Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...