Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...