Homeಮುಖಪುಟಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

ಲಿಂಗ ಸಮಾನತೆಯತ್ತ ಹೆಜ್ಜೆ: ಕೇರಳದ ಶಾಲೆಯಲ್ಲಿ ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ ಸಮವಸ್ತ್ರ

- Advertisement -
- Advertisement -

ಕೇರಳದ ಕೋಳಿಕ್ಕೋಡ್‌ನ ಬಲುಸ್ಸೆರಿಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯು (ಜಿಎಚ್‌ಎಸ್‌ಎಸ್) ಲಿಂಗ ಸಮಾನತೆಯತ್ತ ಹೆಜ್ಜೆ ಹಾಕಿದ್ದು, ತನ್ನ 11 ನೇ ತರಗತಿ ವಿದ್ಯಾರ್ಥಿಗಳಿಗೆ ಬುಧವಾರ ಲಿಂಗ-ತಟಸ್ಥ (ಹೆಣ್ಣು-ಗಂಡು ಮಕ್ಕಳೆಲ್ಲರಿಗೂ ಒಂದೇ ಥರದ) ಸಮವಸ್ತ್ರವನ್ನು ಅಳವಡಿಸಿಕೊಂಡು ಗಮನ ಸೆಳೆದಿದೆ.

ಬಲುಸ್ಸೆರಿಯ ಶಾಲೆಯಲ್ಲಿ 11 ನೇ ತರಗತಿಯ 200 ಹುಡುಗಿಯರು ಮತ್ತು 60 ಹುಡುಗರು ನೀಲಿ ಪ್ಯಾಂಟ್ ಮತ್ತು ಗೆರೆಗಳುಳ್ಳ ಬಿಳಿ ಶರ್ಟ್‌ ಅನ್ನು ಇನ್ನು ಮುಂದೆ ಹೊಸ ಡ್ರೆಸ್ ಕೋಡ್ ಆಗಿ ಬಳಸಲಿದ್ದಾರೆ.

ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನವಾದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಲು ಪರಿಚಯಿಸಲಾದ ಹೊಸ ಸಮವಸ್ತ್ರವನ್ನು ಧರಿಸಲು ಶಾಲೆಯ ಯಾವುದೇ ವಿದ್ಯಾರ್ಥಿಗಳಿಗೆ ಒತ್ತಾಯಿಸುವುದಿಲ್ಲ. ವಿದ್ಯಾರ್ಥಿಗಳು ಮುಸುಕು ಅಥವಾ ಸ್ಕಾರ್ಫ್ ಬಳಸಲು ಮುಕ್ತರಾಗಿದ್ದಾರೆ ಎಂದು ಶಾಲೆಯ ದೈಹಿಕ ಶಿಕ್ಷಕರು ತಿಳಿಸಿದ್ದಾರೆ.

ಸರ್ಕಾರಿ ವಲಯದ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಇದೇ ಮೊದಲ ಬಾರಿಗೆ ಬಾಲಕಿಯರು ಮತ್ತು ಬಾಲಕಿಯರಿಗೆ ಸಾಮಾನ್ಯ ಸಮವಸ್ತ್ರವನ್ನು ಜಾರಿಗೊಳಿಸಲಾಗಿದೆ. ರಾಜ್ಯದ ಇತರೆಡೆಗಳಲ್ಲಿ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವರ್ಗಗಳ ಕೆಲವು ಶಾಲೆಗಳು ಸಹ ಈ ಹಿಂದೆ ಈ ರೀತಿಯ ಸಮವಸ್ತ್ರ ನೀತಿ ಅಳವಡಿಸಿಕೊಂಡಿವೆ.

ಲಿಂಗ-ತಟಸ್ಥ ಸಮವಸ್ತ್ರವನ್ನು ಜಾರಿಗೆ ತರುವುದಾಗಿ ಘೋಷಿಸಿದ ಉನ್ನತ ಶಿಕ್ಷಣ ಸಚಿವೆ ಪ್ರೊ.ಆರ್.ಬಿಂದು ಮಾತನಾಡಿ, “ಸಮಾಜದಲ್ಲಿನ ಪ್ರಗತಿಪರ ಬದಲಾವಣೆಗಳನ್ನು ಸಂಪ್ರದಾಯವಾದಿಗಳು ವಿರೋಧಿಸುವುದು ಸಹಜ. ಲಿಂಗ-ತಟಸ್ಥ ಸಮವಸ್ತ್ರವು ಗಂಡು ಮತ್ತು ಹೆಣ್ಣು ನಡುವಿನ ಪ್ರತ್ಯೇಕತೆಯನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ ಮತ್ತು ಎಲ್ಲಾ ಮಾನವರು ಒಂದೇ ದಿಕ್ಕಿನಲ್ಲಿ ಮುನ್ನಡೆಯಬೇಕು ಎಂಬ ಸಂದೇಶವನ್ನು ನೀಡುತ್ತದೆ. ಹುಡುಗರಿಗೆ ತಮ್ಮ ಡ್ರೆಸ್ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಇದ್ದಾಗ ಹುಡುಗಿಯರಿಗೂ ಆ ಸ್ವಾತಂತ್ರ್ಯವಿರಬೇಕು. ಹೊಸ ಸಮವಸ್ತ್ರವು ಹುಡುಗಿಯರು ತಮ್ಮ ದೇಹದ ಬಗ್ಗೆ ಚಿಂತಿಸದೆ ಆತ್ಮವಿಶ್ವಾಸದಿಂದ ತಿರುಗಲು ಸಹಾಯ ಮಾಡುತ್ತದೆ. ಲಿಂಗ-ತಟಸ್ಥ ಸಮವಸ್ತ್ರವು ಉತ್ತಮ ಬದಲಾವಣೆಗಳತ್ತ ಒಂದು ಹೆಜ್ಜೆಯಾಗಿದೆ” ಎಂದು ಹೇಳಿದ್ದಾರೆ.

ಆದರೆ ಪೋಷಕರ ಜೊತೆ ಸಮರ್ಪಕ ಚರ್ಚೆ ನಡೆಸದೆ ಲಿಂಗ-ತಟಸ್ಥ ಸಮವಸ್ತ್ರವನ್ನು ಅಳವಡಿಸಲಾಗಿದೆ ಎಂದು ಆರೋಪಿಸಿ ವಿವಿಧ ಮುಸ್ಲಿಂ ಸಂಘಟನೆಗಳು ಶಾಲೆ ಎದುರು ಪ್ರತಿಭಟನೆ ನಡೆಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ನೇತೃತ್ವದ ಸುನ್ನೀ ಬಣದೊಂದಿಗೆ ಸಂಯೋಜಿತವಾಗಿರುವ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಆದರೆ ಶಾಲೆಯು ತನ್ನ ಹೊಸ ಸಮವಸ್ತ್ರ ಯೋಜನೆಯನ್ನು ಮುಂದುವರೆಸಿದೆ.


ಇದನ್ನೂ ಓದಿ: ನಾವೆಲ್ಲರು ಓದಲೇಬೇಕಾದ ಪುಸ್ತಕ: ‘ಎಲ್ಲರಿಗಾಗಿ ಸ್ತ್ರೀವಾದ – ಆಪ್ತತೆಯ ರಾಜಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...