Homeಕರೋನಾ ತಲ್ಲಣಕೊರೊನಾಗೆ ಲಸಿಕೆ ವಿಚಾರದಲ್ಲಿ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ : ವೆಂಕಿ ರಾಮಕೃಷ್ಣನ್

ಕೊರೊನಾಗೆ ಲಸಿಕೆ ವಿಚಾರದಲ್ಲಿ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ : ವೆಂಕಿ ರಾಮಕೃಷ್ಣನ್

- Advertisement -
- Advertisement -

ಮೂಲ: ವೆಂಕಿ ರಾಮಕೃಷ್ಣನ್

ಅನುವಾದ: ಟಿ.ಎಸ್‌ ವೇಣುಗೋಪಾಲ್‌

ಕೆಲವು ದಶಕಗಳ ಹಿಂದೆ ತನ್ನ ಜೀವಸಂಕುಲದ ಗಡಿಯನ್ನು ಜಿಗಿದು ಬಂದಿದ್ದ ವೈರಾಣುವೊಂದು 1981ರಲ್ಲಿ ಮನುಷ್ಯರಲ್ಲಿ ಸೋಂಕು ಹರಡಲು ಪ್ರಾರಂಭಿಸಿತ್ತು. ಅದು ಸ್ಯಾನ್ ಫ್ರಾನ್ಸಿಸ್ಕೋ ಹಾಗೂ ನ್ಯೂಯಾರ್ಕಿನಲ್ಲಿ ಸಲಿಂಗಿಗಳಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿತ್ತು. ಈ ಸೋಂಕಿಗೆ ಮೂಲವನ್ನು ಹುಡುಕುವುದಕ್ಕೆ ಒಂದು ಕಾರ್ಯಪಡೆಯನ್ನು ನೇಮಿಸಲಾಯಿತು. ಏಡ್ಸ್‌ಗೆ ನಿಜವಾದ ಕಾರಣ ಹೆಚ್‌ಐವಿ ವೈರಾಣು ಅಂತ ತಿಳಿಯುವುದಕ್ಕೆ ಹಲವು ವರ್ಷಗಳೇ ಹಿಡಿದವು. ಹಾಗೆಯೇ ಆ ವೈರಾಣುವಿನ ಜಿನೋಮಿನ ಅನುಕ್ರಮಣಿಕೆಯನ್ನು ಪತ್ತೆ ಹಚ್ಚುವುದಕ್ಕೆ ಸಾಕಷ್ಟು ವರ್ಷಗಳು ಬೇಕಾಯಿತು. ಆಮೇಲೆ ಈ ಸೋಂಕೇನು ಮರಣದಂಡನೆ ಆಗಬೇಕಾಗಿಲ್ಲ. ಹಲವು ಔಷಧಿಗಳ ಮಿಶ್ರಣವನ್ನು ಅದರ ಶುಶ್ರೂಷೆಗೆ ಬಳಸಿ ಅದನ್ನು ನಿಯಂತ್ರಿಸಬಹುದು ಅಂತ ಕಂಡುಕೊಳ್ಳುವುದಕ್ಕೆ 15 ವರ್ಷ ಹಿಡಿಯಿತು.

45 ವರ್ಷಗಳ ನಂತರ ವುಹಾನ್‌ನಲ್ಲಿ ಕೋವಿಡ್-19 ವೈರಾಣು ಕಾಣಿಸಿಕೊಂಡಿದೆ. ಆದರೆ ಈಗ ಕೆಲವೇ ವಾರಗಳಲ್ಲಿ ಇದಕ್ಕೆ ಸಾರ್ಸ್‌-ಕೋವ್-2 ಕಾರಣ ಅಂತ ಕಂಡುಹಿಡಿಯುವುದಕ್ಕೆ ಸಾಧ್ಯವಾಗಿದೆ. ಅಷ್ಟೇ ಅಲ್ಲ ಅದರ ಅನುಕ್ರಮಣಿ ಪತ್ತೆ ಹಚ್ಚಲಾಗಿದೆ. ಹಾಗಾಗಿ ಈಗ ಸೋಂಕನ್ನು ಪರೀಕ್ಷಿಸುವುದಕ್ಕೆ ಹೆಚ್ಚು ಸೂಕ್ಷ್ಮವಾದ ವಿಧಾನವನ್ನು ಕಂಡುಹಿಡಿಯಲು ಸಾಧ್ಯವಾಗಿದೆ. ಈಗ ಪ್ರತಿಕಾಯ-ಅಂಟಿಬಾಡೀಸ್‌ಗಾಗಿ ಪರೀಕ್ಷೆ ಮಾಡುವ ಮೂಲಕ ಈ ಮೊದಲೇ ಸೋಂಕು ಬಂದಿದ್ದವರನ್ನು ಗುರುತಿಸಬಹುದು. ವಿಜ್ಞಾನದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಹೂಡಿಕೆಯಾಗುತ್ತಿರುವುದರಿಂದ ಇಂದು ವಿಜ್ಞಾನ ಆ ಮಟ್ಟಕ್ಕೆ ಬೆಳೆದಿದೆ. ತೀರಾ ಕಡಿಮೆ ಆವಧಿಯಲ್ಲಿ ವೈರಾಣುವಿನ ಬಗ್ಗೆ ಅಷ್ಟೊಂದು ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಸಾಧ್ಯವಾಗಿದೆ.
ಆದರೂ ನಮಗೆ ಎಷ್ಟೋ ವಿಷಯಗಳು ಗೊತ್ತಿಲ್ಲ. ಉಳಿದ ವೈರಾಣುವಿಗಿಂತ ಇದು ಏಕೆ ಅಷ್ಟು ಬೇಗ ಹರಡುತ್ತದೆ, ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ಬರುವುದೇ, ಹಾಗೆ ಬಂದರೆ ಆ ಶಕ್ತಿ ಎಷ್ಟು ಕಾಲ ಉಳಿಯಬಹುದು. ಇದು ಕೆಲವರಲ್ಲಿ ಯಾಕೆ ತೀವ್ರವಾದ ಉರಿಯೂತವನ್ನು ಉಂಟುಮಾಡುತ್ತದೆ, ಕೊನೆಗೆ ಅವರ ಸಾವಿಗೂ ಕಾರಣವಾಗುತ್ತದೆ. ಕೆಲವರು ಮಾತ್ರ ಈ ಸೋಂಕಿನಿಂದ ಯಾಕೆ ಸಾಯುತ್ತಾರೆ? ಹೀಗೆ ಹಲವು ಪ್ರಶ್ನೆಶ್ನೆಗಳು ಹಾಗೆ ಉಳಿದಿವೆ.

ಇಂದು ಇದರ ಲಸಿಕೆಗಾಗಿ ಜಗತ್ತಿನಾದ್ಯಂತ ಹುಡುಕಾಟ ನಡೆದಿದೆ. ಇಷ್ಟೊಂದು ವ್ಯಾಪಕವಾದ ಅನ್ವೇಷಣೆ ಹಿಂದೆಂದೂ ಆಗಿರಲಿಲ್ಲ. ಆದರೆ ಇನ್ನೊಂದು ಸತ್ಯವನ್ನು ಈ ಸಮಯದಲ್ಲಿ ಮರೆಯಬಾರದು. ಏಡ್ಸ್ ಅಥವಾ ಇತರ ಹಲವು ವೈರಾಣುವಿನ ಸೋಂಕಿಗೆ ನಮಗೆ 40ವರ್ಷಗಳ ನಂತರವೂ ಲಸಿಕೆಯನ್ನು ಕಂಡುಹಿಡಿಯುವುದಕ್ಕೆ ಸಾಧ್ಯವಾಗಿಲ್ಲ. ಇದು ಕಟು ವಾಸ್ತವ. ಅದರಿಂದ ಹೊಸ ಔಷಧಿಗಳನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಹಾಗೂ ಈಗ ಲಭ್ಯವಿರುವ ಔಷಧಿಗಳನ್ನು ಇದಕ್ಕೆ ಬಳಸುವ ಸಾಧ್ಯತೆಯತ್ತ ಪ್ರಯತ್ನಿಸುವುದು ತುಂಬಾ ಮುಖ್ಯ.

ಹೊಸ ಪುರಾವೆಗಳು ಸಿಕ್ಕಾಗ ವಿಜ್ಞಾನಿಗಳು ತಮ್ಮ ತೀರ್ಮಾನಗಳಲ್ಲಿ ಆಗಿರಬಹುದಾದ ತಪ್ಪನ್ನು ಒಪ್ಪಿಕೊಳ್ಳಬೇಕು. ತಪ್ಪಿನಿಂದ ಹೊಸಪಾಠವನ್ನು ಕಲಿಯುವುದಕ್ಕೆ ತಯಾರಿರಬೇಕು. ವಿಜ್ಞಾನದ ಒಳಗೇ ಅಂತಹ ಅನಿಶ್ಚಿತತೆ ಇದೆ. ನಿಧಾನವಾಗಿ ಪುರಾವೆಗಳು ಸೇರಿಕೊಳ್ಳುತ್ತಾ ಹೋದಂತೆ ಮತ್ತು ಸಮುದಾಯದ ಪರಿಶೀಲನೆಗೆ ಒಳಗಾದಂತೆ ತಪ್ಪುಗಳು ಕಮ್ಮಿಯಾಗುತ್ತಾ, ಅಂತಿಮವಾಗಿ ಒಂದು ಒಮ್ಮತ ಮೂಡುತ್ತದೆ. ವಿಜ್ಞಾನದಲ್ಲಿ ಈ ಕ್ರಮ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾ ಬಂದಿದೆ. ಆದರೆ ಈಗ ಎಲ್ಲರ ದೃಷ್ಟಿಯೂ ವಿಜ್ಞಾನದ ಮೇಲಿದೆ. ಎಲ್ಲರಿಗೂ ತಕ್ಷಣ ಪರಿಹಾರ ಬೇಕು. ಹಾಗಾಗಿ ವಿಜ್ಞಾನದ ಮೇಲೆ ಒತ್ತಡ ಹೆಚ್ಚಾಗಿದೆ. ಅವರ ನಿರ್ಧಾರಗಳಲ್ಲಿ ಅನಿಶ್ಚತತೆ ಅನಿವಾರ್ಯ. ಅದನ್ನು ವಿಜ್ಞಾನಿಗಳು ಸ್ಪಷ್ಟಪಡಿಸಬೇಕು. ಸ್ವಾಭಾವಿಕವಾಗಿಯೇ ಇಷ್ಟೊಂದು ಅನಿಶ್ಚಿತತೆ ಇದ್ದಾಗ ಮುಂದಿರುವ ಸಾಧ್ಯತೆಗಳ ಬಗ್ಗೆ ಒಂದು ಒಮ್ಮತದ ತೀರ್ಮಾನ ಸಾಧ್ಯವಿಲ್ಲ. ಹಲವು ವಿಭಿನ್ನವಾದ ತೀರ್ಮಾನಗಳು ಸಾಧ್ಯ. ಇದು ವಾಸ್ತವ, ಇದನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

ತೀರ್ಮಾನಗಳಲ್ಲಿನ ವೈವಿಧ್ಯತೆ ಅವರು ಕೊಡುವ ಸಲಹೆಯನ್ನೂ ಪ್ರಭಾವಿಸುತ್ತದೆ. ಹೊಸ ಪುರಾವೆಗಳು ಸಿಕ್ಕಾಗ ತಮ್ಮ ನಿರ್ಧಾರದ ತಪ್ಪುಗಳು ಅವರಿಗೆ ಕಾಣಿಸಬಹುದು. ತಮ್ಮ ತಪ್ಪನ್ನು ಅವರು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಮತ್ತು ಅದರಿಂದ ಕಲಿಯಲು ಸಿದ್ದರಿರಬೇಕು. ಸಾಮಾನ್ಯವಾಗಿ ಹೆಚ್ಚಿನ ಉದ್ದಿಮೆಗಳಲ್ಲಿ ಒಂದು ಗುಂಪಾಗಿ ನಿರ್ಧಾರ ತೆಗೆದುಕೊಳ್ಳುವ ಪರಿಪಾಠ ಇರುತ್ತದೆ. ಅದು ತಪ್ಪಬೇಕು. ನಿರ್ಧಾರಗಳಿಗೆ ಜೋತುಬೀಳಬಾರದು. ಆಂತರಿಕ ಚರ್ಚೆ ತುಂಬಾ ಸಕ್ರಿಯವಾಗಿ ನಡೆಯಬೇಕು. ತಮ್ಮ ಪುರಾವೆಗಳು ಮತ್ತು ನಿರ್ಧಾರಗಳ ಬಗ್ಗೆ ಮುಕ್ತವಾಗಿರಬೇಕು. ಆಗಷ್ಟೇ ಅವುಗಳನ್ನು ಪರಿಶೀಲಿಸುವುದಕ್ಕೆ ಸಾಧ್ಯವಾಗುತ್ತದೆ. ಆದರೆ ತೀರಾ ಕ್ಲಿಷ್ಟವಾದ ನೀತಿಗಳಿಗೆ ಸಂಬಂಧಿಸಿದ ನಿರ್ಧಾರಗಳಿಗೆ ವಿಜ್ಞಾನಿಗಳನ್ನು ಬಲಿಪಶುಗಳನ್ನಾಗಿ ಮಾಡಬಾರದು. ತಾವು ಬಲಿಪಶುಗಳಾಗುತ್ತೇವೆ ಎಂಬ ಭಾವನೆ ವಿಜ್ಞಾನಿಗಳಲ್ಲಿ ಬಂದರೆ ಅವರಿಗೆ ಮುಕ್ತವಾಗಿ ಸಲಹೆಗಳನ್ನು ಕೊಡುವುದಕ್ಕೆ ಸಾಧ್ಯವಾಗುವುದಿಲ್ಲ.

ಅಷ್ಟೇ ಅಲ್ಲ ವೈಜ್ಞಾನಿಕ ಸಲಹೆಗಳನ್ನು ಒಂದು ನೀತಿಯಾಗಿ ರೂಪಿಸುವುದಕ್ಕೆ ಹಲವು ದಾರಿಗಳು ಸಾಧ್ಯ. ಜಗತ್ತಿನಾದ್ಯಂತ ಕೋವಿಡ್-19ಕ್ಕೆ ಕಾಣುತ್ತಿರುವ ವಿಭಿನ್ನ ಪ್ರತಿಕ್ರಿಯೆಗಳನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಯಾಕೆಂದರೆ ನೀತಿಗಳನ್ನು ರೂಪಿಸುವುದರಲ್ಲಿ ವೈಜ್ಞಾನಿಕ ಸಲಹೆಗಳು ಒಂದು ಅಂಶ ಅಷ್ಟೆ. ವಿಜ್ಞಾನದ ಸಂದಿಗ್ಧತೆಯನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಅಷ್ಟೇ ಅಲ್ಲ ಅವುಗಳ ಸಾಧ್ಯತೆಯನ್ನೂ ಸೇರಿದಂತೆ, ಇತರ ಹಲವು ಪ್ರಾಯೋಗಿಕ ಅಂಶಗಳನ್ನು ಗಮನಿಸಬೇಕು. ಈ ಎಲ್ಲಾ ವಿಷಯಗಳಲ್ಲೂ ಅವರು ವಿಜ್ಞಾನಿಗಳಿಂದ ಒಂದು ನಿಖರವಾದ ಹಾಗೂ ನಿಶ್ಚಿತವಾದ ಉತ್ತರ ನಿರೀಕ್ಷಿಸುತ್ತಾರೆ. ಆಗ ಅವರು “ನಾವು ವಿಜ್ಞಾನವನ್ನು ಅನುಸರಿಸುತ್ತಿದ್ದೇವೆ” ಅಂದುಕೊಳ್ಳಬಹುದು ಅಥವಾ ಹೇಳಿಕೊಳ್ಳಬಹುದು. ಆದರೆ ಬಯಸಿದ್ದು ಆಗಬೇಕಾಗಿಲ್ಲ.
ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ನಿರಂತರವಾಗಿ ಹೊಸದಾಗಿ ಸಿಗುತ್ತಿರುವ ಪುರಾವೆಗಳ ಬೆಳಕಿನಲ್ಲಿ ಪರಿಶೀಲಿಸುತ್ತಾ ಹೋಗುತ್ತಿರಬೇಕು. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇದು ತುಂಬಾ ಮುಖ್ಯ.

ನಮ್ಮ ನಿಲುವು ಸರಿ ಅಲ್ಲ ಅಂತ ತಿಳಿದ ತಕ್ಷಣ, ಕಚ್ಚಾಡುತ್ತಾ, ಬೇರೆಯವರ ಮೇಲೆ ಆರೋಪ ಹೊರಿಸುತ್ತಾ ಪ್ರಶಸ್ತವಾದ ಸಮಯ ಹಾಳುಮಾಡುತ್ತಾ ಹೋಗಬಾರದು. ಅದರಲ್ಲೂ ಇಂತಹ ಆನಿಶ್ಚಿತತೆಯ ಸಂದರ್ಭದಲ್ಲಿ ವಿಜ್ಞಾನಿಗಳನ್ನು, ಅವರು ನೀಡಿರುವ ಸಲಹೆಗಳಿಗಾಗಿ ಟೀಕಿಸುವುದು ಸರಿಯಲ್ಲ. ಹಾಗೆ ಟೀಕಿಸುವುದು, ವಿಜ್ಞಾನ ಹೇಗೆ ಕೆಲಸ ಮಾಡುತ್ತದೆ ಎಂಬುದರ ಬಗ್ಗೆ ಅವರಿಗಿರುವ ಮೂಲಭೂತ ತಪ್ಪುಕಲ್ಪನೆಯನ್ನು ತೋರಿಸುತ್ತದೆ.

ಇತ್ತೀಚೆಗೆ ಮಂತ್ರಿಯೊಬ್ಬರು ವಿಜ್ಞಾನಿಗಳನ್ನು ಟೀಕಿಸಿದಾಗ ಉಳಿದವರು ಆ ಟೀಕೆಯಿಂದ ದೂರ ಉಳಿದದ್ದು ಸಮಾಧಾನದ ಸಂಗತಿ. ಇಂತಹ ಪರಿಸ್ಥಿತಿಯಲ್ಲಿ ಅದು ವಿಜ್ಞಾನಿಗಳಲ್ಲಿ ವಿಶ್ವಾಸವನ್ನು ಮೂಡಿಸುತ್ತದೆೆ.
ನಾವು ಭಿನ್ನವಾದ ಅಥವಾ ಇನ್ನೂ ಸುಧಾರಿತ ಹಾದಿಯನ್ನು ಹಿಡಿಯಬೇಕು ಅಂತ ಪುರವೆಗಳು ಸೂಚಿಸಿದರೆ ಸರ್ಕಾರ ಹಾಗೂ ವಿಜ್ಞಾನಿಗಳು ಅದನ್ನು ಒಪ್ಪಿಕೊಳ್ಳಬೇಕು. ಅದಕ್ಕೆ ಸರಿಯಾಗಿ ಕಾರ್ಯ-ನೀತಿಯನ್ನು ಬದಲಾಯಿಸಿಕೊಳ್ಳಬೇಕು. ಜನರಿಗೆ ಅದನ್ನು ವಿವರಿಸಬೇಕು. ಜನರು ಅರ್ಥ ಮಾಡಿಕೊಳ್ಳುತ್ತಾರೆ. ಹಿಂದೆ ಲಭ್ಯವಿದ್ದ ಮಾಹಿತಿಯನ್ನು ಆಧರಿಸಿ ಹಾಗೆ ಮಾಡಲಾಗಿತ್ತು. ಅದು ಆ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬಹುದಾಗಿದ್ದ ಒಳ್ಳೆಯ ನಿರ್ಧಾರ ಅನ್ನುವುದು ಜನರಿಗೂ ಅರ್ಥವಾಗುತ್ತದೆ. ಆದರೆ ಅದು ತಪ್ಪು ಎಂದು ಗೊತ್ತಾದಾಗ ಆದಷ್ಟು ಬೇಗ ಅದನ್ನು ಸರಿಪಡಿಸಬೇಕು.

ವೈರಾಣುವಿನ ಪಿಡುಗು ನಮ್ಮ ಎದುರಿಗಿನ ಅತ್ಯಂತ ದೊಡ್ಡ ಅಪಾಯ ಅನ್ನುವುದು ಗೊತ್ತಿತ್ತು. ಅದನ್ನು ಎದುರಿಸಲು ತಾನು ಸಂಪೂರ್ಣ ತಯಾರಾಗಿದ್ದೇನೆ ಅಂತ ಇಂಗ್ಲೆಂಡ್ ಭಾವಿಸಿತ್ತು. ಆದರೆ ನಿಜವಾಗಿ ಸಿದ್ಧವಾಗಿರಲಿಲ್ಲ. ಅದು ಸ್ಪಷ್ಟ. ನಾವು ಈ ಪಿಡುಗಿಗೆ ಸಂಬಂಧಿಸಿದಂತೆ ನಮ್ಮ ಸೋಲು ಗೆಲುವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಅದರಿಂದ ಪಾಠ ಕಲಿಯಬೇಕು. ಆಗ ಮುಂದೆ ಅಂತಹ ಪಿಡುಗು ಮತ್ತೆ ಬಂದಾಗ- ಬರುವುದು ಅನಿವಾರ್ಯ- ಅದನ್ನು ಎದುರಿಸಲು ಹೆಚ್ಚು ಪರಿಣಾಮಕಾರಿಯಾಗಿ ಸಿದ್ದತೆ ಮಾಡಿಕೊಳ್ಳಬಹುದು.

ಕೃಪೆ: ದಿ ಗಾರ್ಡಿಯನ್

(ಲೇಖಕರು ರಸಾಯನಶಾಸ್ತ್ರದಲ್ಲಿ ನೋಬೆಲ್ ಪ್ರಶಸ್ತಿ ವಿಜೇತರು)


ಇದನ್ನೂ ಓದಿ: ಇದು ಅತ್ಯಾಚಾರದ ಕಥೆಯಲ್ಲ, ವಸಾಹತುವಾಗಿಯೇ ಉಳಿದಿರುವ ‘ಈ ಭಾರತ’ದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...