Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...