Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...