Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...