Homeಮುಖಪುಟಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ : ಕಮಲ್ ಹಾಸನ್

- Advertisement -
- Advertisement -

ಕಳೆದ ವಾರ ಲಡಾಕ್‌ನ ಗಾಲ್ವನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಮುಖಾಮುಖಿಯ ಕುರಿತು “ಜನರನ್ನು ಭಾವನಾತ್ಮಕವಾಗಿ ಮರಳು ಮಾಡುವುದನ್ನು ನಿಲ್ಲಿಸಿ” ಪ್ರಧಾನಿ ನರೇಂದ್ರ ಮೋದಿಯವರಿಗೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಎಚ್ಚರಿಕೆ ನೀಡಿದ್ದಾರೆ.

ಚೀನಾ ಯಾವುದೇ ಭಾರತೀಯ ಭೂಪ್ರದೇಶವನ್ನು ವಶಪಡಿಸಿಕೊಂಡಿಲ್ಲ ಅಥವಾ ಗಡಿ ದಾಟಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಹೇಳಿದ್ದನ್ನು ಖಂಡಿಸಿರುವ ಕಮಲ್ ಹಾಸನ್, ಈ ಕುರಿತು ಮೋದಿ ಪ್ರಶ್ನಿಸುವವರನ್ನು ಸರ್ಕಾರ ದೇಶದ್ರೋಹಿಗಳ ರೀತಿ ನೋಡುವುದು ಸರಿಯಿಲ್ಲ ಎಂದಿದ್ದಾರೆ.

“ಇಂತಹ ಹೇಳಿಕೆಗಳೊಂದಿಗೆ ಜನರನ್ನು ಭಾವನಾತ್ಮಕವಾಗಿ ಮರುಳು ಮಾಡುವುದರಲ್ಲಿ ಕಿಡಿಗೇಡಿತನವಿದೆ. ಅದನ್ನು ನಿಲ್ಲಿಸುವಂತೆ ನಾನು ಪ್ರಧಾನಿ ಮತ್ತು ಅವರ ಬೆಂಬಲಿಗರಲ್ಲಿ ಪ್ರಾಮಾಣಿಕವಾಗಿ ವಿನಂತಿಸುತ್ತೇನೆ” ಎಂದು ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥರು ತಿಳಿಸಿದ್ದಾರೆ.

“ಪ್ರಶ್ನೆಗಳನ್ನು ರಾಷ್ಟ್ರ ವಿರೋಧಿ ಎಂದು ಪರಿಗಣಿಸಲಾಗುವುದಿಲ್ಲ. ಪ್ರಶ್ನೆಗಳನ್ನು ಕೇಳುವ ಹಕ್ಕು ಪ್ರಜಾಪ್ರಭುತ್ವದ ಆಧಾರವಾಗಿದೆ ಮತ್ತು ನಾವು ಸತ್ಯವನ್ನು ತಿಳಿಸುವವರೆಗೂ ಕೇಳುತ್ತಲೇ ಇರುತ್ತೇವೆ” ಎಂದು ಅವರು ಹೇಳಿದ್ದಾರೆ.

ಕೆಲವು ರಕ್ಷಣಾ ಮಾಹಿತಿಯನ್ನು ದೇಶದ ಜನತೆಗೆ ತಿಳಿಸಲಾಗುವುದಿಲ್ಲ ಎಂದು ನಮಗೆ ತಿಳಿದಿದೆ. ಆದರೂ ನೀವು ಸೈನ್ಯವನ್ನು ಅನುಮಾನಿಸಬೇಡಿ ಮತ್ತು ದೇಶದ್ರೋಹಿ ಆಗಬೇಡಿ ಎಂದು ಹೇಳುವುದಕ್ಕಿಂತ ಉತ್ತಮ ಸಂವಹನ ವಿಧಾನಗಳನ್ನು ಅಳವಡಿಸಿಕೊಳ್ಳಿ. ನಾವೆಲ್ಲರೂ ಇದ್ದೇವೆ, ಸ್ವಲ್ಪ ಪಾರದರ್ಶಕತೆ ಮತ್ತು ಹೊಣೆಗಾರಿಕೆಯಿಂದ ವರ್ತಿಸಿ ಎಂದು ಕಮಲ್‌ ಹಾಸನ್ ಹೇಳಿದ್ದಾರೆ.

ಕಳೆದ ವಾರ ನಡೆದ ಹಿಂಸಾಚಾರದ ಅರ್ಥವೇನೆಂದರೆ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಡೆದ ಪ್ರಧಾನಿ ಮೋದಿ ಮತ್ತು ಚೀನಾದ ಕ್ಸಿ ಜಿನ್‌ಪಿಂಗ್ ನಡುವಿನ ಸಭೆಯ ನಂತರ ಸರ್ಕಾರವು ಹೇಳಿಕೊಂಡ ರಾಜತಾಂತ್ರಿಕ ಯಶಸ್ಸು ಟೊಳ್ಳಾಗಿತ್ತು ಅಲ್ಲವೇ ಎಂದು ಅವರು ಪ್ರಶ್ನಸಿದ್ದಾರೆ.

“ಎಂಟು ತಿಂಗಳ ನಂತರ, ನಮ್ಮ ನಿರಾಯುಧ ಸೈನಿಕರನ್ನು ಕೊಲ್ಲುವ ಮೂಲಕ ಚೀನಿಯರು ನಮ್ಮನ್ನು ಬೆನ್ನಿಗೆ ಇರಿದಿದ್ದಾರೆ. ಅದು ಸರ್ಕಾರದ ರಾಜತಾಂತ್ರಿಕತೆಯ ಫಲಿತಾಂಶವಾಗಿದ್ದರೆ, ಅವರ ತಂತ್ರವು ಶೋಚನೀಯವಾಗಿ ವಿಫಲವಾಗಿದೆ ಮತ್ತು ಅವರು ಚೀನೀಯರ ಉದ್ದೇಶಗಳನ್ನು ಸರಿಯಾಗಿ ಗ್ರಹಿಸಲು ವಿಫಲರಾಗಿದ್ದಾರೆ” ಎಂದು ಅವರು ಹೇಳಿದರು.

ಭಾರತೀಯ ಸೈನಿಕರ ಜೀವನವನ್ನು ಹೇಗೆ ಕಾಪಾಡಲಾಗುತ್ತಿದೆ ಎಂದು ತಿಳಿಸಬೇಕೆಂದು ಒತ್ತಾಯಿಸಿದ ಕಮಲ್ ಹಾಸನ್, ರಾಷ್ಟ್ರದ ಸಶಸ್ತ್ರ ಪಡೆಗಳು ವಿಶ್ವದ ಅತ್ಯುತ್ತಮವಾದವುಗಳಾಗಿವೆ. ಆದರೂ ಅವರ ಜೀವನವನ್ನು ಲಘುವಾಗಿ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಈ ಚಿತ್ರ ಭಾರತ-ಚೀನಾ ಘರ್ಷಣೆಯಲ್ಲಿ ಗಾಯಗೊಂಡ ಭಾರತೀಯ ಯೋಧನದ್ದೇ ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...