Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...