Homeಕರೋನಾ ತಲ್ಲಣಕೊರೊನಾಗೆ ಲಸಿಕೆ ವಿಚಾರದಲ್ಲಿ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ : ವೆಂಕಿ ರಾಮಕೃಷ್ಣನ್

ಕೊರೊನಾಗೆ ಲಸಿಕೆ ವಿಚಾರದಲ್ಲಿ ವಿಜ್ಞಾನಿಗಳನ್ನು ತೆಗಳುವುದು ನಿಲ್ಲಲಿ : ವೆಂಕಿ ರಾಮಕೃಷ್ಣನ್

- Advertisement -
- Advertisement -

ಮೂಲ: ವೆಂಕಿ ರಾಮಕೃಷ್ಣನ್

ಅನುವಾದ: ಟಿ.ಎಸ್‌ ವೇಣುಗೋಪಾಲ್‌

ಕೆಲವು ದಶಕಗಳ ಹಿಂದೆ ತನ್ನ ಜೀವಸಂಕುಲದ ಗಡಿಯನ್ನು ಜಿಗಿದು ಬಂದಿದ್ದ ವೈರಾಣುವೊಂದು 1981ರಲ್ಲಿ ಮನುಷ್ಯರಲ್ಲಿ ಸೋಂಕು ಹರಡಲು ಪ್ರಾರಂಭಿಸಿತ್ತು. ಅದು ಸ್ಯಾನ್ ಫ್ರಾನ್ಸಿಸ್ಕೋ ಹಾಗೂ ನ್ಯೂಯಾರ್ಕಿನಲ್ಲಿ ಸಲಿಂಗಿಗಳಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಿತ್ತು. ಈ ಸೋಂಕಿಗೆ ಮೂಲವನ್ನು ಹುಡುಕುವುದಕ್ಕೆ ಒಂದು ಕಾರ್ಯಪಡೆಯನ್ನು ನೇಮಿಸಲಾಯಿತು. ಏಡ್ಸ್‌ಗೆ ನಿಜವಾದ ಕಾರಣ ಹೆಚ್‌ಐವಿ ವೈರಾಣು ಅಂತ ತಿಳಿಯುವುದಕ್ಕೆ ಹಲವು ವರ್ಷಗಳೇ ಹಿಡಿದವು. ಹಾಗೆಯೇ ಆ ವೈರಾಣುವಿನ ಜಿನೋಮಿನ ಅನುಕ್ರಮಣಿಕೆಯನ್ನು ಪತ್ತೆ ಹಚ್ಚುವುದಕ್ಕೆ ಸಾಕಷ್ಟು ವರ್ಷಗಳು ಬೇಕಾಯಿತು. ಆಮೇಲೆ ಈ ಸೋಂಕೇನು ಮರಣದಂಡನೆ ಆಗಬೇಕಾಗಿಲ್ಲ. ಹಲವು ಔಷಧಿಗಳ ಮಿಶ್ರಣವನ್ನು ಅದರ ಶುಶ್ರೂಷೆಗೆ ಬಳಸಿ ಅದನ್ನು ನಿಯಂತ್ರಿಸಬಹುದು ಅಂತ ಕಂಡುಕೊಳ್ಳುವುದಕ್ಕೆ 15 ವರ್ಷ ಹಿಡಿಯಿತು.

45 ವರ್ಷಗಳ ನಂತರ ವುಹಾನ್‌ನಲ್ಲಿ ಕೋವಿಡ್-19 ವೈರಾಣು ಕಾಣಿಸಿಕೊಂಡಿದೆ. ಆದರೆ ಈಗ ಕೆಲವೇ ವಾರಗಳಲ್ಲಿ ಇದಕ್ಕೆ ಸಾರ್ಸ್‌-ಕೋವ್-2 ಕಾರಣ ಅಂತ ಕಂಡುಹಿಡಿಯುವುದಕ್ಕೆ ಸಾಧ್ಯವಾಗಿದೆ. ಅಷ್ಟೇ ಅಲ್ಲ ಅದರ ಅನುಕ್ರಮಣಿ ಪತ್ತೆ ಹಚ್ಚಲಾಗಿದೆ. ಹಾಗಾಗಿ ಈಗ ಸೋಂಕನ್ನು ಪರೀಕ್ಷಿಸುವುದಕ್ಕೆ ಹೆಚ್ಚು ಸೂಕ್ಷ್ಮವಾದ ವಿಧಾನವನ್ನು ಕಂಡುಹಿಡಿಯಲು ಸಾಧ್ಯವಾಗಿದೆ. ಈಗ ಪ್ರತಿಕಾಯ-ಅಂಟಿಬಾಡೀಸ್‌ಗಾಗಿ ಪರೀಕ್ಷೆ ಮಾಡುವ ಮೂಲಕ ಈ ಮೊದಲೇ ಸೋಂಕು ಬಂದಿದ್ದವರನ್ನು ಗುರುತಿಸಬಹುದು. ವಿಜ್ಞಾನದ ಮೇಲೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾಗಿ ಹೂಡಿಕೆಯಾಗುತ್ತಿರುವುದರಿಂದ ಇಂದು ವಿಜ್ಞಾನ ಆ ಮಟ್ಟಕ್ಕೆ ಬೆಳೆದಿದೆ. ತೀರಾ ಕಡಿಮೆ ಆವಧಿಯಲ್ಲಿ ವೈರಾಣುವಿನ ಬಗ್ಗೆ ಅಷ್ಟೊಂದು ಮಾಹಿತಿಯನ್ನು ಸಂಗ್ರಹಿಸುವುದಕ್ಕೆ ಸಾಧ್ಯವಾಗಿದೆ.
ಆದರೂ ನಮಗೆ ಎಷ್ಟೋ ವಿಷಯಗಳು ಗೊತ್ತಿಲ್ಲ. ಉಳಿದ ವೈರಾಣುವಿಗಿಂತ ಇದು ಏಕೆ ಅಷ್ಟು ಬೇಗ ಹರಡುತ್ತದೆ, ಸೋಂಕಿತರಿಗೆ ರೋಗ ನಿರೋಧಕ ಶಕ್ತಿ ಬರುವುದೇ, ಹಾಗೆ ಬಂದರೆ ಆ ಶಕ್ತಿ ಎಷ್ಟು ಕಾಲ ಉಳಿಯಬಹುದು. ಇದು ಕೆಲವರಲ್ಲಿ ಯಾಕೆ ತೀವ್ರವಾದ ಉರಿಯೂತವನ್ನು ಉಂಟುಮಾಡುತ್ತದೆ, ಕೊನೆಗೆ ಅವರ ಸಾವಿಗೂ ಕಾರಣವಾಗುತ್ತದೆ. ಕೆಲವರು ಮಾತ್ರ ಈ ಸೋಂಕಿನಿಂದ ಯಾಕೆ ಸಾಯುತ್ತಾರೆ? ಹೀಗೆ ಹಲವು ಪ್ರಶ್ನೆಶ್ನೆಗಳು ಹಾಗೆ ಉಳಿದಿವೆ.

ಇಂದು ಇದರ ಲಸಿಕೆಗಾಗಿ ಜಗತ್ತಿನಾದ್ಯಂತ ಹುಡುಕಾಟ ನಡೆದಿದೆ. ಇಷ್ಟೊಂದು ವ್ಯಾಪಕವಾದ ಅನ್ವೇಷಣೆ ಹಿಂದೆಂದೂ ಆಗಿರಲಿಲ್ಲ. ಆದರೆ ಇನ್ನೊಂದು ಸತ್ಯವನ್ನು ಈ ಸಮಯದಲ್ಲಿ ಮರೆಯಬಾರದು. ಏಡ್ಸ್ ಅಥವಾ ಇತರ ಹಲವು ವೈರಾಣುವಿನ ಸೋಂಕಿಗೆ ನಮಗೆ 40ವರ್ಷಗಳ ನಂತರವೂ ಲಸಿಕೆಯನ್ನು ಕಂಡುಹಿಡಿಯುವುದಕ್ಕೆ ಸಾಧ್ಯವಾಗಿಲ್ಲ. ಇದು ಕಟು ವಾಸ್ತವ. ಅದರಿಂದ ಹೊಸ ಔಷಧಿಗಳನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಹಾಗೂ ಈಗ ಲಭ್ಯವಿರುವ ಔಷಧಿಗಳನ್ನು ಇದಕ್ಕೆ ಬಳಸುವ ಸಾಧ್ಯತೆಯತ್ತ ಪ್ರಯತ್ನಿಸುವುದು ತುಂಬಾ ಮುಖ್ಯ.

ಹೊಸ ಪುರಾವೆಗಳು ಸಿಕ್ಕಾಗ ವಿಜ್ಞಾನಿಗಳು ತಮ್ಮ ತೀರ್ಮಾನಗಳಲ್ಲಿ ಆಗಿರಬಹುದಾದ ತಪ್ಪನ್ನು ಒಪ್ಪಿಕೊಳ್ಳಬೇಕು. ತಪ್ಪಿನಿಂದ ಹೊಸಪಾಠವನ್ನು ಕಲಿಯುವುದಕ್ಕೆ ತಯಾರಿರಬೇಕು. ವಿಜ್ಞಾನದ ಒಳಗೇ ಅಂತಹ ಅನಿಶ್ಚಿತತೆ ಇದೆ. ನಿಧಾನವಾಗಿ ಪುರಾವೆಗಳು ಸೇರಿಕೊಳ್ಳುತ್ತಾ ಹೋದಂತೆ ಮತ್ತು ಸಮುದಾಯದ ಪರಿಶೀಲನೆಗೆ ಒಳಗಾದಂತೆ ತಪ್ಪುಗಳು ಕಮ್ಮಿಯಾಗುತ್ತಾ, ಅಂತಿಮವಾಗಿ ಒಂದು ಒಮ್ಮತ ಮೂಡುತ್ತದೆ. ವಿಜ್ಞಾನದಲ್ಲಿ ಈ ಕ್ರಮ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಾ ಬಂದಿದೆ. ಆದರೆ ಈಗ ಎಲ್ಲರ ದೃಷ್ಟಿಯೂ ವಿಜ್ಞಾನದ ಮೇಲಿದೆ. ಎಲ್ಲರಿಗೂ ತಕ್ಷಣ ಪರಿಹಾರ ಬೇಕು. ಹಾಗಾಗಿ ವಿಜ್ಞಾನದ ಮೇಲೆ ಒತ್ತಡ ಹೆಚ್ಚಾಗಿದೆ. ಅವರ ನಿರ್ಧಾರಗಳಲ್ಲಿ ಅನಿಶ್ಚತತೆ ಅನಿವಾರ್ಯ. ಅದನ್ನು ವಿಜ್ಞಾನಿಗಳು ಸ್ಪಷ್ಟಪಡಿಸಬೇಕು. ಸ್ವಾಭಾವಿಕವಾಗಿಯೇ ಇಷ್ಟೊಂದು ಅನಿಶ್ಚಿತತೆ ಇದ್ದಾಗ ಮುಂದಿರುವ ಸಾಧ್ಯತೆಗಳ ಬಗ್ಗೆ ಒಂದು ಒಮ್ಮತದ ತೀರ್ಮಾನ ಸಾಧ್ಯವಿಲ್ಲ. ಹಲವು ವಿಭಿನ್ನವಾದ ತೀರ್ಮಾನಗಳು ಸಾಧ್ಯ. ಇದು ವಾಸ್ತವ, ಇದನ್ನು ಎಲ್ಲರೂ ಒಪ್ಪಿಕೊಳ್ಳಬೇಕು.

ತೀರ್ಮಾನಗಳಲ್ಲಿನ ವೈವಿಧ್ಯತೆ ಅವರು ಕೊಡುವ ಸಲಹೆಯನ್ನೂ ಪ್ರಭಾವಿಸುತ್ತದೆ. ಹೊಸ ಪುರಾವೆಗಳು ಸಿಕ್ಕಾಗ ತಮ್ಮ ನಿರ್ಧಾರದ ತಪ್ಪುಗಳು ಅವರಿಗೆ ಕಾಣಿಸಬಹುದು. ತಮ್ಮ ತಪ್ಪನ್ನು ಅವರು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಮತ್ತು ಅದರಿಂದ ಕಲಿಯಲು ಸಿದ್ದರಿರಬೇಕು. ಸಾಮಾನ್ಯವಾಗಿ ಹೆಚ್ಚಿನ ಉದ್ದಿಮೆಗಳಲ್ಲಿ ಒಂದು ಗುಂಪಾಗಿ ನಿರ್ಧಾರ ತೆಗೆದುಕೊಳ್ಳುವ ಪರಿಪಾಠ ಇರುತ್ತದೆ. ಅದು ತಪ್ಪಬೇಕು. ನಿರ್ಧಾರಗಳಿಗೆ ಜೋತುಬೀಳಬಾರದು. ಆಂತರಿಕ ಚರ್ಚೆ ತುಂಬಾ ಸಕ್ರಿಯವಾಗಿ ನಡೆಯಬೇಕು. ತಮ್ಮ ಪುರಾವೆಗಳು ಮತ್ತು ನಿರ್ಧಾರಗಳ ಬಗ್ಗೆ ಮುಕ್ತವಾಗಿರಬೇಕು. ಆಗಷ್ಟೇ ಅವುಗಳನ್ನು ಪರಿಶೀಲಿಸುವುದಕ್ಕೆ ಸಾಧ್ಯವಾಗುತ್ತದೆ. ಆದರೆ ತೀರಾ ಕ್ಲಿಷ್ಟವಾದ ನೀತಿಗಳಿಗೆ ಸಂಬಂಧಿಸಿದ ನಿರ್ಧಾರಗಳಿಗೆ ವಿಜ್ಞಾನಿಗಳನ್ನು ಬಲಿಪಶುಗಳನ್ನಾಗಿ ಮಾಡಬಾರದು. ತಾವು ಬಲಿಪಶುಗಳಾಗುತ್ತೇವೆ ಎಂಬ ಭಾವನೆ ವಿಜ್ಞಾನಿಗಳಲ್ಲಿ ಬಂದರೆ ಅವರಿಗೆ ಮುಕ್ತವಾಗಿ ಸಲಹೆಗಳನ್ನು ಕೊಡುವುದಕ್ಕೆ ಸಾಧ್ಯವಾಗುವುದಿಲ್ಲ.

ಅಷ್ಟೇ ಅಲ್ಲ ವೈಜ್ಞಾನಿಕ ಸಲಹೆಗಳನ್ನು ಒಂದು ನೀತಿಯಾಗಿ ರೂಪಿಸುವುದಕ್ಕೆ ಹಲವು ದಾರಿಗಳು ಸಾಧ್ಯ. ಜಗತ್ತಿನಾದ್ಯಂತ ಕೋವಿಡ್-19ಕ್ಕೆ ಕಾಣುತ್ತಿರುವ ವಿಭಿನ್ನ ಪ್ರತಿಕ್ರಿಯೆಗಳನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ. ಯಾಕೆಂದರೆ ನೀತಿಗಳನ್ನು ರೂಪಿಸುವುದರಲ್ಲಿ ವೈಜ್ಞಾನಿಕ ಸಲಹೆಗಳು ಒಂದು ಅಂಶ ಅಷ್ಟೆ. ವಿಜ್ಞಾನದ ಸಂದಿಗ್ಧತೆಯನ್ನು ಸರ್ಕಾರ ಒಪ್ಪಿಕೊಳ್ಳಬೇಕು. ಅಷ್ಟೇ ಅಲ್ಲ ಅವುಗಳ ಸಾಧ್ಯತೆಯನ್ನೂ ಸೇರಿದಂತೆ, ಇತರ ಹಲವು ಪ್ರಾಯೋಗಿಕ ಅಂಶಗಳನ್ನು ಗಮನಿಸಬೇಕು. ಈ ಎಲ್ಲಾ ವಿಷಯಗಳಲ್ಲೂ ಅವರು ವಿಜ್ಞಾನಿಗಳಿಂದ ಒಂದು ನಿಖರವಾದ ಹಾಗೂ ನಿಶ್ಚಿತವಾದ ಉತ್ತರ ನಿರೀಕ್ಷಿಸುತ್ತಾರೆ. ಆಗ ಅವರು “ನಾವು ವಿಜ್ಞಾನವನ್ನು ಅನುಸರಿಸುತ್ತಿದ್ದೇವೆ” ಅಂದುಕೊಳ್ಳಬಹುದು ಅಥವಾ ಹೇಳಿಕೊಳ್ಳಬಹುದು. ಆದರೆ ಬಯಸಿದ್ದು ಆಗಬೇಕಾಗಿಲ್ಲ.
ನಾವು ಏನು ಮಾಡುತ್ತಿದ್ದೇವೆ ಎಂಬುದನ್ನು ನಿರಂತರವಾಗಿ ಹೊಸದಾಗಿ ಸಿಗುತ್ತಿರುವ ಪುರಾವೆಗಳ ಬೆಳಕಿನಲ್ಲಿ ಪರಿಶೀಲಿಸುತ್ತಾ ಹೋಗುತ್ತಿರಬೇಕು. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಇದು ತುಂಬಾ ಮುಖ್ಯ.

ನಮ್ಮ ನಿಲುವು ಸರಿ ಅಲ್ಲ ಅಂತ ತಿಳಿದ ತಕ್ಷಣ, ಕಚ್ಚಾಡುತ್ತಾ, ಬೇರೆಯವರ ಮೇಲೆ ಆರೋಪ ಹೊರಿಸುತ್ತಾ ಪ್ರಶಸ್ತವಾದ ಸಮಯ ಹಾಳುಮಾಡುತ್ತಾ ಹೋಗಬಾರದು. ಅದರಲ್ಲೂ ಇಂತಹ ಆನಿಶ್ಚಿತತೆಯ ಸಂದರ್ಭದಲ್ಲಿ ವಿಜ್ಞಾನಿಗಳನ್ನು, ಅವರು ನೀಡಿರುವ ಸಲಹೆಗಳಿಗಾಗಿ ಟೀಕಿಸುವುದು ಸರಿಯಲ್ಲ. ಹಾಗೆ ಟೀಕಿಸುವುದು, ವಿಜ್ಞಾನ ಹೇಗೆ ಕೆಲಸ ಮಾಡುತ್ತದೆ ಎಂಬುದರ ಬಗ್ಗೆ ಅವರಿಗಿರುವ ಮೂಲಭೂತ ತಪ್ಪುಕಲ್ಪನೆಯನ್ನು ತೋರಿಸುತ್ತದೆ.

ಇತ್ತೀಚೆಗೆ ಮಂತ್ರಿಯೊಬ್ಬರು ವಿಜ್ಞಾನಿಗಳನ್ನು ಟೀಕಿಸಿದಾಗ ಉಳಿದವರು ಆ ಟೀಕೆಯಿಂದ ದೂರ ಉಳಿದದ್ದು ಸಮಾಧಾನದ ಸಂಗತಿ. ಇಂತಹ ಪರಿಸ್ಥಿತಿಯಲ್ಲಿ ಅದು ವಿಜ್ಞಾನಿಗಳಲ್ಲಿ ವಿಶ್ವಾಸವನ್ನು ಮೂಡಿಸುತ್ತದೆೆ.
ನಾವು ಭಿನ್ನವಾದ ಅಥವಾ ಇನ್ನೂ ಸುಧಾರಿತ ಹಾದಿಯನ್ನು ಹಿಡಿಯಬೇಕು ಅಂತ ಪುರವೆಗಳು ಸೂಚಿಸಿದರೆ ಸರ್ಕಾರ ಹಾಗೂ ವಿಜ್ಞಾನಿಗಳು ಅದನ್ನು ಒಪ್ಪಿಕೊಳ್ಳಬೇಕು. ಅದಕ್ಕೆ ಸರಿಯಾಗಿ ಕಾರ್ಯ-ನೀತಿಯನ್ನು ಬದಲಾಯಿಸಿಕೊಳ್ಳಬೇಕು. ಜನರಿಗೆ ಅದನ್ನು ವಿವರಿಸಬೇಕು. ಜನರು ಅರ್ಥ ಮಾಡಿಕೊಳ್ಳುತ್ತಾರೆ. ಹಿಂದೆ ಲಭ್ಯವಿದ್ದ ಮಾಹಿತಿಯನ್ನು ಆಧರಿಸಿ ಹಾಗೆ ಮಾಡಲಾಗಿತ್ತು. ಅದು ಆ ಪರಿಸ್ಥಿತಿಯಲ್ಲಿ ತೆಗೆದುಕೊಳ್ಳಬಹುದಾಗಿದ್ದ ಒಳ್ಳೆಯ ನಿರ್ಧಾರ ಅನ್ನುವುದು ಜನರಿಗೂ ಅರ್ಥವಾಗುತ್ತದೆ. ಆದರೆ ಅದು ತಪ್ಪು ಎಂದು ಗೊತ್ತಾದಾಗ ಆದಷ್ಟು ಬೇಗ ಅದನ್ನು ಸರಿಪಡಿಸಬೇಕು.

ವೈರಾಣುವಿನ ಪಿಡುಗು ನಮ್ಮ ಎದುರಿಗಿನ ಅತ್ಯಂತ ದೊಡ್ಡ ಅಪಾಯ ಅನ್ನುವುದು ಗೊತ್ತಿತ್ತು. ಅದನ್ನು ಎದುರಿಸಲು ತಾನು ಸಂಪೂರ್ಣ ತಯಾರಾಗಿದ್ದೇನೆ ಅಂತ ಇಂಗ್ಲೆಂಡ್ ಭಾವಿಸಿತ್ತು. ಆದರೆ ನಿಜವಾಗಿ ಸಿದ್ಧವಾಗಿರಲಿಲ್ಲ. ಅದು ಸ್ಪಷ್ಟ. ನಾವು ಈ ಪಿಡುಗಿಗೆ ಸಂಬಂಧಿಸಿದಂತೆ ನಮ್ಮ ಸೋಲು ಗೆಲುವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಅದರಿಂದ ಪಾಠ ಕಲಿಯಬೇಕು. ಆಗ ಮುಂದೆ ಅಂತಹ ಪಿಡುಗು ಮತ್ತೆ ಬಂದಾಗ- ಬರುವುದು ಅನಿವಾರ್ಯ- ಅದನ್ನು ಎದುರಿಸಲು ಹೆಚ್ಚು ಪರಿಣಾಮಕಾರಿಯಾಗಿ ಸಿದ್ದತೆ ಮಾಡಿಕೊಳ್ಳಬಹುದು.

ಕೃಪೆ: ದಿ ಗಾರ್ಡಿಯನ್

(ಲೇಖಕರು ರಸಾಯನಶಾಸ್ತ್ರದಲ್ಲಿ ನೋಬೆಲ್ ಪ್ರಶಸ್ತಿ ವಿಜೇತರು)


ಇದನ್ನೂ ಓದಿ: ಇದು ಅತ್ಯಾಚಾರದ ಕಥೆಯಲ್ಲ, ವಸಾಹತುವಾಗಿಯೇ ಉಳಿದಿರುವ ‘ಈ ಭಾರತ’ದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...