Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...