Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...