Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....