Homeಕರ್ನಾಟಕಪ್ರಚಾರದ ವೇಳೆ ಜಿ.ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಪೆಟ್ಟು

ಪ್ರಚಾರದ ವೇಳೆ ಜಿ.ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಪೆಟ್ಟು

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್‌ ಅವರ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಕೊರಟೆಗೆರೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ನಡೆದಿದೆ.

ಚುನಾವಣಾ ಪ್ರಚಾರಕ್ಕಾಗಿ ಅವರು ಭೈರನೇಹಳ್ಳಿಗೆ ಹೋಗಿದ್ದರು. ಅವರಿಗೆ ಅಭಿಮಾನಿಗಳು ಹೂ ಹಾಕುವ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಪರಮೇಶ್ವರ ಅವರ ತಲೆಗೆ ಪೆಟ್ಟಾಗಿದೆ.

ಕೊರಟಗೆರೆ| ಪ್ರಚಾರದ ವೇಳೆ ಜಿ. ಪರಮೇಶ್ವರ್‌ ತಲೆಗೆ ಕಲ್ಲೇಟು
ಡಾ.ಜಿ.ಪರಮೇಶ್ವರ್‌ ಅವರು ಗಾಯಗೊಂಡಿರುವುದು

ತಕ್ಷಣವೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

“ಪರಮೇಶ್ವರ್‌ ಅವರು ಚೇತರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಾ. ಜಿ ಪರಮೇಶ್ವರ್ ಅವರು ತಮ್ಮ  ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿಯೂ ಕಲ್ಲು ತೂರಾಟ ಮಾಡಲಾಗಿತ್ತು. ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದರು.

ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಬಂಧಿತ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಘಟನೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದರು. ಆರೋಪಿಯು ಘಟನೆ ನಂತರ ಕಳೆದ ಮೂರು-ನಾಲ್ಕು ದಿನದಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದರು. ಈಗ ಮತ್ತೆ ಪರಮೇಶ್ವರ್‌ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಅವರ ಮೇಲೆ ಆಗಿರುವ ಎರಡನೇ ದಾಳಿ ಇದಾಗಿದೆ.

ಡಾ. ಜಿ.ಪರಮೇಶ್ವರ್ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆಯಲ್ಲಿ ಉಪ ಮುಖ್ಯಮಂತ್ರಿಯಾಗಿ  ಕಾರ್ಯನಿರ್ವಹಿಸಿದ್ದಾರೆ.

ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಜೆಡಿಎಸ್‌ನಿಂದ ಸುಧಾಕರ್ ಲಾಲ್ ಸ್ಪರ್ಧಿಸಿದ್ದು, ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....