Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...