Homeಮುಖಪುಟಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ ಎಂದು ಶಿವಸೇನೆ ಹೇಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ‌  ರಾಜ್ಯದ ಮತ್ತು ಆಡಳಿತ ಮಿತ್ರ ಪಕ್ಷವಾದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭೇಟಿಯ ನಂತರ ಅವರು ಹೇಳಿಕೆ ನೀಡಿದ್ದು ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು ಎಂದಿದ್ದಾರೆ.

ಲಾಕ್‌ಡೌನ್ ತೆರವುಗೊಳಿಸಲು ಮತ್ತು ಅವರ ಸಲಹೆಗಳ ಬಗ್ಗ ಠಾಕ್ರೆ ಹಿಂಜರಿಯುತ್ತಿರುವುದಕ್ಕೆ ಶರದ್ ಪವಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರವು ಕ್ರಮೇಣ ಲಾಕ್‌ಡೌನ್‌ ತೆರವುಗೊಳಿಸಬೇಕು ಮತ್ತು ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸಲು ಅನಿರ್ದಿಷ್ಟ ಸ್ಥಗಿತದಿಂದ ಹೊರಬರಬೇಕು ಎಂಬ ಶರದ್ ಪವಾರ್ ಹೇಳಿಕೆಯ ಬಗ್ಗೆ ಮಿತ್ರಪಕ್ಷದ ಸಂಬಂಧಗಳಲ್ಲಿ ತೀವ್ರ ಊಹಾಪೋಹಗಳು ಎದ್ದಿದ್ದವು.

ಇದರಿಂದಾಗಿ ಮಹಾರಾಷ್ಟ್ರ ಸರ್ಕಾರದ ಮಿತ್ರ ಪಕ್ಷಗಳಲ್ಲಿ ಬಿರುಕು, ಸರ್ಕಾರ ಪತನದತ್ತ ಎಂಬ ವದಂತಿಗಳನ್ನು ಹರಡಲಾಗಿತ್ತು.

ಆದರೆ ಇದನ್ನು ಅಲ್ಲಗೆಳೆದಿರುವ ಶಿವಸೇನೆ, ಎರಡೂ ಪಕ್ಷಗಳು ವೈರಸ್ ಬಿಕ್ಕಟ್ಟು ಮತ್ತು ರಾಜ್ಯದ ಮೇಲೆ ಅದರ ಪ್ರಭಾವದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದೆ. ಶಿವಸೇನೆ ಮುಖಂಡ ಸಂಜಯ್ ರೌತ್ ಸಭೆ ನಡೆದಿದ್ದನ್ನು ದೃಢಪಡಿಸಿ, “ಸರ್ಕಾರದ ಸ್ಥಿರತೆಯ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

“ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿನ್ನೆ ಸಂಜೆ ಮಾತೋಶ್ರಿಯಲ್ಲಿ ಭೇಟಿಯಾದರು. ಉಭಯ ನಾಯಕರು ಒಂದೂವರೆ ಗಂಟೆ ಚರ್ಚೆ ನಡೆಸಿದರು. ಸರ್ಕಾರದ ಸ್ಥಿರತೆಯ ಬಗ್ಗೆ ಯಾರಾದರೂ ಸುದ್ದಿ ಹರಡುತ್ತಿದ್ದರೆ ಅದು ಅವರ ಹೊಟ್ಟೆ ನೋವು. ಸರ್ಕಾರ ಗಟ್ಟಿಯಾಗಿದೆ, ಚಿಂತಿಸಬೇಡಿ. ಜೈ ಮಹಾರಾಷ್ಟ್ರ !! ” ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಮಾತುಕತೆಗೆ ಕೆಲವು ಗಂಟೆಗಳ ಮೊದಲು, ಶರದ್ ಪವಾರ್ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯಪಾಲರೊಂದಿಗಿನ ಸಭೆಗೆ ಪವಾರ್ ಅವರೊಂದಿಗೆ ಇದ್ದ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಇದು ಕೇವಲ ಸೌಜನ್ಯದ ಸಭೆ ಎಂದು ಪ್ರತಿಪಾದಿಸಿದ್ದಾರೆ.

ಇದು ಪವಾರ್ ಸಾಹೇಬ್ ಮತ್ತು ಗೌರವಾನ್ವಿತ ರಾಜ್ಯಪಾಲರ ನಡುವಿನ ಸೌಜನ್ಯದ ಸಭೆ ಮಾತ್ರ, ನಾವು ಒಂದು ಕಪ್ ಚಹಾವನ್ನು ಸೇವಿಸಲು ಅಲ್ಲಿಗೆ ಹೋದೆವು. ರಾಜ್ಯಪಾಲ ಸಾಹೇಬ್ ಅವರು ಪವಾರ್ ಸಾಹೇಬರನ್ನು ಚಹಾಕ್ಕಾಗಿ ಆಹ್ವಾನಿಸಿದ್ದರು. ಸೌಜನ್ಯಕ್ಕಾಗಿ ನಾವು ಅಲ್ಲಿದ್ದೆವು, ಈ ಸಭೆಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ “ಎಂದು ಮಾಜಿ ಕೇಂದ್ರ ಸಚಿವ ಪಟೇಲ್ ಹೇಳಿದ್ದಾರೆ.

ಮಹಾರಾಷ್ಟ್ರ ಆಡಳಿತದಲ್ಲಿ ರಾಜ್ಯಪಾಲ ಕೊಶ್ಯರಿಯವರ “ಹಸ್ತಕ್ಷೇಪ” ದ ವಿರುದ್ಧ ಪವಾರ್ ಈ ಹಿಂದೆ ಹರಿಹಾಯ್ದಿದ್ದರಿಂದ ಈ ಭೇಟಿಯೂ ಭಾರಿ ಕುತೂಹಲವನ್ನು ಮೂಡಿಸಿತ್ತು.

ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿ ರಾಜ್ಯ ಸಚಿವ ಉದಯ್ ಸಮಂತ್ ಅವರು ಯುಜಿಸಿ ಗೆ ಬರೆದ ಪತ್ರಕ್ಕೆ ಇತ್ತೀಚೆಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ವಿಶ್ವವಿದ್ಯಾನಿಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರುವುದು ಯುಜಿಸಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ” ಎಂದು ಕೊಶಾರಿ ಹೇಳಿದ್ದರು. ಸಮಂತ್ ಅವರ “ಅನಗತ್ಯ ಹಸ್ತಕ್ಷೇಪ”ಕ್ಕಾಗಿ ಸೂಕ್ತ ಸೂಚನೆಗಳನ್ನು ನೀಡುವಂತೆ ಅವರು ಠಾಕ್ರೆ ಅವರನ್ನು ಕೋರಿದ್ದರು.

ಈ ಪ್ರಕ್ಷುಬ್ಧತೆಯ ಮಧ್ಯದಲ್ಲಿ, ಬಿಜೆಪಿ ನಾಯಕ ನಾರಾಯಣ್ ರಾಣೆ ಅವರು ರಾಜ್ಯಪಾಲರನ್ನು ಭೇಟಿಯಾಗಿ, ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಕೋರಿ, ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದರು.


ಓದಿ:  ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...