Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....