Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...