Homeಮುಖಪುಟಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್‌ ಗಾಂಧಿಗೆ ಕೇಂದ್ರ ಸಚಿವರ ಪತ್ರ

ಕೋವಿಡ್ ನಿಯಮ ಉಲ್ಲಂಘನೆಯಾಗಿದ್ದರೆ ಭಾರತ್‌ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್‌ ಗಾಂಧಿಗೆ ಕೇಂದ್ರ ಸಚಿವರ ಪತ್ರ

- Advertisement -
- Advertisement -

“ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ ನಿಯಮಾವಳಿ ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಬೇಕು. ಪ್ರೊಟೊಕಾಲ್‌ ಅನುಸರಿಸುತ್ತಿಲ್ಲವಾದರೆ ರಾಷ್ಟ್ರೀಯ ಹಿತಾಸಕ್ತಿಯ ಕಾರಣದಿಂದ ಯಾತ್ರೆಯನ್ನು ನಿಲ್ಲಿಸಬೇಕು” ಎಂದು ಕೇಂದ್ರ ಆರೋಗ್ಯ ಸಚಿವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿದ್ದಾರೆ.

ಕಳೆದ ವರ್ಷವೇ ಭಾರತದಲ್ಲಿ ಕೋವಿಡ್ ನಿಯಮಾವಳಿಗಳನ್ನು ಸಡಿಲಿಸಿರುವುದರಿಂದ “ಇದು ಬಿಜೆಪಿಯ ಸಾಮಾನ್ಯ ತಂತ್ರ” ಎಂದು ಕಾಂಗ್ರೆಸ್ ಟೀಕಿಸಿದೆ. ಕೋವಿಡ್‌ ಪ್ರೋಟೋಕಾಲ್ ಏನೆಂದು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಸಚಿವ ಮನ್ಸುಖ್ ಮಾಂಡವಿಯಾ ಪತ್ರ ಬರೆದಿದ್ದು, “ಮಾಸ್ಕ್ ಮತ್ತು ಸ್ಯಾನಿಟೈಸರ್‌ಗಳ ಬಳಕೆ ಸೇರಿದಂತೆ ಕೋವಿಡ್ ನಿಯಮಾವಳಿಗಳನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಕಟ್ಟುನಿಟ್ಟಾಗಿ ಅನುಸರಿಸಬೇಕು. ಲಸಿಕೆ ಹಾಕಿದವರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಬೇಕು ಎಂದು ರಾಹುಲ್‌ ಗಾಂಧಿಯವರಲ್ಲಿ ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

“ಈ ಕೋವಿಡ್ ಪ್ರೋಟೋಕಾಲ್ ಅನ್ನು ಅನುಸರಿಸಲು ಸಾಧ್ಯವಾಗದಿದ್ದರೆ, ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ದೃಷ್ಟಿಯಿಂದ ಮತ್ತು ಕೋವಿಡ್ ಸಾಂಕ್ರಾಮಿಕ ರೋಗದ ಸಮಸ್ಯೆ ದೇಶದಲ್ಲಿ ಉಂಟಾಗದಂತೆ, ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಲ್ಲಿ ‘ಭಾರತ್ ಜೋಡೋ ಯಾತ್ರೆ’ಯನ್ನು ಸ್ಥಗಿತಗೊಳಿಸುವಂತೆ ನಾನು ನಿಮ್ಮನ್ನು ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ.

ಡಿಸೆಂಬರ್ 20ರಂದು ಯಾತ್ರೆಯು ರಾಜಸ್ಥಾನದಲ್ಲಿ ಸಾಗಿದ್ದು, ಬುಧವಾರ ಹರಿಯಾಣ ರಾಜ್ಯವನ್ನು ಪ್ರವೇಶಿಸಿದೆ.

ಮೋದಿಯವರು ಕೈಗೊಂಡಿದ್ದ ಚುನಾವಣಾ ರ್‍ಯಾಲಿಗಳನ್ನು ಕಾಂಗ್ರೆಸ್ ತನ್ನ ಪ್ರತಿಕ್ರಿಯೆಗಳಲ್ಲಿ ಉಲ್ಲೇಖಿಸಿದೆ. ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚಿಗೆ ನಡೆಸಿದ ಚುನಾವಣಾ ಪ್ರಚಾರ ಮತ್ತು ಎರಡು ರಾಜ್ಯಗಳಲ್ಲಿ ಬಿಜೆಪಿ ನಡೆಸುತ್ತಿರುವ ಚುನಾವಣಾ ಕಾರ್ಯಕ್ರಮಗಳನ್ನು ಕಾಂಗ್ರೆಸ್‌ ಉಲ್ಲೇಖಿಸಿದೆ. “ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಯಾತ್ರೆಗಳನ್ನು ನಡೆಸುತ್ತಿದೆ. ಆರೋಗ್ಯ ಸಚಿವರು ಅವರಿಗೆ ಪತ್ರ ಕಳುಹಿಸಿದ್ದಾರೆಯೇ?” ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಪ್ರಶ್ನಿಸಿದ್ದಾರ.

“ದಯವಿಟ್ಟು ಕೋವಿಡ್ ಪ್ರೋಟೋಕಾಲ್‌ಗಳನ್ನು ಪ್ರಕಟಿಸಿ. ನಾವು ಅವುಗಳನ್ನು ಅನುಸರಿಸುತ್ತೇವೆ” ಎಂದು ಪಕ್ಷವು ಸ್ಪಷ್ಟಪಡಿಸಿದೆ.

ಚೀನಾದಲ್ಲಿ ಕೋವಿಡ್ ಏರಿಕೆಯಾಗುತ್ತಿದೆ ಎಂಬುದು ಸಾಂಕ್ರಾಮಿಕ ರೋಗದ ಭೀತಿಯ ಚರ್ಚೆಗೆ ಅವಕಾಶ ನೀಡಿದೆ. ಕೆಲವು ಮಾನದಂಡಗಳನ್ನು ಮರು ಹೇರುವ ಬಗ್ಗೆ ಆರೋಗ್ಯ ಸಚಿವಾಲಯ ಇಂದು ಸಭೆ ನಡೆಸಿದೆ.

ಸಚಿವರು ಉಲ್ಲೇಖಿಸಿರುವ ಪತ್ರದಲ್ಲಿ, “ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಯಾತ್ರೆಯಲ್ಲಿ ಭಾಗವಹಿಸಿದ ನಂತರ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ” ಎಂದು ಗಮನ ಸೆಳೆಯಲಾಗಿದೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಮಾತನಾಡಿ, “ಬಿಜೆಪಿಯವರು ಭಯಭೀತರಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಗುಜರಾತ್‌ನಲ್ಲಿ ಮತ ಕೇಳಲು ಮೋದಿಜಿ ಮನೆ ಮನೆಗೆ ಹೋದಾಗ ಮಾಸ್ಕ್‌ ಧರಿಸಿದ್ದರಾ?” ಎಂದು ಕೇಳಿದ್ದಾರೆ.

“ಬಿಜೆಪಿಯು ಗೋದಿ ಮೀಡಿಯಾಗಳ ಮೂಲಕ ಹರಡುವ ಪ್ರೊಪೊಗಾಂಡಕ್ಕೆ ಈ ಯಾತ್ರೆಯು ಕಡಿವಾಣ ಹಾಕಿದೆ” ಎಂದಿರುವ ಅವರು, “ಈಗ ರಾಹುಲ್ ಗಾಂಧಿಯವರು ಸಾಮಾಜಿಕ ಮಾಧ್ಯಮಗಳಲ್ಲಿ ಎಲ್ಲೆಡೆ ಕಾಣಿಸಿಕೊಳ್ಳುತ್ತಿದ್ದಾರೆ. ಯಾತ್ರೆಯ ಬಗ್ಗೆ ಮಾತನಾಡಲಾಗುತ್ತಿದೆ, ಇದು ಭಾರಿ ಪರಿಣಾಮ ಬೀರುತ್ತಿದೆ. ಅದಕ್ಕಾಗಿಯೇ ಮೋದಿ ಸರ್ಕಾರವು (ಮನ್ಸುಖ್) ಮಾಂಡವಿಯಾ ಅವರನ್ನು ನಿಯೋಜಿಸಿ ಯಾತ್ರೆಯ ವಿರುದ್ಧ ಜರನ್ನು ಎತ್ತಿಕಟ್ಟಲು ಪ್ರಯತ್ನಿಸಿದೆ” ಎಂದು ಆರೋಪಿಸಿದ್ದಾರೆ.

ಕೇಂದ್ರ ಸಚಿವರ ಪತ್ರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...