್ಧಾರವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ಪೀಠ, ಇಂತಹ ಗಂಭೀರವಾದ ತೀರ್ಮಾನಗಳನ್ನು ಅಥವಾ ಆರೋಪಗಳನ್ನು ಮಾಡುವ ಮೊದಲು ಸಾಮಾನ್ಯವಾಗಿ ಚಿತ್ರದ ವಿಷಯವನ್ನು ನೇರವಾಗಿ ಪರಿಶೀಲಿಸುವುದು ಅಗತ್ಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಚಿತ್ರದ ವಿರುದ್ದ ಸಲ್ಲಿಕೆಯಾದ ಅರ್ಜಿಗಳನ್ನು ಏಕಸದಸ್ಯ ಪೀಠ ವಿಚಾರಣೆಗೆ ತೆಗೆದುಕೊಳ್ಳಲು ಸಾಧ್ಯವೇ ಎಂಬ ಬಗ್ಗೆ ಪ್ರಶ್ನೆ ಎತ್ತಿದ ನಿರ್ಮಾಪಕರ ಪರ ವಕೀಲರು, ಅರ್ಜಿಯು ಮೂಲಭೂತವಾಗಿ ಪಿಐಎಲ್‌ ರೂಪದಲ್ಲಿದೆ ಎಂದು ವಾದಿಸಿದ್ದಾರೆ. ಹೈಕೋರ್ಟ್‌ನ ರೋಸ್ಟರ್ ನಿಯಮಗಳ ಪ್ರಕಾರ, ಇಂತಹ ಸಾರ್ವಜನಿಕ ವಿಷಯದ ಅರ್ಜಿಗಳನ್ನು ಏಕ ಸದಸ್ಯ ಪೀಠದ ನ್ಯಾಯಾಧೀಶರು ವಿಚಾರಣೆ ನಡೆಸುವಂತಿಲ್ಲ; ಇವುಗಳನ್ನು ಇಬ್ಬರು ನ್ಯಾಯಾಧೀಶರಿರುವ ವಿಭಾಗೀಯ ಪೀಠವೇ ವಿಚಾರಣೆ ನಡೆಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಚಿತ್ರ ಬಿಡುಗಡೆಗೆ ಕೊನೆಯ ಕ್ಷಣದಲ್ಲಿ ನೀಡುವ ತಡೆಯಾಜ್ಞೆಗಳು ಚಿತ್ರರಂಗಕ್ಕೆ ಭಾರೀ ಆರ್ಥಿಕ ನಷ್ಟವನ್ನು ಉಂಟುಮಾಡುತ್ತವೆ. ಇದು ಕೇವಲ ಹಣದ ನಷ್ಟವಲ್ಲದೆ, ಆರ್ಥಿಕ ಹಾನಿಯ ಮೂಲಕ ವ್ಯಕ್ತಿಯ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತಾಗುತ್ತದೆ. ಚಿತ್ರವು ವಿಶ್ವಾದ್ಯಂತ ಸುಮಾರು 1,500 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈ ತಡೆಯಾಜ್ಞೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಚಿತ್ರದ ಪ್ರದರ್ಶನ ಸ್ಥಗಿತಗೊಂಡಿದೆ ಎಂದು ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ.

ಈ ವಾದಗಳಿಗೆ ಉತ್ತರಿಸಿದ ಮೂಲ ಅರ್ಜಿದಾರರ ಪರ ವಕೀಲರಾದ ಮೈತ್ರೇಯಿ ಹೆಗ್ಡೆ ಅವರು, ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಪ್ರತಿಪಾದಿಸಿದ್ದಾರೆ. ತಾವು ವೈಯಕ್ತಿಕವಾಗಿ ಈ ಅರ್ಜಿಯನ್ನು ಸಲ್ಲಿಸಿರುವುದಾಗಿ ತಿಳಿಸಿದ ಅವರು, ಚಿತ್ರದಲ್ಲಿ ಕೇರಳವನ್ನು ಚಿತ್ರಿಸಿರುವ ರೀತಿ ಸಂವಿಧಾನದ 21ನೇ ವಿಧಿಯಡಿ ತನಗೆ ಇರುವ ಗೌರವದ ಮೂಲಭೂತ ಹಕ್ಕಿಗೆ ಧಕ್ಕೆ ತರುತ್ತದೆ ಎಂದು ವಾದಿಸಿದ್ದಾರೆ.

ಒಬ್ಬ ವ್ಯಕ್ತಿಯ ಗುರುತು ಅವನ ಹುಟ್ಟಿದ ಸ್ಥಳವನ್ನೂ ಒಳಗೊಂಡಿರುತ್ತದೆ. ಕೇರಳವನ್ನು ತಪ್ಪು ರೀತಿಯಲ್ಲಿ (ಉದಾಹರಣೆಗೆ ಮತಾಂತರದ ಕೇಂದ್ರವೆಂಬಂತೆ) ಚಿತ್ರಿಸುವುದು ಆ ರಾಜ್ಯದ ಜನರಿಗೆ ಮಾಡಿದ ಅವಮಾನವಾಗಿದೆ. ಏಕಸದಸ್ಯ ಪೀಠವು ಚಿತ್ರವನ್ನು ವೀಕ್ಷಿಸಲು ಸಿದ್ಧವಿತ್ತಾದರೂ, ನಿರ್ಮಾಪಕರು ಅದನ್ನು ಪ್ರದರ್ಶಿಸಲು ನಿರಾಕರಿಸಿದ್ದರು. ಒಂದು ವೇಳೆ ಚಿತ್ರವನ್ನು ನ್ಯಾಯಾಲಯಕ್ಕೆ ತೋರಿಸಿದ್ದರೆ ತೀರ್ಪು ಬೇರೆಯೇ ಇರುತ್ತಿತ್ತು ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿಯ ಗುರುತು ಅಥವಾ ಅಸ್ಮಿತೆಯು ಅವರು ಹುಟ್ಟಿದ ಸ್ಥಳವನ್ನೂ ಒಳಗೊಂಡಿರುತ್ತದೆ. ಆದ್ದರಿಂದ, ಕೇರಳವನ್ನು ಬಲವಂತದ ಅಥವಾ ಪ್ರೇಮದ ಹೆಸರಿನ ಮತಾಂತರಗಳ ಕೇಂದ್ರ ಎಂಬಂತೆ ಚಿತ್ರಿಸುವುದು ಆ ರಾಜ್ಯದ ಜನರಿಗೆ ಮಾಡಿದ ಅವಮಾನವಾಗಿದೆ. ತಾನು ಇಡೀ ಕೇರಳದ ಜನರ ಪರವಾಗಿ ಪ್ರತಿನಿಧಿಯಾಗಿ ಇಲ್ಲಿಗೆ ಬಂದಿಲ್ಲ, ಬದಲಿಗೆ ಒಬ್ಬ ವ್ಯಕ್ತಿಯಾಗಿ ರಾಜ್ಯಕ್ಕೆ ಆಗುತ್ತಿರುವ ಅವಹೇಳನದಿಂದ ತಮಗೆ ಉಂಟಾಗಿರುವ ವೈಯಕ್ತಿಕ ನೋವು ಮತ್ತು ಅಸಮಾಧಾನವನ್ನು ನ್ಯಾಯಾಲಯದ ಮುಂದೆ ಮಂಡಿಸುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಚಲನಚಿತ್ರ ಕಾಯ್ದೆಗೆ ತಿದ್ದುಪಡಿ ತಂದ ನಂತರ, ಮೇಲ್ಮನವಿ ಸಲ್ಲಿಸುವ ಅಥವಾ ಮರುಪರಿಶೀಲಿಸುವ ಅಧಿಕಾರಗಳ ಬಗ್ಗೆ ಅಸ್ಪಷ್ಟತೆ ಇರುವುದನ್ನು ಒಪ್ಪಿಕೊಂಡ ಮೈತ್ರೇಯಿ ಹೆಗ್ಡೆ, ಇಂತಹ ಅಸ್ಪಷ್ಟತೆಯ ನಡುವೆಯೂ, ಮೂಲಭೂತ ಹಕ್ಕುಗಳಿಗೆ ಧಕ್ಕೆ ಉಂಟಾದಾಗ ಹೈಕೋರ್ಟ್ ತನ್ನ ಅಸಾಧಾರಣ ಅಧಿಕಾರ ವ್ಯಾಪ್ತಿಯನ್ನು (ವಿಧಿ 226) ಬಳಸಬಹುದು ಎಂದು ವಾದಿಸಿದ್ದಾರೆ. ಅನ್ಯಾಯ ನಡೆದಾಗ ನ್ಯಾಯಾಲಯವು ಕೇವಲ ತಾಂತ್ರಿಕ ಕಾರಣಗಳಿಗಾಗಿ ಸುಮ್ಮನಿರಬಾರದು, ಬದಲಿಗೆ ಸಂವಿಧಾನವು ನೀಡಿರುವ ವಿಶೇಷ ಅಧಿಕಾರದ ಅಡಿಯಲ್ಲಿ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕು ಎಂದಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯ ಕೆಲ ಹೊತ್ತು ಆದೇಶವನ್ನು ಕಾಯ್ದಿರಿಸಿತ್ತು. ಬಳಿಕ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...