Homeಮುಖಪುಟಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

- Advertisement -
- Advertisement -

ಕಳೆದ ವಾರ ಲಡಾಕ್‌ನ ಗಾಲ್ವನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯ ಕುರಿತು “ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ” ಪ್ರಧಾನಿ ನರೇಂದ್ರ ಮೋದಿಯವರಿಗೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಎಚ್ಚರಿಕೆ ನೀಡಿದ್ದಾರೆ.

ಚೀನಾ ಯಾವುದೇ ಭಾರತೀಯ ಭೂಪ್ರದೇಶವನ್ನು ವಶಪಡಿಸಿಕೊಂಡಿಲ್ಲ ಅಥವಾ ಗಡಿ ದಾಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದನ್ನು ಖಂಡಿಸಿರುವ ಕಮಲ್ ಹಾಸನ್, ಈ ಕುರಿತು ಮೋದಿ ಪ್ರಶ್ನಿಸುವವರನ್ನು ಸರ್ಕಾರ ದೇಶದ್ರೋಹಿಗಳ ರೀತಿ ನೋಡುವುದು ಸರಿಯಿಲ್ಲ ಎಂದಿದ್ದಾರೆ.

“ಇಂತಹ ಹೇಳಿಕೆಗಳೊಂದಿಗೆ ಜನರನ್ನು ಭಾವನಾತ್ಮಕವಾಗಿ ಮರುಳು ಮಾಡುವುದರಲ್ಲಿ ಕಿಡಿಗೇಡಿತನವಿದೆ. ಅದನ್ನು ನಿಲ್ಲಿಸುವಂತೆ ನಾನು ಪ್ರಧಾನಿ ಮತ್ತು ಅವರ ಬೆಂಬಲಿಗರಲ್ಲಿ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ” ಎಂದು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥರು ತಿಳಿಸಿದ್ದಾರೆ.

“ಪ್ರಶ್ನೆಗಳನ್ನು ರಾಷ್ಟ್ರ ವಿರೋಧಿ ಎಂದು ಪರಿಗಣಿಸಲಾಗುವುದಿಲ್ಲ. ಪ್ರಶ್ನೆಗಳನ್ನು ಕೇಳುವ ಹಕ್ಕು ಪ್ರಜಾಪ್ರಭುತ್ವದ ಆಧಾರವಾಗಿದೆ ಮತ್ತು ನಾವು ಸತ್ಯವನ್ನು ತಿಳಿಸುವವರೆಗೂ ಕೇಳುತ್ತಲೇ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲವು ರಕ್ಷಣಾ ಮಾಹಿತಿಯನ್ನು ದೇಶದ ಜನತೆಗೆ ತಿಳಿಸಲಾಗುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೂ ನೀವು ಸೈನ್ಯವನ್ನು ಅನುಮಾನಿಸಬೇಡಿ ಮತ್ತು ದೇಶದ್ರೋಹಿ ಆಗಬೇಡಿ ಎಂದು ಹೇಳುವುದಕ್ಕಿಂತ ಉತ್ತಮ ಸಂವಹನ ವಿಧಾನಗಳನ್ನು ಅಳವಡಿಸಿಕೊಳ್ಳಿ. ನಾವೆಲ್ಲರೂ ಇದ್ದೇವೆ, ಸ್ವಲ್ಪ ಪಾರದರ್ಶಕತೆ ಮತ್ತು ಹೊಣೆಗಾರಿಕೆಯಿಂದ ವರ್ತಿಸಿ ಎಂದು ಕಮಲ್‌ ಹಾಸನ್ ಹೇಳಿದ್ದಾರೆ.

ಕಳೆದ ವಾರ ನಡೆದ ಹಿಂಸಾಚಾರದ ಅರ್ಥವೇನೆಂದರೆ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಪ್ರಧಾನಿ ಮೋದಿ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ನಡುವಿನ ಸಭೆಯ ನಂತರ ಸರ್ಕಾರವು ಹೇಳಿಕೊಂಡ ರಾಜತಾಂತ್ರಿಕ ಯಶಸ್ಸು ಟೊಳ್ಳಾಗಿತ್ತು ಅಲ್ಲವೇ ಎಂದು ಅವರು ಪ್ರಶ್ನಸಿದ್ದಾರೆ.

“ಎಂಟು ತಿಂಗಳ ನಂತರ, ನಮ್ಮ ನಿರಾಯುಧ ಸೈನಿಕರನ್ನು ಕೊಲ್ಲುವ ಮೂಲಕ ಚೀನಿಯರು ನಮ್ಮನ್ನು ಬೆನ್ನಿಗೆ ಇರಿದಿದ್ದಾರೆ. ಅದು ಸರ್ಕಾರದ ರಾಜತಾಂತ್ರಿಕತೆಯ ಫಲಿತಾಂಶವಾಗಿದ್ದರೆ, ಅವರ ತಂತ್ರವು ಶೋಚನೀಯವಾಗಿ ವಿಫಲವಾಗಿದೆ ಮತ್ತು ಅವರು ಚೀನೀಯರ ಉದ್ದೇಶಗಳನ್ನು ಸರಿಯಾಗಿ ಗ್ರಹಿಸಲು ವಿಫಲರಾಗಿದ್ದಾರೆ” ಎಂದು ಅವರು ಹೇಳಿದರು.

ಭಾರತೀಯ ಸೈನಿಕರ ಜೀವನವನ್ನು ಹೇಗೆ ಕಾಪಾಡಲಾಗುತ್ತಿದೆ ಎಂದು ತಿಳಿಸಬೇಕೆಂದು ಒತ್ತಾಯಿಸಿದ ಕಮಲ್ ಹಾಸನ್, ರಾಷ್ಟ್ರದ ಸಶಸ್ತ್ರ ಪಡೆಗಳು ವಿಶ್ವದ ಅತ್ಯುತ್ತಮವಾದವುಗಳಾಗಿವೆ. ಆದರೂ ಅವರ ಜೀವನವನ್ನು ಲಘುವಾಗಿ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...