Homeಮುಖಪುಟಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್‌ ಗಾಂಧಿಗೆ ಕೇಂದ್ರ ಸಚಿವರ ಪತ್ರ

ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್‌ ಗಾಂಧಿಗೆ ಕೇಂದ್ರ ಸಚಿವರ ಪತ್ರ

- Advertisement -
- Advertisement -

“ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮಾವಳಿ ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಬೇಕು. ಪ್ರೊಟೊಕಾಲ್‌ ಅನುಸರಿಸುತ್ತಿಲ್ಲವಾದರೆ ರಾಷ್ಟ್ರೀಯ ಹಿತಾಸಕ್ತಿಯ ಕಾರಣದಿಂದ ಯಾತ್ರೆಯನ್ನು ನಿಲ್ಲಿಸಬೇಕು” ಎಂದು ಕೇಂದ್ರ ಆರೋಗ್ಯ ಸಚಿವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.

ಕಳೆದ ವರ್ಷವೇ ಭಾರತದಲ್ಲಿ ಕೋವಿಡ್ ನಿಯಮಾವಳಿಗಳನ್ನು ಸಡಿಲಿಸಿರುವುದರಿಂದ “ಇದು ಬಿಜೆಪಿಯ ಸಾಮಾನ್ಯ ತಂತ್ರ” ಎಂದು ಕಾಂಗ್ರೆಸ್ ಟೀಕಿಸಿದೆ. ಕೋವಿಡ್‌ ಪ್ರೋಟೋಕಾಲ್ ಏನೆಂದು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿದ್ದು, “ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ಬಳಕೆ ಸೇರಿದಂತೆ ಕೋವಿಡ್ ನಿಯಮಾವಳಿಗಳನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಕಟ್ಟುನಿಟ್ಟಾಗಿ ಅನುಸರಿಸಬೇಕು. ಲಸಿಕೆ ಹಾಕಿದವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ರಾಹುಲ್‌ ಗಾಂಧಿಯವರಲ್ಲಿ ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

“ಈ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ದೃಷ್ಟಿಯಿಂದ ಮತ್ತು ಕೋವಿಡ್ ಸಾಂಕ್ರಾಮಿಕ ರೋಗದ ಸಮಸ್ಯೆ ದೇಶದಲ್ಲಿ ಉಂಟಾಗದಂತೆ, ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು ಸ್ಥಗಿತಗೊಳಿಸುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಡಿಸೆಂಬರ್ 20ರಂದು ಯಾತ್ರೆಯು ರಾಜಸ್ಥಾನದಲ್ಲಿ ಸಾಗಿದ್ದು, ಬುಧವಾರ ಹರಿಯಾಣ ರಾಜ್ಯವನ್ನು ಪ್ರವೇಶಿಸಿದೆ.

ಮೋದಿಯವರು ಕೈಗೊಂಡಿದ್ದ ಚುನಾವಣಾ ರ್‍ಯಾಲಿಗಳನ್ನು ಕಾಂಗ್ರೆಸ್ ತನ್ನ ಪ್ರತಿಕ್ರಿಯೆಗಳಲ್ಲಿ ಉಲ್ಲೇಖಿಸಿದೆ. ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ನಡೆಸಿದ ಚುನಾವಣಾ ಪ್ರಚಾರ ಮತ್ತು ಎರಡು ರಾಜ್ಯಗಳಲ್ಲಿ ಬಿಜೆಪಿ ನಡೆಸುತ್ತಿರುವ ಚುನಾವಣಾ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ಉಲ್ಲೇಖಿಸಿದೆ. “ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಯಾತ್ರೆಗಳನ್ನು ನಡೆಸುತ್ತಿದೆ. ಆರೋಗ್ಯ ಸಚಿವರು ಅವರಿಗೆ ಪತ್ರ ಕಳುಹಿಸಿದ್ದಾರೆಯೇ?” ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪ್ರಶ್ನಿಸಿದ್ದಾರ.

“ದಯವಿಟ್ಟು ಕೋವಿಡ್ ಪ್ರೋಟೋಕಾಲ್‌ಗಳನ್ನು ಪ್ರಕಟಿಸಿ. ನಾವು ಅವುಗಳನ್ನು ಅನುಸರಿಸುತ್ತೇವೆ” ಎಂದು ಪಕ್ಷವು ಸ್ಪಷ್ಟಪಡಿಸಿದೆ.

ಚೀನಾದಲ್ಲಿ ಕೋವಿಡ್ ಏರಿಕೆಯಾಗುತ್ತಿದೆ ಎಂಬುದು ಸಾಂಕ್ರಾಮಿಕ ರೋಗದ ಭೀತಿಯ ಚರ್ಚೆಗೆ ಅವಕಾಶ ನೀಡಿದೆ. ಕೆಲವು ಮಾನದಂಡಗಳನ್ನು ಮರು ಹೇರುವ ಬಗ್ಗೆ ಆರೋಗ್ಯ ಸಚಿವಾಲಯ ಇಂದು ಸಭೆ ನಡೆಸಿದೆ.

ಸಚಿವರು ಉಲ್ಲೇಖಿಸಿರುವ ಪತ್ರದಲ್ಲಿ, “ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಯಾತ್ರೆಯಲ್ಲಿ ಭಾಗವಹಿಸಿದ ನಂತರ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ” ಎಂದು ಗಮನ ಸೆಳೆಯಲಾಗಿದೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ, “ಬಿಜೆಪಿಯವರು ಭಯಭೀತರಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಗುಜರಾತ್‌ನಲ್ಲಿ ಮತ ಕೇಳಲು ಮೋದಿಜಿ ಮನೆ ಮನೆಗೆ ಹೋದಾಗ ಮಾಸ್ಕ್‌ ಧರಿಸಿದ್ದರಾ?” ಎಂದು ಕೇಳಿದ್ದಾರೆ.

“ಬಿಜೆಪಿಯು ಗೋದಿ ಮೀಡಿಯಾಗಳ ಮೂಲಕ ಹರಡುವ ಪ್ರೊಪೊಗಾಂಡಕ್ಕೆ ಈ ಯಾತ್ರೆಯು ಕಡಿವಾಣ ಹಾಕಿದೆ” ಎಂದಿರುವ ಅವರು, “ಈಗ ರಾಹುಲ್ ಗಾಂಧಿಯವರು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದಾರೆ. ಯಾತ್ರೆಯ ಬಗ್ಗೆ ಮಾತನಾಡಲಾಗುತ್ತಿದೆ, ಇದು ಭಾರಿ ಪರಿಣಾಮ ಬೀರುತ್ತಿದೆ. ಅದಕ್ಕಾಗಿಯೇ ಮೋದಿ ಸರ್ಕಾರವು (ಮನ್ಸುಖ್) ಮಾಂಡವಿಯಾ ಅವರನ್ನು ನಿಯೋಜಿಸಿ ಯಾತ್ರೆಯ ವಿರುದ್ಧ ಜರನ್ನು ಎತ್ತಿಕಟ್ಟಲು ಪ್ರಯತ್ನಿಸಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸಚಿವರ ಪತ್ರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...