Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...