Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...