Homeಮುಖಪುಟಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

ಸ್ಟೆರ್ಲೈಟ್ ಗೋಲಿಬಾರ್‌: ಪೊಲೀಸ್ ದುಷ್ಕೃತ್ಯ ಎತ್ತಿಹಿಡಿದ ತನಿಖಾ ಆಯೋಗ

- Advertisement -
- Advertisement -

2018ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸ್ಟೆರ್ಲೈಟ್ ತಾಮ್ರ ಘಟಕದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ನಾಗರಿಕರ ಮೇಲೆ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಯಾವುದೇ ಪ್ರಚೋದನೆ ಕಾರಣವಾಗಿರಲಿಲ್ಲ. ಇದೊಂದು ವಿವೇಚನಾರಹಿತ ಕೃತ್ಯ ಎಂದು ಘಟನೆಯ ತನಿಖೆ ನಡೆಸುತ್ತಿರುವ ಆಯೋಗವು ತನ್ನ ಅಂತಿಮ ವರದಿಯಲ್ಲಿ ತಿಳಿಸಿದೆ.

2018ರ ಮೇ 22ರಂದು 13 ಪ್ರತಿಭಟನಾಕಾರರು ಪೋಲಿಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದರು ಇದು ದೇಶದ್ಯಾಂತ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಾವರವನ್ನು ಮುಚ್ಚಲಾಯಿತು. ಸ್ಟೆರ್ಲೈಟ್ ತಾಮ್ರ ಸ್ಥಾವರವು ಸದರಿ ಪ್ರದೇಶದ ವಾಯು ಮತ್ತು ಜಲ ಸಂಪನ್ಮೂಲಗಳನ್ನು ಕಲುಷಿತಗೊಳಿಸಿದೆ ಎಂದು ಪ್ರತಿಭಟನಾಕಾರರು ಹೋರಾಟಕ್ಕಿಳಿದಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ತಮ್ಮಿಂದ ದೂರದಲ್ಲಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಅಡಗುತಾಣದಿಂದ ಗುಂಡು ಹಾರಿಸಿದ್ದಾರೆ” ಎಂದು ಆಯೋಗವು ತನ್ನ ವರದಿಯಲ್ಲಿ ತಿಳಿಸಿದೆ. “ಪ್ರತಿಭಟನಾಕಾರರ ನಡುವೆ ಇದ್ದ ತೀವ್ರವಾದಿಗಳ ಮೇಲೆ ಮಾತ್ರ ದಾಳಿ ಮಾಡಲಾಯಿತು ಎಂದು ಹೇಳಲು ಇಲ್ಲಿ ಯಾವುದೇ ದಾಖಲೆಗಳಿಲ್ಲ” ಎಂದು ತಿಳಿಸಿದೆ.

ಈ ಆಯೋಗದ ನೇತೃತ್ವವನ್ನು ಮದ್ರಾಸ್ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅರುಣಾ ಜಗದೀಶನ್ ವಹಿಸಿದ್ದರು. ಆಯೋಗದ ವರದಿಯ ಸಾರವನ್ನು ‘ಫ್ರಂಟ್‌ಲೈನ್’ ಪ್ರಕಟಿಸಿದೆ. ಮೇ ತಿಂಗಳಲ್ಲಿ ತನ್ನ ವರದಿಯನ್ನು ತಮಿಳುನಾಡು ಸರ್ಕಾರಕ್ಕೆ ಆಯೋಗ ಸಲ್ಲಿಸಿದೆ.

ಆಗಿನ ಪೊಲೀಸ್ ಮಹಾನಿರೀಕ್ಷಕ (ದಕ್ಷಿಣ ವಲಯ) ಶೈಲೇಶ್ ಕುಮಾರ್ ಯಾದವ್, ಉಪ ಪೊಲೀಸ್ ಮಹಾನಿರೀಕ್ಷಕ (ತಿರುನೆಲ್ವೇಲಿ ರೇಂಜ್) ಕಪಿಲ್ ಕುಮಾರ್ ಸಿ ಸರತ್ಕರ್, ಪೊಲೀಸ್ ಅಧೀಕ್ಷಕ (ತೂತುಕುಡಿ) ಪಿ.ಮಹೇಂದ್ರನ್ ಮತ್ತು ಉಪ ಅಧೀಕ್ಷಕ ಲಿಂಗತಿರುಮಾರನ್ ಸೇರಿದಂತೆ ಉನ್ನತ ಅಧಿಕಾರಿಗಳನ್ನು ಆಯೋಗವು ತನ್ನ ವರದಿಯಲ್ಲಿ ಹೆಸರಿಸಿದೆ. ಇವರೇ ಫೈರಿಂಗ್‌ಗೆ ಹೊಣೆಗಾರರು ಎಂದಿದೆ.

“ಅಧಿಕಾರಿಗಳು ನಿಸ್ಸಂಶಯವಾಗಿ ಮಿತಿಯನ್ನು ಮೀರಿದ್ದಾರೆ” ಎಂಬ ಅಂಶವನ್ನು ಒತ್ತಿ ಹೇಳಿರುವ ಆಯೋಗವು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದೆ.

ಘಟನೆಯ ಸಂದರ್ಭದಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಶಾರ್ಪ್-ಶೂಟರ್‌ಗಳು ಶಾಮೀಲಾಗಿರುವುದನ್ನು ಆಯೋಗ ಗಮನಿಸಿರುವುದಾಗಿ ವರದಿಗಳಾಗಿವೆ.

ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೂ, ಅವರು ನಿರಾಯುಧರಾಗಿದ್ದರು. ಅಧಿಕಾರಿಗಳಿಗೆ ಯಾವುದೇ ಬೆದರಿಕೆಯನ್ನು ಅವರು ಒಡ್ಡಿರಲಿಲ್ಲ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

“ತೀವ್ರ ಗಾಯಕ್ಕೆ ಒಳಗಾದ ಮಣಿಕಂದನ್ ಅವರನ್ನು ಹೊರತುಪಡಿಸಿ ಯಾವುದೇ ಪೋಲೀಸ್‌ಗೆ ಮಾರಣಾಂತಿಕ ಗಾಯಗಳಾಗಿಲ್ಲ” ಎಂದು ಆಯೋಗ ಹೇಳಿದೆ. “ಪೊಲೀಸರು ಗಾಯಗೊಂಡಿದ್ದಾರೆಂದು ಹೇಳಿಕೊಳ್ಳುವ ಎಲ್ಲಾ ಪ್ರಕರಣಗಳಲ್ಲಿ, ಗಾಯಗಳು ತುಂಬಾ ಚಿಕ್ಕದಾಗಿರುತ್ತವೆ” ಎಂದು ವರದಿ ಹೇಳಿದೆ.

“ಪೊಲೀಸರು ತತ್‌ಕ್ಷಣಕ್ಕೆ ಗುಂಡು ಹಾರಿಸುವ ಬದಲು ಜನಸಂದಣಿಯನ್ನು ನಿಯಂತ್ರಿಸಲು ಮಾರಕವಲ್ಲದ ಆಯುಧಗಳನ್ನು ಮತ್ತು ವಿಧಾನಗಳನ್ನು ಬಳಸಬೇಕಿತ್ತು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಸಂತ ಸೇವಾಲಾಲ್‌ರ ಜನ್ಮಸ್ಥಳದಲ್ಲಿ ಆರ್‌ಎಸ್‌ಎಸ್‌ ಶಿಬಿರ ಆಯೋಜನೆ: ಬಂಜಾರ ಮುಖಂಡರ ಆಕ್ರೋಶ

ತಜ್ಞರ ವರದಿಗೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಕಾರ್ಯನಿರ್ವಾಹಕ ನಿರ್ದೇಶಕ ಹೆನ್ರಿ ಟಿಫಾಗ್ನೆ ಪ್ರತಿಕ್ರಿಯಿಸಿ, “ಗುಂಡಿನ ದಾಳಿಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವುದಾಗಿ ದ್ರಾವಿಡ ಮುನ್ನೇತ್ರ ಕಳಗಂ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಯಾವುದೇ ಕ್ರಮ ಜರುಗಿಸಿಲ್ಲ” ಎಂದಿದ್ದಾರೆ.

“ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಮೂರು ತಿಂಗಳಾಗಿದೆ. ಆದರೆ ಅದನ್ನು ಇದುವರೆಗೆ ಅಸೆಂಬ್ಲಿಯಲ್ಲಿ ಚರ್ಚೆಗೆ ಇರಿಸಿಲ್ಲ. ಇದು ನಿಜಕ್ಕೂ ಬೇಸರ ತರಿಸಿದೆ” ಎಂದಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ನಾಯಕ ಕೆ.ಬಾಲಕೃಷ್ಣನ್ ಪ್ರತಿಕ್ರಿಯಿಸಿ, “ತನಿಖಾ ವರದಿ ಹೊರಬಂದಿರುವುದು ಸಂತಸ ತಂದಿದೆ. ಆದರೆ ಆ ಸಮಯದಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿಯದೆ ಬೆರಳೆಣಿಕೆಯಷ್ಟು ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಮಾತ್ರ ಇಂತಹ ದೊಡ್ಡ ಗೋಲಿಬಾರ್‌ ನಡೆಸಿದ್ದಾರೆ ಎಂದು ನಂಬುವುದು ಕಷ್ಟ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....