Homeಕರೋನಾ ತಲ್ಲಣಕೊರೊನಾಗೆ ಲಸಿಕೆ ವಿಚಾರದಲ್ಲಿ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ : ವೆಂಕಿ ರಾಮಕೃಷ್ಣನ್

ಕೊರೊನಾಗೆ ಲಸಿಕೆ ವಿಚಾರದಲ್ಲಿ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ : ವೆಂಕಿ ರಾಮಕೃಷ್ಣನ್

- Advertisement -
- Advertisement -

ಮೂಲ: ವೆಂಕಿ ರಾಮಕೃಷ್ಣನ್

ಅನುವಾದ: ಟಿ.ಎಸ್‌ ವೇಣುಗೋಪಾಲ್‌

ಕೆಲವು ದಶಕಗಳ ಹಿಂದೆ ತನ್ನ ಜೀವಸಂಕುಲದ ಗಡಿಯನ್ನು ಜಿಗಿದು ಬಂದಿದ್ದ ವೈರಾಣುವೊಂದು 1981ರಲ್ಲಿ ಮನುಷ್ಯರಲ್ಲಿ ಸೋಂಕು ಹರಡಲು ಪ್ರಾರಂಭಿಸಿತ್ತು. ಅದು ಸ್ಯಾನ್ ಫ್ರಾನ್ಸಿಸ್ಕೋ ಹಾಗೂ ನ್ಯೂಯಾರ್ಕಿನಲ್ಲಿ ಸಲಿಂಗಿಗಳಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿತ್ತು. ಈ ಸೋಂಕಿಗೆ ಮೂಲವನ್ನು ಹುಡುಕುವುದಕ್ಕೆ ಒಂದು ಕಾರ್ಯಪಡೆಯನ್ನು ನೇಮಿಸಲಾಯಿತು. ಏಡ್ಸ್‌ಗೆ ನಿಜವಾದ ಕಾರಣ ಹೆಚ್‌ಐವಿ ವೈರಾಣು ಅಂತ ತಿಳಿಯುವುದಕ್ಕೆ ಹಲವು ವರ್ಷಗಳೇ ಹಿಡಿದವು. ಹಾಗೆಯೇ ಆ ವೈರಾಣುವಿನ ಜಿನೋಮಿನ ಅನುಕ್ರಮಣಿಕೆಯನ್ನು ಪತ್ತೆ ಹಚ್ಚುವುದಕ್ಕೆ ಸಾಕಷ್ಟು ವರ್ಷಗಳು ಬೇಕಾಯಿತು. ಆಮೇಲೆ ಈ ಸೋಂಕೇನು ಮರಣದಂಡನೆ ಆಗಬೇಕಾಗಿಲ್ಲ. ಹಲವು ಔಷಧಿಗಳ ಮಿಶ್ರಣವನ್ನು ಅದರ ಶುಶ್ರೂಷೆಗೆ ಬಳಸಿ ಅದನ್ನು ನಿಯಂತ್ರಿಸಬಹುದು ಅಂತ ಕಂಡುಕೊಳ್ಳುವುದಕ್ಕೆ 15 ವರ್ಷ ಹಿಡಿಯಿತು.

45 ವರ್ಷಗಳ ನಂತರ ವುಹಾನ್‌ನಲ್ಲಿ ಕೋವಿಡ್-19 ವೈರಾಣು ಕಾಣಿಸಿಕೊಂಡಿದೆ. ಆದರೆ ಈಗ ಕೆಲವೇ ವಾರಗಳಲ್ಲಿ ಇದಕ್ಕೆ ಸಾರ್ಸ್‌-ಕೋವ್-2 ಕಾರಣ ಅಂತ ಕಂಡುಹಿಡಿಯುವುದಕ್ಕೆ ಸಾಧ್ಯವಾಗಿದೆ. ಅಷ್ಟೇ ಅಲ್ಲ ಅದರ ಅನುಕ್ರಮಣಿ ಪತ್ತೆ ಹಚ್ಚಲಾಗಿದೆ. ಹಾಗಾಗಿ ಈಗ ಸೋಂಕನ್ನು ಪರೀಕ್ಷಿಸುವುದಕ್ಕೆ ಹೆಚ್ಚು ಸೂಕ್ಷ್ಮವಾದ ವಿಧಾನವನ್ನು ಕಂಡುಹಿಡಿಯಲು ಸಾಧ್ಯವಾಗಿದೆ. ಈಗ ಪ್ರತಿಕಾಯ-ಅಂಟಿಬಾಡೀಸ್‌ಗಾಗಿ ಪರೀಕ್ಷೆ ಮಾಡುವ ಮೂಲಕ ಈ ಮೊದಲೇ ಸೋಂಕು ಬಂದಿದ್ದವರನ್ನು ಗುರುತಿಸಬಹುದು. ವಿಜ್ಞಾನದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಹೂಡಿಕೆಯಾಗುತ್ತಿರುವುದರಿಂದ ಇಂದು ವಿಜ್ಞಾನ ಆ ಮಟ್ಟಕ್ಕೆ ಬೆಳೆದಿದೆ. ತೀರಾ ಕಡಿಮೆ ಆವಧಿಯಲ್ಲಿ ವೈರಾಣುವಿನ ಬಗ್ಗೆ ಅಷ್ಟೊಂದು ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಸಾಧ್ಯವಾಗಿದೆ.
ಆದರೂ ನಮಗೆ ಎಷ್ಟೋ ವಿಷಯಗಳು ಗೊತ್ತಿಲ್ಲ. ಉಳಿದ ವೈರಾಣುವಿಗಿಂತ ಇದು ಏಕೆ ಅಷ್ಟು ಬೇಗ ಹರಡುತ್ತದೆ, ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ಬರುವುದೇ, ಹಾಗೆ ಬಂದರೆ ಆ ಶಕ್ತಿ ಎಷ್ಟು ಕಾಲ ಉಳಿಯಬಹುದು. ಇದು ಕೆಲವರಲ್ಲಿ ಯಾಕೆ ತೀವ್ರವಾದ ಉರಿಯೂತವನ್ನು ಉಂಟುಮಾಡುತ್ತದೆ, ಕೊನೆಗೆ ಅವರ ಸಾವಿಗೂ ಕಾರಣವಾಗುತ್ತದೆ. ಕೆಲವರು ಮಾತ್ರ ಈ ಸೋಂಕಿನಿಂದ ಯಾಕೆ ಸಾಯುತ್ತಾರೆ? ಹೀಗೆ ಹಲವು ಪ್ರಶ್ನೆಶ್ನೆಗಳು ಹಾಗೆ ಉಳಿದಿವೆ.

ಇಂದು ಇದರ ಲಸಿಕೆಗಾಗಿ ಜಗತ್ತಿನಾದ್ಯಂತ ಹುಡುಕಾಟ ನಡೆದಿದೆ. ಇಷ್ಟೊಂದು ವ್ಯಾಪಕವಾದ ಅನ್ವೇಷಣೆ ಹಿಂದೆಂದೂ ಆಗಿರಲಿಲ್ಲ. ಆದರೆ ಇನ್ನೊಂದು ಸತ್ಯವನ್ನು ಈ ಸಮಯದಲ್ಲಿ ಮರೆಯಬಾರದು. ಏಡ್ಸ್ ಅಥವಾ ಇತರ ಹಲವು ವೈರಾಣುವಿನ ಸೋಂಕಿಗೆ ನಮಗೆ 40ವರ್ಷಗಳ ನಂತರವೂ ಲಸಿಕೆಯನ್ನು ಕಂಡುಹಿಡಿಯುವುದಕ್ಕೆ ಸಾಧ್ಯವಾಗಿಲ್ಲ. ಇದು ಕಟು ವಾಸ್ತವ. ಅದರಿಂದ ಹೊಸ ಔಷಧಿಗಳನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಹಾಗೂ ಈಗ ಲಭ್ಯವಿರುವ ಔಷಧಿಗಳನ್ನು ಇದಕ್ಕೆ ಬಳಸುವ ಸಾಧ್ಯತೆಯತ್ತ ಪ್ರಯತ್ನಿಸುವುದು ತುಂಬಾ ಮುಖ್ಯ.

ಹೊಸ ಪುರಾವೆಗಳು ಸಿಕ್ಕಾಗ ವಿಜ್ಞಾನಿಗಳು ತಮ್ಮ ತೀರ್ಮಾನಗಳಲ್ಲಿ ಆಗಿರಬಹುದಾದ ತಪ್ಪನ್ನು ಒಪ್ಪಿಕೊಳ್ಳಬೇಕು. ತಪ್ಪಿನಿಂದ ಹೊಸಪಾಠವನ್ನು ಕಲಿಯುವುದಕ್ಕೆ ತಯಾರಿರಬೇಕು. ವಿಜ್ಞಾನದ ಒಳಗೇ ಅಂತಹ ಅನಿಶ್ಚಿತತೆ ಇದೆ. ನಿಧಾನವಾಗಿ ಪುರಾವೆಗಳು ಸೇರಿಕೊಳ್ಳುತ್ತಾ ಹೋದಂತೆ ಮತ್ತು ಸಮುದಾಯದ ಪರಿಶೀಲನೆಗೆ ಒಳಗಾದಂತೆ ತಪ್ಪುಗಳು ಕಮ್ಮಿಯಾಗುತ್ತಾ, ಅಂತಿಮವಾಗಿ ಒಂದು ಒಮ್ಮತ ಮೂಡುತ್ತದೆ. ವಿಜ್ಞಾನದಲ್ಲಿ ಈ ಕ್ರಮ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾ ಬಂದಿದೆ. ಆದರೆ ಈಗ ಎಲ್ಲರ ದೃಷ್ಟಿಯೂ ವಿಜ್ಞಾನದ ಮೇಲಿದೆ. ಎಲ್ಲರಿಗೂ ತಕ್ಷಣ ಪರಿಹಾರ ಬೇಕು. ಹಾಗಾಗಿ ವಿಜ್ಞಾನದ ಮೇಲೆ ಒತ್ತಡ ಹೆಚ್ಚಾಗಿದೆ. ಅವರ ನಿರ್ಧಾರಗಳಲ್ಲಿ ಅನಿಶ್ಚತತೆ ಅನಿವಾರ್ಯ. ಅದನ್ನು ವಿಜ್ಞಾನಿಗಳು ಸ್ಪಷ್ಟಪಡಿಸಬೇಕು. ಸ್ವಾಭಾವಿಕವಾಗಿಯೇ ಇಷ್ಟೊಂದು ಅನಿಶ್ಚಿತತೆ ಇದ್ದಾಗ ಮುಂದಿರುವ ಸಾಧ್ಯತೆಗಳ ಬಗ್ಗೆ ಒಂದು ಒಮ್ಮತದ ತೀರ್ಮಾನ ಸಾಧ್ಯವಿಲ್ಲ. ಹಲವು ವಿಭಿನ್ನವಾದ ತೀರ್ಮಾನಗಳು ಸಾಧ್ಯ. ಇದು ವಾಸ್ತವ, ಇದನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

ತೀರ್ಮಾನಗಳಲ್ಲಿನ ವೈವಿಧ್ಯತೆ ಅವರು ಕೊಡುವ ಸಲಹೆಯನ್ನೂ ಪ್ರಭಾವಿಸುತ್ತದೆ. ಹೊಸ ಪುರಾವೆಗಳು ಸಿಕ್ಕಾಗ ತಮ್ಮ ನಿರ್ಧಾರದ ತಪ್ಪುಗಳು ಅವರಿಗೆ ಕಾಣಿಸಬಹುದು. ತಮ್ಮ ತಪ್ಪನ್ನು ಅವರು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಮತ್ತು ಅದರಿಂದ ಕಲಿಯಲು ಸಿದ್ದರಿರಬೇಕು. ಸಾಮಾನ್ಯವಾಗಿ ಹೆಚ್ಚಿನ ಉದ್ದಿಮೆಗಳಲ್ಲಿ ಒಂದು ಗುಂಪಾಗಿ ನಿರ್ಧಾರ ತೆಗೆದುಕೊಳ್ಳುವ ಪರಿಪಾಠ ಇರುತ್ತದೆ. ಅದು ತಪ್ಪಬೇಕು. ನಿರ್ಧಾರಗಳಿಗೆ ಜೋತುಬೀಳಬಾರದು. ಆಂತರಿಕ ಚರ್ಚೆ ತುಂಬಾ ಸಕ್ರಿಯವಾಗಿ ನಡೆಯಬೇಕು. ತಮ್ಮ ಪುರಾವೆಗಳು ಮತ್ತು ನಿರ್ಧಾರಗಳ ಬಗ್ಗೆ ಮುಕ್ತವಾಗಿರಬೇಕು. ಆಗಷ್ಟೇ ಅವುಗಳನ್ನು ಪರಿಶೀಲಿಸುವುದಕ್ಕೆ ಸಾಧ್ಯವಾಗುತ್ತದೆ. ಆದರೆ ತೀರಾ ಕ್ಲಿಷ್ಟವಾದ ನೀತಿಗಳಿಗೆ ಸಂಬಂಧಿಸಿದ ನಿರ್ಧಾರಗಳಿಗೆ ವಿಜ್ಞಾನಿಗಳನ್ನು ಬಲಿಪಶುಗಳನ್ನಾಗಿ ಮಾಡಬಾರದು. ತಾವು ಬಲಿಪಶುಗಳಾಗುತ್ತೇವೆ ಎಂಬ ಭಾವನೆ ವಿಜ್ಞಾನಿಗಳಲ್ಲಿ ಬಂದರೆ ಅವರಿಗೆ ಮುಕ್ತವಾಗಿ ಸಲಹೆಗಳನ್ನು ಕೊಡುವುದಕ್ಕೆ ಸಾಧ್ಯವಾಗುವುದಿಲ್ಲ.

ಅಷ್ಟೇ ಅಲ್ಲ ವೈಜ್ಞಾನಿಕ ಸಲಹೆಗಳನ್ನು ಒಂದು ನೀತಿಯಾಗಿ ರೂಪಿಸುವುದಕ್ಕೆ ಹಲವು ದಾರಿಗಳು ಸಾಧ್ಯ. ಜಗತ್ತಿನಾದ್ಯಂತ ಕೋವಿಡ್-19ಕ್ಕೆ ಕಾಣುತ್ತಿರುವ ವಿಭಿನ್ನ ಪ್ರತಿಕ್ರಿಯೆಗಳನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಯಾಕೆಂದರೆ ನೀತಿಗಳನ್ನು ರೂಪಿಸುವುದರಲ್ಲಿ ವೈಜ್ಞಾನಿಕ ಸಲಹೆಗಳು ಒಂದು ಅಂಶ ಅಷ್ಟೆ. ವಿಜ್ಞಾನದ ಸಂದಿಗ್ಧತೆಯನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಅಷ್ಟೇ ಅಲ್ಲ ಅವುಗಳ ಸಾಧ್ಯತೆಯನ್ನೂ ಸೇರಿದಂತೆ, ಇತರ ಹಲವು ಪ್ರಾಯೋಗಿಕ ಅಂಶಗಳನ್ನು ಗಮನಿಸಬೇಕು. ಈ ಎಲ್ಲಾ ವಿಷಯಗಳಲ್ಲೂ ಅವರು ವಿಜ್ಞಾನಿಗಳಿಂದ ಒಂದು ನಿಖರವಾದ ಹಾಗೂ ನಿಶ್ಚಿತವಾದ ಉತ್ತರ ನಿರೀಕ್ಷಿಸುತ್ತಾರೆ. ಆಗ ಅವರು “ನಾವು ವಿಜ್ಞಾನವನ್ನು ಅನುಸರಿಸುತ್ತಿದ್ದೇವೆ” ಅಂದುಕೊಳ್ಳಬಹುದು ಅಥವಾ ಹೇಳಿಕೊಳ್ಳಬಹುದು. ಆದರೆ ಬಯಸಿದ್ದು ಆಗಬೇಕಾಗಿಲ್ಲ.
ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ನಿರಂತರವಾಗಿ ಹೊಸದಾಗಿ ಸಿಗುತ್ತಿರುವ ಪುರಾವೆಗಳ ಬೆಳಕಿನಲ್ಲಿ ಪರಿಶೀಲಿಸುತ್ತಾ ಹೋಗುತ್ತಿರಬೇಕು. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇದು ತುಂಬಾ ಮುಖ್ಯ.

ನಮ್ಮ ನಿಲುವು ಸರಿ ಅಲ್ಲ ಅಂತ ತಿಳಿದ ತಕ್ಷಣ, ಕಚ್ಚಾಡುತ್ತಾ, ಬೇರೆಯವರ ಮೇಲೆ ಆರೋಪ ಹೊರಿಸುತ್ತಾ ಪ್ರಶಸ್ತವಾದ ಸಮಯ ಹಾಳುಮಾಡುತ್ತಾ ಹೋಗಬಾರದು. ಅದರಲ್ಲೂ ಇಂತಹ ಆನಿಶ್ಚಿತತೆಯ ಸಂದರ್ಭದಲ್ಲಿ ವಿಜ್ಞಾನಿಗಳನ್ನು, ಅವರು ನೀಡಿರುವ ಸಲಹೆಗಳಿಗಾಗಿ ಟೀಕಿಸುವುದು ಸರಿಯಲ್ಲ. ಹಾಗೆ ಟೀಕಿಸುವುದು, ವಿಜ್ಞಾನ ಹೇಗೆ ಕೆಲಸ ಮಾಡುತ್ತದೆ ಎಂಬುದರ ಬಗ್ಗೆ ಅವರಿಗಿರುವ ಮೂಲಭೂತ ತಪ್ಪುಕಲ್ಪನೆಯನ್ನು ತೋರಿಸುತ್ತದೆ.

ಇತ್ತೀಚೆಗೆ ಮಂತ್ರಿಯೊಬ್ಬರು ವಿಜ್ಞಾನಿಗಳನ್ನು ಟೀಕಿಸಿದಾಗ ಉಳಿದವರು ಆ ಟೀಕೆಯಿಂದ ದೂರ ಉಳಿದದ್ದು ಸಮಾಧಾನದ ಸಂಗತಿ. ಇಂತಹ ಪರಿಸ್ಥಿತಿಯಲ್ಲಿ ಅದು ವಿಜ್ಞಾನಿಗಳಲ್ಲಿ ವಿಶ್ವಾಸವನ್ನು ಮೂಡಿಸುತ್ತದೆೆ.
ನಾವು ಭಿನ್ನವಾದ ಅಥವಾ ಇನ್ನೂ ಸುಧಾರಿತ ಹಾದಿಯನ್ನು ಹಿಡಿಯಬೇಕು ಅಂತ ಪುರವೆಗಳು ಸೂಚಿಸಿದರೆ ಸರ್ಕಾರ ಹಾಗೂ ವಿಜ್ಞಾನಿಗಳು ಅದನ್ನು ಒಪ್ಪಿಕೊಳ್ಳಬೇಕು. ಅದಕ್ಕೆ ಸರಿಯಾಗಿ ಕಾರ್ಯ-ನೀತಿಯನ್ನು ಬದಲಾಯಿಸಿಕೊಳ್ಳಬೇಕು. ಜನರಿಗೆ ಅದನ್ನು ವಿವರಿಸಬೇಕು. ಜನರು ಅರ್ಥ ಮಾಡಿಕೊಳ್ಳುತ್ತಾರೆ. ಹಿಂದೆ ಲಭ್ಯವಿದ್ದ ಮಾಹಿತಿಯನ್ನು ಆಧರಿಸಿ ಹಾಗೆ ಮಾಡಲಾಗಿತ್ತು. ಅದು ಆ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬಹುದಾಗಿದ್ದ ಒಳ್ಳೆಯ ನಿರ್ಧಾರ ಅನ್ನುವುದು ಜನರಿಗೂ ಅರ್ಥವಾಗುತ್ತದೆ. ಆದರೆ ಅದು ತಪ್ಪು ಎಂದು ಗೊತ್ತಾದಾಗ ಆದಷ್ಟು ಬೇಗ ಅದನ್ನು ಸರಿಪಡಿಸಬೇಕು.

ವೈರಾಣುವಿನ ಪಿಡುಗು ನಮ್ಮ ಎದುರಿಗಿನ ಅತ್ಯಂತ ದೊಡ್ಡ ಅಪಾಯ ಅನ್ನುವುದು ಗೊತ್ತಿತ್ತು. ಅದನ್ನು ಎದುರಿಸಲು ತಾನು ಸಂಪೂರ್ಣ ತಯಾರಾಗಿದ್ದೇನೆ ಅಂತ ಇಂಗ್ಲೆಂಡ್ ಭಾವಿಸಿತ್ತು. ಆದರೆ ನಿಜವಾಗಿ ಸಿದ್ಧವಾಗಿರಲಿಲ್ಲ. ಅದು ಸ್ಪಷ್ಟ. ನಾವು ಈ ಪಿಡುಗಿಗೆ ಸಂಬಂಧಿಸಿದಂತೆ ನಮ್ಮ ಸೋಲು ಗೆಲುವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಅದರಿಂದ ಪಾಠ ಕಲಿಯಬೇಕು. ಆಗ ಮುಂದೆ ಅಂತಹ ಪಿಡುಗು ಮತ್ತೆ ಬಂದಾಗ- ಬರುವುದು ಅನಿವಾರ್ಯ- ಅದನ್ನು ಎದುರಿಸಲು ಹೆಚ್ಚು ಪರಿಣಾಮಕಾರಿಯಾಗಿ ಸಿದ್ದತೆ ಮಾಡಿಕೊಳ್ಳಬಹುದು.

ಕೃಪೆ: ದಿ ಗಾರ್ಡಿಯನ್

(ಲೇಖಕರು ರಸಾಯನಶಾಸ್ತ್ರದಲ್ಲಿ ನೋಬೆಲ್ ಪ್ರಶಸ್ತಿ ವಿಜೇತರು)


ಇದನ್ನೂ ಓದಿ: ಇದು ಅತ್ಯಾಚಾರದ ಕಥೆಯಲ್ಲ, ವಸಾಹತುವಾಗಿಯೇ ಉಳಿದಿರುವ ‘ಈ ಭಾರತ’ದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....