Homeಮುಖಪುಟದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

ದುಷ್ಕರ್ಮಿಗಳಿಂದ ಕಲ್ಲೆಸೆತ, ರೈತರ ಟೆಂಟುಗಳ ನಾಶ: ಸಿಂಘು ಗಡಿಯಲ್ಲಿ ಪ್ರತ್ಯುತ್ತರ ನೀಡಿದ ರೈತರು

- Advertisement -
- Advertisement -

ನೂರಕ್ಕಿಂತ ಹೆಚ್ಚಿದ್ದ ಮುಸುಕುದಾರಿ ಗುಂಪೊಂದು ಇಂದು ಮಧ್ಯಾಹ್ನ ಏಕಾಏಕಿ ಸಿಂಘು ಗಡಿಯ ಒಂದು ಬದಿಯಲ್ಲಿ (ದೆಹಲಿ ಕಡೆಗೆ) ಪ್ರತಿಭಟನೆ ನಡೆಸುತ್ತಿದ್ದ ಮಜ್ದೂರ್ ಕಿಸಾನ್ ಸಂಘರ್ಷ ಕಮಿಟಿ ರೈತರ ಕಡೆಗೆ ನುಗ್ಗಿ ಪ್ರತಿಭಟನಾಕಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೇ, ರೈತರ ಹಲವು ಟೆಂಟುಗಳನ್ನು ಧ್ವಂಸಗೊಳಿಸಿದೆ. ಇದಕ್ಕೆ ಅಲ್ಲಿನ ರೈತ ಪ್ರತಿಭಟನಾಕಾರರೂ ಪ್ರತ್ಯುತ್ತರ ನೀಡಲು ಆರಂಭಿಸಿದ ಕೂಡಲೇ ಗುಂಪಿನೊಂದಿಗೆ ಘರ್ಷಣೆ ಆರಂಭವಾಗಿತು. ಇದರಲ್ಲಿ ಒಬ್ಬ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅದೇ ಸಿಂಘು ಗಡಿಯಲ್ಲಿ ಹರಿಯಾಣದ ಕಡೆಗೆ ಕಾಯ್ದೆ ವಿರೋಧಿಸಿ ಸಂಯುಕ್ತ್ ಕಿಸಾನ್ ಮೋರ್ಚಾ ಅಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಅಲ್ಲಿ ಯಾವುದೇ ದಾಳಿ ಆಗಿಲ್ಲ, ಸುರಕ್ಷಿತವಾಗಿ ಮತ್ತು ಶಾಂತಿಯುತವಾಗಿ ಹೋರಾಟ ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಪೊಲೀಸರ ಬಿಗಿಭದ್ರತೆಯ ನಡುವೆಯೂ ಈ ಗುಂಪು ಹೇಗೆ ನುಗ್ಗಿತು ಎಂಬುದು ತಿಳಿದಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕೋಲು, ರಾಡುಗಳನ್ನು ಹೊಂದಿದ ಗುಂಪನ್ನು ತಡೆಯಲು ಪೊಲೀಸರು ವಿಫಲ ಯತ್ನ ನಡೆಸಿದರು.

ರೈತರು ಈ ಜಾಗ ಖಾಲಿ ಮಾಡಬೇಕೆಂದು ಅಗ್ರಹಿಸುತ್ತಿದ್ದ ದುಷ್ಕರ್ಮಿಗಳ ಗುಂಪು, ಅಲ್ಲಿನ ಟಾಯ್ಲೆಟ್, ವಾಶಿಂಗ್ ಮಶಿನ್ ಮತ್ತು ಇತರ ಮೂಲಭೂತ ಸೌಕರ್ಯಗಳನ್ನು ನಾಶ ಮಾಡಲು ಯತ್ನಿಸಿತು.

ಪೊಲೀಸರ ನೆರವು ಸಿಗದಾಗ ಕೆಲವು ರೈತರು ಕೂಡ ದುಷ್ಕರ್ಮಿಗಳ ಮೇಲೆ ಕಲ್ಲು ತೂರಾಟ ನಡೆಸಿದರು. ನಂತರ ಕೆಲ ಹೊತ್ತು ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯಿತು ಎನ್ನಲಾಗಿದೆ.. ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನಾ ನಿರತ ರೈತರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ನುಗ್ಗಿದ ಈ ಗುಂಪು ಯಾರದು?

ಇಂಥದ್ದೇ ಸಂಘಟನೆಗೆ ಸೇರಿದ ಗುಂಪೆಂದು ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲವಾದರೂ, ನಿನ್ನೆ ಸ್ಥಳೀಯರ ಹೆಸರಲ್ಲಿ ಒಂದು ಸಣ್ಣ ಗುಂಪು ಪ್ರತಿಭಟನೆ ಮಾಡಿತ್ತು. ಬಹುಪಾಲು ಮಾಧ್ಯಮಗಳು ಸ್ಥಳೀಯರಿಂದ ಪ್ರತಿಭಟನೆ ಎಂದೇ ಬಿಂಬಿಸಿದ್ದವು.

ಅದರೆ, ಅಲ್ಟ್ ನ್ಯೂಸ್ ನಡೆಸಿದ ಫ್ಯಾಕ್ಟ್ ಚೆಕ್‌ನಲ್ಲಿ, ಹಿಂದೂ-ಸೇನಾ ಸಂಘಟನ್‌ನವರು ಆ ಪ್ರತಿಭಟನೆ ನಡೆಸಿದ್ದರು. ಅದರಲ್ಲಿ ಕೆಲವು ಸ್ಥಳಿಯರನ್ನು ಸೇರಿಸಿಕೊಂಡಿದ್ದರು. ತಮ್ಮದೇ ಸಂಘಟನೆ ಪ್ರತಿಭಟನೆ ನಡೆಸಿದೆ ಎಂದು ಹಿಂದೂ-ಸೇನಾ ಸಂಘಟಣ್ ಅಧ್ಯಕ್ಷ ಅಲ್ಟ್ ನ್ಯೂಸ್ ಎದುರು ಒಪ್ಪಿಕೊಂಡಿದ್ದರು.


ಇದನ್ನೂ ಓದಿ:  ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್ ಮಜ್ರಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...