Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...