Homeಮುಖಪುಟಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ : ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು- ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ಗಟ್ಟಿಯಾಗಿದೆ ಎಂದು ಶಿವಸೇನೆ ಹೇಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ‌  ರಾಜ್ಯದ ಮತ್ತು ಆಡಳಿತ ಮಿತ್ರ ಪಕ್ಷವಾದ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಭೇಟಿಯ ನಂತರ ಅವರು ಹೇಳಿಕೆ ನೀಡಿದ್ದು ಸುಳ್ಳು ಹರಡುತ್ತಿರುವವರಿಗೆ ಹೊಟ್ಟೆ ನೋವು ಎಂದಿದ್ದಾರೆ.

ಲಾಕ್‌ಡೌನ್ ತೆರವುಗೊಳಿಸಲು ಮತ್ತು ಅವರ ಸಲಹೆಗಳ ಬಗ್ಗ ಠಾಕ್ರೆ ಹಿಂಜರಿಯುತ್ತಿರುವುದಕ್ಕೆ ಶರದ್ ಪವಾರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಮಹಾರಾಷ್ಟ್ರವು ಕ್ರಮೇಣ ಲಾಕ್‌ಡೌನ್‌ ತೆರವುಗೊಳಿಸಬೇಕು ಮತ್ತು ಆರ್ಥಿಕ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸಲು ಅನಿರ್ದಿಷ್ಟ ಸ್ಥಗಿತದಿಂದ ಹೊರಬರಬೇಕು ಎಂಬ ಶರದ್ ಪವಾರ್ ಹೇಳಿಕೆಯ ಬಗ್ಗೆ ಮಿತ್ರಪಕ್ಷದ ಸಂಬಂಧಗಳಲ್ಲಿ ತೀವ್ರ ಊಹಾಪೋಹಗಳು ಎದ್ದಿದ್ದವು.

ಇದರಿಂದಾಗಿ ಮಹಾರಾಷ್ಟ್ರ ಸರ್ಕಾರದ ಮಿತ್ರ ಪಕ್ಷಗಳಲ್ಲಿ ಬಿರುಕು, ಸರ್ಕಾರ ಪತನದತ್ತ ಎಂಬ ವದಂತಿಗಳನ್ನು ಹರಡಲಾಗಿತ್ತು.

ಆದರೆ ಇದನ್ನು ಅಲ್ಲಗೆಳೆದಿರುವ ಶಿವಸೇನೆ, ಎರಡೂ ಪಕ್ಷಗಳು ವೈರಸ್ ಬಿಕ್ಕಟ್ಟು ಮತ್ತು ರಾಜ್ಯದ ಮೇಲೆ ಅದರ ಪ್ರಭಾವದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಹೇಳಿದೆ. ಶಿವಸೇನೆ ಮುಖಂಡ ಸಂಜಯ್ ರೌತ್ ಸಭೆ ನಡೆದಿದ್ದನ್ನು ದೃಢಪಡಿಸಿ, “ಸರ್ಕಾರದ ಸ್ಥಿರತೆಯ ಬಗ್ಗೆ ಚಿಂತೆ ಮಾಡುವ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

“ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿನ್ನೆ ಸಂಜೆ ಮಾತೋಶ್ರಿಯಲ್ಲಿ ಭೇಟಿಯಾದರು. ಉಭಯ ನಾಯಕರು ಒಂದೂವರೆ ಗಂಟೆ ಚರ್ಚೆ ನಡೆಸಿದರು. ಸರ್ಕಾರದ ಸ್ಥಿರತೆಯ ಬಗ್ಗೆ ಯಾರಾದರೂ ಸುದ್ದಿ ಹರಡುತ್ತಿದ್ದರೆ ಅದು ಅವರ ಹೊಟ್ಟೆ ನೋವು. ಸರ್ಕಾರ ಗಟ್ಟಿಯಾಗಿದೆ, ಚಿಂತಿಸಬೇಡಿ. ಜೈ ಮಹಾರಾಷ್ಟ್ರ !! ” ಎಂದು ಶಿವಸೇನೆ ಸಂಸದ ಸಂಜಯ್ ರೌತ್ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಮಾತುಕತೆಗೆ ಕೆಲವು ಗಂಟೆಗಳ ಮೊದಲು, ಶರದ್ ಪವಾರ್ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡಿದ್ದರು. ರಾಜ್ಯಪಾಲರೊಂದಿಗಿನ ಸಭೆಗೆ ಪವಾರ್ ಅವರೊಂದಿಗೆ ಇದ್ದ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್, ಇದು ಕೇವಲ ಸೌಜನ್ಯದ ಸಭೆ ಎಂದು ಪ್ರತಿಪಾದಿಸಿದ್ದಾರೆ.

ಇದು ಪವಾರ್ ಸಾಹೇಬ್ ಮತ್ತು ಗೌರವಾನ್ವಿತ ರಾಜ್ಯಪಾಲರ ನಡುವಿನ ಸೌಜನ್ಯದ ಸಭೆ ಮಾತ್ರ, ನಾವು ಒಂದು ಕಪ್ ಚಹಾವನ್ನು ಸೇವಿಸಲು ಅಲ್ಲಿಗೆ ಹೋದೆವು. ರಾಜ್ಯಪಾಲ ಸಾಹೇಬ್ ಅವರು ಪವಾರ್ ಸಾಹೇಬರನ್ನು ಚಹಾಕ್ಕಾಗಿ ಆಹ್ವಾನಿಸಿದ್ದರು. ಸೌಜನ್ಯಕ್ಕಾಗಿ ನಾವು ಅಲ್ಲಿದ್ದೆವು, ಈ ಸಭೆಯಲ್ಲಿ ಯಾವುದೇ ರಾಜಕೀಯ ಇರಲಿಲ್ಲ “ಎಂದು ಮಾಜಿ ಕೇಂದ್ರ ಸಚಿವ ಪಟೇಲ್ ಹೇಳಿದ್ದಾರೆ.

ಮಹಾರಾಷ್ಟ್ರ ಆಡಳಿತದಲ್ಲಿ ರಾಜ್ಯಪಾಲ ಕೊಶ್ಯರಿಯವರ “ಹಸ್ತಕ್ಷೇಪ” ದ ವಿರುದ್ಧ ಪವಾರ್ ಈ ಹಿಂದೆ ಹರಿಹಾಯ್ದಿದ್ದರಿಂದ ಈ ಭೇಟಿಯೂ ಭಾರಿ ಕುತೂಹಲವನ್ನು ಮೂಡಿಸಿತ್ತು.

ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿ ರಾಜ್ಯ ಸಚಿವ ಉದಯ್ ಸಮಂತ್ ಅವರು ಯುಜಿಸಿ ಗೆ ಬರೆದ ಪತ್ರಕ್ಕೆ ಇತ್ತೀಚೆಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ, “ವಿಶ್ವವಿದ್ಯಾನಿಲಯಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸದಿರುವುದು ಯುಜಿಸಿ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ” ಎಂದು ಕೊಶಾರಿ ಹೇಳಿದ್ದರು. ಸಮಂತ್ ಅವರ “ಅನಗತ್ಯ ಹಸ್ತಕ್ಷೇಪ”ಕ್ಕಾಗಿ ಸೂಕ್ತ ಸೂಚನೆಗಳನ್ನು ನೀಡುವಂತೆ ಅವರು ಠಾಕ್ರೆ ಅವರನ್ನು ಕೋರಿದ್ದರು.

ಈ ಪ್ರಕ್ಷುಬ್ಧತೆಯ ಮಧ್ಯದಲ್ಲಿ, ಬಿಜೆಪಿ ನಾಯಕ ನಾರಾಯಣ್ ರಾಣೆ ಅವರು ರಾಜ್ಯಪಾಲರನ್ನು ಭೇಟಿಯಾಗಿ, ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಕೋರಿ, ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದರು.


ಓದಿ:  ಬಡವರಿಗೆ ಸೇರಬೇಕಿದ್ದ ಆಹಾರ ಕಿಟ್‌ಗಳು ಬಿಜೆಪಿ ಮುಖಂಡರ ಪಾಲು: ರೊಚ್ಚಿಗೆದ್ದು ದೋಚಿದ ಜನತೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...