Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...