Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...