Homeಮುಖಪುಟಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

ಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

- Advertisement -
- Advertisement -

ಕೇರಳದ ಕೋಳಿಕ್ಕೋಡ್‌ನ ಬಲುಸ್ಸೆರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯು (ಜಿಎಚ್‌ಎಸ್‌ಎಸ್) ಲಿಂಗ ಸಮಾನತೆಯತ್ತ ಹೆಜ್ಜೆ ಹಾಕಿದ್ದು, ತನ್ನ 11 ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರ ಲಿಂಗ-ತಟಸ್ಥ (ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ) ಸಮವಸ್ತ್ರವನ್ನು ಅಳವಡಿಸಿಕೊಂಡು ಗಮನ ಸೆಳೆದಿದೆ.

ಬಲುಸ್ಸೆರಿಯ ಶಾಲೆಯಲ್ಲಿ 11 ನೇ ತರಗತಿಯ 200 ಹುಡುಗಿಯರು ಮತ್ತು 60 ಹುಡುಗರು ನೀಲಿ ಪ್ಯಾಂಟ್ ಮತ್ತು ಗೆರೆಗಳುಳ್ಳ ಬಿಳಿ ಶರ್ಟ್‌ ಅನ್ನು ಇನ್ನು ಮುಂದೆ ಹೊಸ ಡ್ರೆಸ್ ಕೋಡ್ ಆಗಿ ಬಳಸಲಿದ್ದಾರೆ.

ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನವಾದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಲು ಪರಿಚಯಿಸಲಾದ ಹೊಸ ಸಮವಸ್ತ್ರವನ್ನು ಧರಿಸಲು ಶಾಲೆಯ ಯಾವುದೇ ವಿದ್ಯಾರ್ಥಿಗಳಿಗೆ ಒತ್ತಾಯಿಸುವುದಿಲ್ಲ. ವಿದ್ಯಾರ್ಥಿಗಳು ಮುಸುಕು ಅಥವಾ ಸ್ಕಾರ್ಫ್ ಬಳಸಲು ಮುಕ್ತರಾಗಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕರು ತಿಳಿಸಿದ್ದಾರೆ.

ಸರ್ಕಾರಿ ವಲಯದ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಬಾಲಕಿಯರು ಮತ್ತು ಬಾಲಕಿಯರಿಗೆ ಸಾಮಾನ್ಯ ಸಮವಸ್ತ್ರವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಇತರೆಡೆಗಳಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವರ್ಗಗಳ ಕೆಲವು ಶಾಲೆಗಳು ಸಹ ಈ ಹಿಂದೆ ಈ ರೀತಿಯ ಸಮವಸ್ತ್ರ ನೀತಿ ಅಳವಡಿಸಿಕೊಂಡಿವೆ.

ಲಿಂಗ-ತಟಸ್ಥ ಸಮವಸ್ತ್ರವನ್ನು ಜಾರಿಗೆ ತರುವುದಾಗಿ ಘೋಷಿಸಿದ ಉನ್ನತ ಶಿಕ್ಷಣ ಸಚಿವೆ ಪ್ರೊ.ಆರ್.ಬಿಂದು ಮಾತನಾಡಿ, “ಸಮಾಜದಲ್ಲಿನ ಪ್ರಗತಿಪರ ಬದಲಾವಣೆಗಳನ್ನು ಸಂಪ್ರದಾಯವಾದಿಗಳು ವಿರೋಧಿಸುವುದು ಸಹಜ. ಲಿಂಗ-ತಟಸ್ಥ ಸಮವಸ್ತ್ರವು ಗಂಡು ಮತ್ತು ಹೆಣ್ಣು ನಡುವಿನ ಪ್ರತ್ಯೇಕತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಎಲ್ಲಾ ಮಾನವರು ಒಂದೇ ದಿಕ್ಕಿನಲ್ಲಿ ಮುನ್ನಡೆಯಬೇಕು ಎಂಬ ಸಂದೇಶವನ್ನು ನೀಡುತ್ತದೆ. ಹುಡುಗರಿಗೆ ತಮ್ಮ ಡ್ರೆಸ್ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇದ್ದಾಗ ಹುಡುಗಿಯರಿಗೂ ಆ ಸ್ವಾತಂತ್ರ್ಯವಿರಬೇಕು. ಹೊಸ ಸಮವಸ್ತ್ರವು ಹುಡುಗಿಯರು ತಮ್ಮ ದೇಹದ ಬಗ್ಗೆ ಚಿಂತಿಸದೆ ಆತ್ಮವಿಶ್ವಾಸದಿಂದ ತಿರುಗಲು ಸಹಾಯ ಮಾಡುತ್ತದೆ. ಲಿಂಗ-ತಟಸ್ಥ ಸಮವಸ್ತ್ರವು ಉತ್ತಮ ಬದಲಾವಣೆಗಳತ್ತ ಒಂದು ಹೆಜ್ಜೆಯಾಗಿದೆ” ಎಂದು ಹೇಳಿದ್ದಾರೆ.

ಆದರೆ ಪೋಷಕರ ಜೊತೆ ಸಮರ್ಪಕ ಚರ್ಚೆ ನಡೆಸದೆ ಲಿಂಗ-ತಟಸ್ಥ ಸಮವಸ್ತ್ರವನ್ನು ಅಳವಡಿಸಲಾಗಿದೆ ಎಂದು ಆರೋಪಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಶಾಲೆ ಎದುರು ಪ್ರತಿಭಟನೆ ನಡೆಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ಸುನ್ನೀ ಬಣದೊಂದಿಗೆ ಸಂಯೋಜಿತವಾಗಿರುವ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಶಾಲೆಯು ತನ್ನ ಹೊಸ ಸಮವಸ್ತ್ರ ಯೋಜನೆಯನ್ನು ಮುಂದುವರೆಸಿದೆ.


ಇದನ್ನೂ ಓದಿ: ನಾವೆಲ್ಲರು ಓದಲೇಬೇಕಾದ ಪುಸ್ತಕ: ‘ಎಲ್ಲರಿಗಾಗಿ ಸ್ತ್ರೀವಾದ – ಆಪ್ತತೆಯ ರಾಜಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...