Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...