Homeಚಳವಳಿಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

ಹಿಂದಿ ಹೇರಿಕೆಗೆ ಕಪಾಳ ಮೋಕ್ಷ: ’ಜೈ ಭೀಮ್’ ದೃಶ್ಯಕ್ಕೆ ದ್ರಾವಿಡ ಭಾಷಿಗರ ಮೆಚ್ಚುಗೆ

- Advertisement -
- Advertisement -

ದೇಶದಲ್ಲಿ ಹಿಂದಿ ಹೇರಿಕೆ ವಿರುದ್ಧ ಮೊದಲಿನಿಂದಲೂ ಗಟ್ಟಿಯಾಗಿ ಪ್ರತಿರೋಧ ಒಡ್ಡುತ್ತಿರುವುದು ತಮಿಳುನಾಡು. ದ್ರಾವಿಡ ಭಾಷೆಗಳಿಗೆ ಮನ್ನಣೆ ಸಿಗಬೇಕು. ಹಿಂದಿ ಹೇರಿಕೆ ಸಹಿಸುವುದಿಲ್ಲ ಎಂಬುದನ್ನು ಪ್ರತಿ ಬಾರಿಯು ಒಂದಲ್ಲ ಒಂದು ವೇದಿಕೆ ಮೂಲಕ ತಿಳಿಸುತ್ತಿದ್ದಾರೆ. ಇದನ್ನೇ ’ಜೈ ಭೀಮ್’ ಚಿತ್ರದಲ್ಲೂ ಅಳವಡಿಸಿದ್ದಾರೆ.

ಈ ಬಾರಿ ನಟ ಸೂರ್ಯ ಅಭಿನಯದ ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ’ಜೈ ಭೀಮ್’ ಚಿತ್ರದಲ್ಲಿ ಮತ್ತೆ ಹಿಂದಿ ಹೇರಿಕೆ ವಿರುದ್ಧ ಪ್ರತಿರೋಧ ವ್ಯಕ್ತವಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದೆ.

ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್ ಅವರು ಹಿಂದಿ ಭಾಷೆಯಲ್ಲಿ ಉತ್ತರ ನೀಡುವ ವ್ಯಕ್ತಿಯ ಕೆನ್ನೆಗೆ  ಹೊಡೆಯುವ ದೃಶ್ಯವೊಂದು ಜೈ ಭೀಮ್ ಚಿತ್ರದಲ್ಲಿದೆ. ಈ ದೃಶ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವು ಪರ ವಿರೋಧ ಚರ್ಚೆಗಳು ನಡೆಯುತ್ತಿದೆ.

ಇದನ್ನೂ ಓದಿ: ‘ಜೈ ಭೀಮ್’ಗೆ ಪ್ರಶಂಸೆಯ ಮಹಾಪೂರ: ಇಲ್ಲಿದೆ ಜನರ ಅಭಿಪ್ರಾಯ

ಚಿತ್ರದಲ್ಲಿ ಉನ್ನತ ಪೊಲೀಸ್ ಅಧಿಕಾರಿ ಪೆರುಮಾಳ್‌ಸ್ವಾಮಿ (ಪರಮೇಶ್ವರಪ್ಪ) ಪಾತ್ರ ನಿರ್ವಹಿಸಿರುವ ಪ್ರಕಾಶ್‌ ರಾಜ್ ಅವರು ಪಾತ್ರದಾರಿಯೊಬ್ಬರಿಂದ ಮಾಹಿತಿ ಪಡೆಯುವ ವೇಳೆ ಆತ ಹಿಂದಿಯಲ್ಲಿ ಉತ್ತರಿಸಲು ಪ್ರಯತ್ನಿಸುತ್ತಾರೆ. ಆಗ ಪ್ರಕಾಶ್ ರೈ ಪಾತ್ರಧಾರಿಗೆ ಕಪಾಳಕ್ಕೆ ಹೊಡೆಯುವ ದೃಶ್ಯ ಇದೆ. ಯಾಕೆ ನನಗೆ ಹೊಡೆಯುತ್ತೀರಿ ಎಂದು ಆತ ತಮಿಳಿನಲ್ಲೇ ಪ್ರಕಾಶ್ ರೈಗೆ ಪ್ರಶ್ನಿಸುತ್ತಾನೆ. ಆಗ ‘ತಮಿಳಿನಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಉತ್ತರಿಸುತ್ತಾರೆ.

ಈ ಸಿನಿಮಾದ ಕನ್ನಡ ಅವತರಣಿಕೆಯಲ್ಲಿ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಕನ್ನಡದಲ್ಲಿ ಮಾತಾಡು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ. ಇದೇ ಸಿನಿಮಾದ ತೆಲುಗು ಅವತರಣಿಕೆಯಲ್ಲಿ ‘ಯಾಕೆ ಕಪಾಳಕ್ಕೆ ಹೊಡೆಯುತ್ತೀರಿ’ ಎಂದು ತೆಲುಗಿನಲ್ಲೇ ಕೇಳಿದಾಗ ‘ತೆಲುಗಿನಲ್ಲಿ ಮಾತಾಡು’ ಎಂದು ಎಚ್ಚರಿಸುತ್ತಾರೆ ಪ್ರಕಾಶ್ ರೈ. ಮಲಯಾಳಂ ಅವತರಣಿಕೆಯಲ್ಲೂ ಇದೇ ರೀತಿಯ ಸಂಭಾಷಣೆ ಬಂದು ಹೋಗುತ್ತದೆ. ಈ ದೃಶ್ಯಗಳು ಈಗ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿವೆ.

ಟ್ವಿಟರ್‌ ಬಳಕೆದಾರ ಅಮಿತ್ ಕುಮಾರ್‌ ಅವರು, ’ಜೈ ಭೀಮ್‌ ಚಿತ್ರದಲ್ಲಿ ಹಿಂದಿ ಮಾತಾಡುವ ವ್ಯಕ್ತಿಗೆ ಹೊಡೆಯುವ ಮೂಲಕ ಪ್ರಕಾಶ್‌ ರಾಜ್ ಅವರ ಪ್ರಪೊಗಾಂಡಾದೊಂದಿಗೆ ಕಾಣಿಸಿಕೊಂಡಿದ್ದಾರೆ’ ಎಂದು ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್‌’ಗೆ ಫುಲ್ ಸ್ಟಾಪ್!

ಈ ಟ್ವೀಟ್‌ಗಳಿಗೆ ಟಾಂಗ್ ಕೊಟ್ಟಿರುವ ’ಹಿಂದಿ ಹೇರಿಕೆ ನಿಲ್ಲಿಸಿ’ (Stop hindi imposition) ಬಳಗ ಹಿಂದಿ ಚಿತ್ರಗಳಲ್ಲಿ ತಮಿಳು ಮಾತಾಡುವವರನ್ನು ಹೇಗೆ ಹಿಂದಿ ಮಾತಾಡುವಂತೆ ಒತ್ತಾಯಿಸಲಾಗುತ್ತದೆ ಎಂಬುದನ್ನು ವಿವರಿಸಿದ್ದಾರೆ.

“ರಕ್ತಸ್ರಾವವಾದಾಗ ಹಿಂದಿಯವರಿಗೆ ಬರುವುದು ರಕ್ತ ಮತ್ತು ಹಿಂದಿಯೇತರರಿಗೆ ಟೊಮೇಟೊ ಚಟ್ನಿ ಹರಿಯುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.
“ಸ್ಕ್ಯಾಮ್ 1992 ವೆಬ್ ಸರಣಿಯಲ್ಲಿ ಹಿಂದಿ ಗೊತ್ತಿಲ್ಲದ ಕಾರಣಕ್ಕಾಗಿ ಹಿಂದಿಯೇತರ ಭಾರತೀಯನಿಗೆ ಬೆದರಿಕೆ ಹಾಕುವುದು, ಬೆದರಿಸುವುದು ಸಂಪೂರ್ಣವಾಗಿ ಸರಿಯಾಗಿದೆ. ಆದರೆ ಜೈ ಭೀಮ್‌ ಚಿತ್ರದಲ್ಲಿ ಹಿಂದಿಯೇತರ ಭಾರತೀಯನೊಬ್ಬ ಹಿಂದಿಯವರಿಗೆ ಅದನ್ನೇ ಮಾಡಿದರೆ ನೋವಾಗುತ್ತದೆ” ಎಂದು ಎರಡು ಚಿತ್ರದ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಿಂದಿ ಹೇರಿಕೆ ವಿರುದ್ಧ ಇರುವ ಈ ದೃಶ್ಯವನ್ನು ಹಲವು ದ್ರಾವಿಡ ಭಾಷಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಇದಕ್ಕಿಂತ ಇನ್ನೆನ್ನು ಮನರಂಜನೆ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಈ ಸಿನಿಮಾ ಹಿಂದಿಯಲ್ಲಿಯೂ ಬಿಡುಗಡೆಯಾಗಿದೆ. ಆದರೆ, ಹಿಂದಿ ಅವತರಣಿಕೆಯ ಈ ದೃಶ್ಯದ, ಯಾಕೆ ಸಾರ್ ಹೊಡೆದಿದ್ದು ಎಂದು ಆತ ಕೇಳುತ್ತಾನೆ. ‘ಸತ್ಯ ಹೇಳು’ ಎಂದು ಪ್ರಕಾಶ್ ರೈ ಎಚ್ಚರಿಸುತ್ತಾರೆ.

ದ್ರಾವಿಡ ಭಾಷೆಗಳ ಮೇಲೆ ಹಿಂದಿ ಹೇರಿಕೆ ಮಾಡಿರುವುದನ್ನು ಪ್ರತಿ ಹಂತದಲ್ಲೂ ವಿರೋಧಿಸಲಾಗುತ್ತಿದ್ದು, ಹಿಂದಿ ದಿವಸ್ ಆಚರಣೆಗೂ ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.


ಇದನ್ನೂ ಓದಿ: ‘ಜೈ ಭೀಮ್‌’ ನಂತಹ ಮತ್ತಷ್ಟು ಚಿತ್ರಗಳು ಬರಲಿ: ಚಿತ್ರತಂಡಕ್ಕೆ ತಮಿಳುನಾಡು ಸಿಎಂ ಸ್ಟಾಲಿನ್ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...