Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...