Homeಕರ್ನಾಟಕಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಲು ಕರ್ನಾಟಕ ಜನಾಧಿಕಾರ ಪಕ್ಷ ಸಜ್ಜಾಗಿದೆ

- Advertisement -
- Advertisement -

ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಆಚರಣೆಗೆ ವಿರೋಧ ವ್ಯಕ್ತಪಡಿಸಿರುವ ಹಲವಾರು ಕನ್ನಡಪರ ಸಂಘಟನೆಗಳು ಅಂದು, ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿವೆ. ಈಗಾಗಲೇ ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಜನಾಧಿಕಾರ ಪಕ್ಷ ಈ ಬಗ್ಗೆ ಹೇಳಿಕೆಗಳನ್ನು ನೀಡಿವೆ.

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸತತ 12 ಗಂಟೆಗಳು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್‌ಟ್ಯಾಗ್ ಅಡಿಯಲ್ಲಿ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದೆ.

’ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಕನ್ನಡಿಗರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡಿಗರಿಗೆ ಹಿಂದಿ ದಿವಸ ಬೇಕಾಗಿಲ್ಲ; ರಾಜ್ಯಾದ್ಯಂತ ಪ್ರತಿಭಟನೆಗೆ ಕರವೇ ಸಜ್ಜು: ನಾರಾಯಣಗೌಡ

Image

ಸೆ. 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್‌ಗಳ ಮುಂಭಾಗ ಏಕಕಾಲಕ್ಕೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ.

ಟ್ವಿಟರ್, ಫೇಸ್ ಬುಕ್, ಇನ್ಸ್ಟಾಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜೊತೆಗೆ ಬೆಳಿಗ್ಗೆ ಹತ್ತು ಗಂಟೆಯಿಂದ ಕ್ಲಬ್ ಹೌಸ್‌ನ ಕರ್ನಾಟಕ ರಕ್ಷಣಾ ವೇದಿಕೆ ಗುಂಪಿನಲ್ಲಿ ಸಾವಿರಾರು ಪ್ರತಿಭಟನೆಗಳ ಲೈವ್ ಕಮೆಂಟರಿ ಕೂಡ ಇರುತ್ತದೆ ಎಂದು ಕರವೇ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಇನ್ನು, ಹಿಂದಿ ಪ್ರಚಾರ ದಿವಸ ಆಚರಣೆಯನ್ನು ವಿರೋಧಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸುತ್ತೇವೆ ಎಂದು ಕರ್ನಾಟಕ ಜನಾಧಿಕಾರ ಪಕ್ಷದ ಹರೀಶ್ ಕುಮಾರ್ ಬಿ ತಿಳಿಸಿದ್ದಾರೆ.

“ಹಿಂದಿ ಹೇರಿಕೆಯನ್ನ ಶುರು ಮಾಡಿದ್ದು ಕಾಂಗ್ರೆಸ್ ಪಕ್ಷ. ಆ ಹೇರಿಕೆಯನ್ನು ಅತ್ಯಂತ ವೇಗವಾಗಿ, ವ್ಯವಸ್ಥಿತವಾಗಿ ನಡೆಸುತ್ತಿರುವುದು ಬಿಜೆಪಿ. ಪರೀಕ್ಷೆಗಳಂತೂ ಕನ್ನಡದಲ್ಲಿಲ್ಲ, ಕೇಂದ್ರ ಸರ್ಕಾರದ ಕೆಲಸಗಳ ಜಾಹೀರಾತುಗಳನ್ನು ಕನ್ನಡ ಪತ್ರಿಕೆಗಳಲ್ಲಿ ಹಿಂದಿಯಲ್ಲಿ ಕೊಡ್ತಾರೆ ಅಂದ್ರೆ ಇದನ್ನ ಹೇರಿಕೆ, ದಬ್ಬಾಳಿಕೆಯೆನ್ನದೆ ಏನೆನ್ನಬೇಕು? ಹಿಂದಿ ಹೇರಿಕೆ ವಿಚಾರದಲ್ಲಿ, ಕನ್ನಡ ನಾಡಿಗೆ ಅನ್ಯಾಯಗಳ ವಿಚಾರಗಳಲ್ಲಿ ಈ ಕಾಂಗ್ರೆಸ್ ಬಿಜೆಪಿ ಇಬ್ಬರೂ ಒಂದೇ” ಎಂದು ಹರೀಶ್ ಕುಮಾರ್ ಕಿಡಿಕಾರಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರೋಧಿಸಿ ಕರಾಳ ದಿನ: ಸೆ.14 ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...