Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...