Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...