Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...