Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...