Homeಕರ್ನಾಟಕಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಲು ಕರ್ನಾಟಕ ಜನಾಧಿಕಾರ ಪಕ್ಷ ಸಜ್ಜಾಗಿದೆ

- Advertisement -
- Advertisement -

ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಹಲವಾರು ಕನ್ನಡಪರ ಸಂಘಟನೆಗಳು ಅಂದು, ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಾಧಿಕಾರ ಪಕ್ಷ ಈ ಬಗ್ಗೆ ಹೇಳಿಕೆಗಳನ್ನು ನೀಡಿವೆ.

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 12 ಗಂಟೆಗಳು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

’ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

Image

ಸೆ. 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್‌ಗಳ ಮುಂಭಾಗ ಏಕಕಾಲಕ್ಕೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ.

ಟ್ವಿಟರ್, ಫೇಸ್ ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜೊತೆಗೆ ಬೆಳಿಗ್ಗೆ ಹತ್ತು ಗಂಟೆಯಿಂದ ಕ್ಲಬ್ ಹೌಸ್‌ನ ಕರ್ನಾಟಕ ರಕ್ಷಣಾ ವೇದಿಕೆ ಗುಂಪಿನಲ್ಲಿ ಸಾವಿರಾರು ಪ್ರತಿಭಟನೆಗಳ ಲೈವ್ ಕಮೆಂಟರಿ ಕೂಡ ಇರುತ್ತದೆ ಎಂದು ಕರವೇ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಇನ್ನು, ಹಿಂದಿ ಪ್ರಚಾರ ದಿವಸ ಆಚರಣೆಯನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಜನಾಧಿಕಾರ ಪಕ್ಷದ ಹರೀಶ್ ಕುಮಾರ್ ಬಿ ತಿಳಿಸಿದ್ದಾರೆ.

“ಹಿಂದಿ ಹೇರಿಕೆಯನ್ನ ಶುರು ಮಾಡಿದ್ದು ಕಾಂಗ್ರೆಸ್ ಪಕ್ಷ. ಆ ಹೇರಿಕೆಯನ್ನು ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ನಡೆಸುತ್ತಿರುವುದು ಬಿಜೆಪಿ. ಪರೀಕ್ಷೆಗಳಂತೂ ಕನ್ನಡದಲ್ಲಿಲ್ಲ, ಕೇಂದ್ರ ಸರ್ಕಾರದ ಕೆಲಸಗಳ ಜಾಹೀರಾತುಗಳನ್ನು ಕನ್ನಡ ಪತ್ರಿಕೆಗಳಲ್ಲಿ ಹಿಂದಿಯಲ್ಲಿ ಕೊಡ್ತಾರೆ ಅಂದ್ರೆ ಇದನ್ನ ಹೇರಿಕೆ, ದಬ್ಬಾಳಿಕೆಯೆನ್ನದೆ ಏನೆನ್ನಬೇಕು? ಹಿಂದಿ ಹೇರಿಕೆ ವಿಚಾರದಲ್ಲಿ, ಕನ್ನಡ ನಾಡಿಗೆ ಅನ್ಯಾಯಗಳ ವಿಚಾರಗಳಲ್ಲಿ ಈ ಕಾಂಗ್ರೆಸ್ ಬಿಜೆಪಿ ಇಬ್ಬರೂ ಒಂದೇ” ಎಂದು ಹರೀಶ್ ಕುಮಾರ್ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರೋಧಿಸಿ ಕರಾಳ ದಿನ: ಸೆ.14 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...