Homeಕರ್ನಾಟಕಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಲು ಕರ್ನಾಟಕ ಜನಾಧಿಕಾರ ಪಕ್ಷ ಸಜ್ಜಾಗಿದೆ

- Advertisement -
- Advertisement -

ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಹಲವಾರು ಕನ್ನಡಪರ ಸಂಘಟನೆಗಳು ಅಂದು, ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಾಧಿಕಾರ ಪಕ್ಷ ಈ ಬಗ್ಗೆ ಹೇಳಿಕೆಗಳನ್ನು ನೀಡಿವೆ.

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 12 ಗಂಟೆಗಳು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

’ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

Image

ಸೆ. 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್‌ಗಳ ಮುಂಭಾಗ ಏಕಕಾಲಕ್ಕೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ.

ಟ್ವಿಟರ್, ಫೇಸ್ ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜೊತೆಗೆ ಬೆಳಿಗ್ಗೆ ಹತ್ತು ಗಂಟೆಯಿಂದ ಕ್ಲಬ್ ಹೌಸ್‌ನ ಕರ್ನಾಟಕ ರಕ್ಷಣಾ ವೇದಿಕೆ ಗುಂಪಿನಲ್ಲಿ ಸಾವಿರಾರು ಪ್ರತಿಭಟನೆಗಳ ಲೈವ್ ಕಮೆಂಟರಿ ಕೂಡ ಇರುತ್ತದೆ ಎಂದು ಕರವೇ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಇನ್ನು, ಹಿಂದಿ ಪ್ರಚಾರ ದಿವಸ ಆಚರಣೆಯನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಜನಾಧಿಕಾರ ಪಕ್ಷದ ಹರೀಶ್ ಕುಮಾರ್ ಬಿ ತಿಳಿಸಿದ್ದಾರೆ.

“ಹಿಂದಿ ಹೇರಿಕೆಯನ್ನ ಶುರು ಮಾಡಿದ್ದು ಕಾಂಗ್ರೆಸ್ ಪಕ್ಷ. ಆ ಹೇರಿಕೆಯನ್ನು ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ನಡೆಸುತ್ತಿರುವುದು ಬಿಜೆಪಿ. ಪರೀಕ್ಷೆಗಳಂತೂ ಕನ್ನಡದಲ್ಲಿಲ್ಲ, ಕೇಂದ್ರ ಸರ್ಕಾರದ ಕೆಲಸಗಳ ಜಾಹೀರಾತುಗಳನ್ನು ಕನ್ನಡ ಪತ್ರಿಕೆಗಳಲ್ಲಿ ಹಿಂದಿಯಲ್ಲಿ ಕೊಡ್ತಾರೆ ಅಂದ್ರೆ ಇದನ್ನ ಹೇರಿಕೆ, ದಬ್ಬಾಳಿಕೆಯೆನ್ನದೆ ಏನೆನ್ನಬೇಕು? ಹಿಂದಿ ಹೇರಿಕೆ ವಿಚಾರದಲ್ಲಿ, ಕನ್ನಡ ನಾಡಿಗೆ ಅನ್ಯಾಯಗಳ ವಿಚಾರಗಳಲ್ಲಿ ಈ ಕಾಂಗ್ರೆಸ್ ಬಿಜೆಪಿ ಇಬ್ಬರೂ ಒಂದೇ” ಎಂದು ಹರೀಶ್ ಕುಮಾರ್ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರೋಧಿಸಿ ಕರಾಳ ದಿನ: ಸೆ.14 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...